mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header

Friday, 7 May 2021

2020ರ ಸಾಲಿನ 30ನೇ ಸರಸ್ವತಿ ಸಮ್ಮಾನ್ ಸಾಹಿತ್ಯ ಪ್ರಶಸ್ತಿ


     2020ರ ಸಾಲಿನ 30ನೇ ಸರಸ್ವತಿ ಸಮ್ಮಾನ್ ಸಾಹಿತ್ಯ ಪ್ರಶಸ್ತಿಗೆ ಮರಾಠಿ ಲೇಖಕ ಶರಣ್‌ಕುಮಾರ್ ಅಂಬಾಲೆ ಅವರ ಸನಾತನ ಕೃತಿಯು ಆಯ್ಕೆಯಾಗಿದೆ. ಈ ಮೂಲಕ ಅಂಬಾಲೆ ಅವರು 15 ಲಕ್ಷ ರೂ. ನಗದು ಮತ್ತು ಸ್ಮರಣಿಕೆಯನ್ನು ಪಡೆಯಲಿದ್ದಾರೆ. 2018 ರಲ್ಲಿ ಅಡುಗಡೆಯಾಗಿರುವ ಸನಾತನ ಕೃತಿಯು ದಂತ ಹೋರಾಟದ ಸಾಮಾಜಿಕ ಮತ್ತು ಐತಿಹಾಸಿಕ ದಾಖಲೆಯಾಗಿ ಮಹತ್ವತೆಯನ್ನು ಪಡೆದಿದೆ. ಕೆ.ಕೆ. ಜರ್ಲಾ ಪೌಂಡೇಷನ್ ಸಂಸ್ಥೆಯು ಪ್ರತೀ ವರ್ಷ ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಕೃತಿಗಳಿಗೆ ಸರಸ್ವತಿ ಸಮ್ಮಾನ್ ಪ್ರಶಸ್ತಿಗಳನ್ನು ನೀಡುತ್ತಿದೆ. 2019ನೇ ಸಾಲಿನ 29ನೇ ಸರಸ್ವತಿ ಸಮ್ಮಾನ್ ಪ್ರಶಸ್ತಿಯನ್ನು ಹಿಂದಿ ಸಾಹಿತಿ ವಾಸುದೇವರವರ ಕೃತಿಗೆ ಚೆಕ್ ಬುಕ್ ನೀಡಲಾಗಿತ್ತು


ಸರಸ್ವತಿ ಸಮ್ಮಾನ್ ಪ್ರಶಸ್ತಿ - ಸಾಹಿತ್ಯ ಕ್ಷೇತ್ರದ ಪ್ರಶಸ್ತಿ 

*ಆರಂಭ: 1991 (ಕೃಷ್ಣ ಕುಮಾರ್ ಬಿರ್ಲಾ ಅವರಿಂದ ನವದೆಹಲಿಯಲ್ಲಿ ಆರಂಭ)


* ಸ್ಥಾಪಕರು: ಕೆ.ಕೆ. ಬಿರ್ಲಾ ಫೌಂಡೇಷನ್ * ಪ್ರಶಸ್ತಿಯ ಅರ್ಹತೆ: ಸಂವಿಧಾನದ 8ನೇ ಅನುಸೂಚಿಯಲ್ಲಿರುವ 22 ಭಾಷೆಗಳ ಉತ್ತಮ ಸಾಹಿತ್ಯ ರಚನೆಯ ಕೃತಿಗಳಿಗೆ ನೀಡಲಾಗುತ್ತದೆ.


* ಪ್ರಶಸ್ತಿಯ ಮೊತ್ತ : 15 ಲಕ್ಷ ರೂ. ನಗದು, ಪ್ರಶಸ್ತಿ ಪತ್ರ, ಫಲಕ.


ಶರಣಕುಮಾರ ಲಿಂಬಾಲೆ ಬಗ್ಗೆ ಮಾಹಿತಿ

      2020ರ ಸಾಲಿನ ಸರಸ್ವತಿ ಸಮ್ಮಾನ್ ಪ್ರಶಸ್ತಿಗೆ ಆಯ್ಕೆಯದ ಶರಣ್ ಕುಮಾರ್ (Sharankumar Limbale) ಅವರು ಮರಾಠಿ ಭಾಷೆಯ ಲೇಖಕ, ಕವಿ ಮತ್ತು ಸಾಹಿತ್ಯ ವಿಮರ್ಶಕ, ಮರಾಠಿ ದಲಿತ ಸಾಹಿತ್ಯ ಮತ್ತು ಅಮೆರಿಕಾದ ಕಪ್ಪು ಸಾಹಿತ್ಯದ ನಡುವಿನ ಹೋಲಿಕೆಗಾಗಿ ಇವರು ಕೊಲ್ಲಾಪುರದ ಶಿವಾಜಿ ವಿಶ್ವವಿದ್ಯಾಲಯದಿಂದ ಪಿಹೆಚ್.ಡಿ ಪದವಿಯನ್ನು ಪಡೆದಿದ್ದರು. 40ಕ್ಕೂಹೆಚ್ಚು ಪುಸ್ತಕಗಳನ್ನು ಇವರು ಬರೆದಿದ್ದಾರೆ.


ಇವರ ಆತ್ಮಚರಿತ್ರೆಯಾದ Akkarmashi ಎಂಬುದು ಇಂಗ್ಲಿಷ್ ಭಾಷೆ ಸೇರಿದಂತೆ ಹಲವು ಭಾಷೆಗಳಿಗೆ ಭಾಷಾಂತರಗೊಂಡಿದೆ.


ಸನಾತನ ಕೃತಿಯ ಬಗ್ಗೆ ಮಾಹಿತಿ:-

       ಮರಾಠಿ ಲೇಖಕ ಶರಣ್‌ಕುಮಾರ್‌ ಅವರಿಂದ ಮರಾಠಿ ಭಾಷೆಯಲ್ಲಿ ರಚಿತವಾದ ಸನಾತನ ಕಾದಂಬರಿಯು 2018 ರಲ್ಲಿ ಪ್ರಕಟಗೊಂಡಿತ್ತು. ಇದು ದಲಿತ ಹೋರಾಟದ ಸಾಮಾಜಿಕ ಮತ್ತು ಐತಿಹಾಸಿಕ ಘಟನೆಗಳನ್ನು ತಿಳಿಸುವುದು. 2020ರ ಸರಸ್ವತಿ ಸಮ್ಮಾನ್ ಪ್ರಶಸ್ತಿಗೆ ಈ ಕಾದಂಬರಿ ಆಯ್ಕೆಯಾಗಿರುವುದು ವಿಶೇಷವಾಗಿದೆ. ಸನಾತನ ಕಾದಂಬರಿಯು ಅಸ್ಪೃಶ್ಯರ ಸಾಮಾಜಿಕ, ಸಾಂಸ್ಕೃತಿಕ ಹೋರಾಟದ ಕಥೆಯನ್ನು ವಿಶೇಷ ಶೈಲಿಯಲ್ಲಿ ಬಿಂಬಿಸಿದೆ. ಲೋಕಸಭಾ ಮಾಜಿ ಸೆಕ್ರೆಟರಿ ಜನರಲ್ ಸುಭಾಷ್ ಕಶ್ಯಪ್ ಅವರ ನೇತೃತ್ವದ ವಿದ್ವಾಂಸರ ಆಯ್ಕೆ ಸಮಿತಿಯು ಲಿಂಬಾಲೆ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.


ಸರಸ್ವತಿ ಸಮ್ಮಾನ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಸಾಹಿತಿಗಳು

         ಎಸ್.ಎಲ್. ಭೈರಪ್ಪ: ಕನ್ನಡದ ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪರವರ 'ಮಂದ್ರಾ' ಕೃತಿಗೆ 2010ನೇ ಸಾಲಿನ ಸರಸ್ವತಿ ಸಮ್ಮಾನ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಮೂಲಕ ಎಸ್.ಎಲ್. ಭೈರಪ್ಪನವರು ಸರಸ್ವತಿ ಸಮ್ಮಾನ್ ಪ್ರಶಸ್ತಿಗೆ ಭಾಜನರಾದ ಮೊದಲ ಕನ್ನಡ ಸಾಹಿತಿ, 2016 ರಲ್ಲಿ ಕೇಂದ್ರ ಸರ್ಕಾರವು ಪದ್ಮಶ್ರೀ ಗೌರವವನ್ನು ನೀಡಿ ಗೌರವಿಸಿದೆ. 2017 ಕ.ಸಾ.ಪ ಮತ್ತು ಬಿಎಂಟಿಸಿ ಸಹಭಾಗಿತ್ವದಲ್ಲಿ ನೀಡುವ ನೃಪತುಂಗ ಪ್ರಶಸ್ತಿ ಲಭಿಸಿತ್ತು. 2020 ರಲ್ಲಿ ಕರ್ನಾಟಕ ಕೇಂದ್ರೀಯ ವಿವಿಯು ಇವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಭಿತ್ತಿ ಎಂಬುದು ಭೈರಪ್ಪ ಅವರ ಆತ್ಮಚರಿತ್ರೆಯಾಗಿದೆ. 2020ರ ಅಕ್ಟೋಬರ್‌ನಲ್ಲಿ ಇವರ ಅಂಚು ಕಾದಂಬರಿಯು ಇಂಗ್ಲಿಷ್‌ಗೆ ಆರ್‌.ರಂಗನಾಥ್ ಪ್ರಸಾದ್ ಅವರಿಂದ ಭಾಷಾಂತರಗೊಂಡಿದೆ.


ಎಂ. ವೀರಪ್ಪ ಮೊಯ್ಲಿ: ಕನ್ನಡದ ಸಾಹಿತಿ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿರವರ “ಶ್ರೀ ರಾಮಾಯಣ ಮಹಾನ್ವೇಷಣಂ” ಕೃತಿಗೆ 2014ನೇ ಸಾಲಿನ ಸರಸ್ವತಿ ಸಮ್ಮಾನ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಮೂಲಕ ಎಂ.ವೀರಪ್ಪ ಮೊಯ್ಲಿ ಅವರು ಸರಸ್ವತಿ ಸಮ್ಮಾನ್ ಪ್ರಶಸ್ತಿ ಪಡೆದ ಕನ್ನಡದ 2ನೇ ಸಾಹಿತಿ ಎನಿಸಿದ್ದಾರೆ. ವೀರಪ್ಪ ಮೊಯ್ಲಿ ಅವರ ಬಾಹುಬಲಿ ಅಹಿಂಸಾ ದಿಗ್ವಿಜಯಂ ಮಹಾಕಾವ್ಯಕ್ಕೆ 2020ರ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. 2007 ರಲ್ಲಿ ರಾಮಾಯಣ ಮಹಾನ್ವೇಷಣಂ ಕೃತಿಗೆ ಮೂರ್ತಿದೇವಿ ಪ್ರಶಸ್ತಿ ಲಭಿಸಿದೆ.


ಕೆ.ಕೆ.ಜರ್ಲಾ ಫೌಂಡೇಷನ್

        ಕೃಷ್ಣಕುಮಾರ್ ಬಿರ್ಲಾ ಅವರಿಂದ 1991ರಲ್ಲಿ ದೆಹಲಿಯಲ್ಲಿ ಕೆ.ಕೆ.ಬಿರ್ಲಾ ಪೌಂಡೇಷನ್ ಸ್ಥಾಪನೆಗೊಂಡಿತು. ಈ ಫೌಂಡೇಷನ್ ಮೂಲಕ ಸಾಹಿತ್ಯದ ಉತ್ತೇಜನ, ಕಲೆ, ಶಿಕ್ಷಣ, ಸಾಮಾಜಿಕ ಸೇವೆ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ KRISHNMAR BIRLA ಗಣನೀಯ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿಯನ್ನು ನೀಡಿ ಪ್ರೋತ್ಸಾಹಿಸಲಾಗುತ್ತದೆ.

      ಈ ಸಂಸ್ಥೆ ವತಿಯಿಂದ ನೀಡಲಾಗುವ ಪ್ರಮುಖ ಪ್ರಶಸ್ತಿಗಳು: ಸರಸ್ವತಿ ಸಮ್ಮಾನ್, ವ್ಯಾಸ ಸಮ್ಮಾನ್, ಬಿಹಾರಿ ಪುರಸ್ಕಾರ್, ಶಂಕರ್ ಪುರಸ್ಕಾರ್‌, ವಾಚಸ್ಪತಿ ಪುರಸ್ಕಾರ, ವೈಜ್ಞಾನಿಕ ಸಂಶೋಧನೆಗೆ ಜಿ.ಡಿ.ಬಿರ್ಲಾ ಪ್ರಶಸ್ತಿ ನೀಡಲಾಗುತ್ತದೆ.


No comments:

Post a Comment

Blog Archive

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

ಭಾರತದ ನೆರೆಯ ರಾಷ್ಟ್ರಗಳು, ಪಟ್ಟಿ, ನಕ್ಷೆ, ರಾಜಧಾನಿಗಳು, ಧ್ವಜಗಳು

ಭಾರತದ ನೆರೆಯ ರಾಷ್ಟ್ರಗಳು ಚೀನಾ, ನೇಪಾಳ, ಭೂತಾನ್, ಪಾಕಿಸ್ತಾನ, ಮ್ಯಾನ್ಮಾರ್, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ. UPSC ಗಾಗಿ ಭಾರತದ ನೆರೆಯ ರಾಷ್ಟ್ರಗಳು ಮತ್ತು ಅವುಗಳ ರಾಜಧಾನಿಗಳ ಸಂಪೂರ್ಣ ವಿವರಗಳನ್ನು ಪರಿಶೀಲಿಸಿ     ಪರಿವಿಡಿ ಭಾರತದ ನೆರೆಯ ರಾಷ್ಟ್ರಗಳು ವಿಶ್ವದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾದ ಭಾರತವು ಅರೇಬಿಯನ್ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಸಮೀಪದಲ್ಲಿದೆ. ಚೀನಾ, ನೇಪಾಳ, ಭೂತಾನ್, ಪಾಕಿಸ್ತಾನ, ಮ್ಯಾನ್ಮಾರ್, ಶ್ರೀಲಂಕಾ ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಭಾರತದ ಗಡಿಯಲ್ಲಿರುವ ದೇಶಗಳು. ಮ್ಯಾನ್ಮಾರ್ ಮತ್ತು ಶ್ರೀಲಂಕಾ ಭಾರತದೊಂದಿಗೆ ಕರಾವಳಿ ಗಡಿಯನ್ನು ಹಂಚಿಕೊಂಡಿವೆ. ಭಾರತದ ಭೂ ಗಡಿಯು 15,106.7 ಕಿಮೀ ಉದ್ದವಾಗಿದೆ ಮತ್ತು ಅದರ ಕರಾವಳಿ 7,516.6 ಕಿಮೀ ಉದ್ದವಾಗಿದೆ. ಏಕೈಕ ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ಚೀನಾ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದೊಂದಿಗೆ ಮೂರು ಅಂತಾರಾಷ್ಟ್ರೀಯ ಗಡಿಗಳನ್ನು ಹಂಚಿಕೊಂಡಿದೆ. ಈ ಲೇಖನದಲ್ಲಿ ನಾವು ಭಾರತದ ಗಡಿಯಲ್ಲಿರುವ ನೆರೆಯ ದೇಶಗಳ ಪಟ್ಟಿಯನ್ನು ಒದಗಿಸುತ್ತಿದ್ದೇವೆ. ಚೀನಾ ಮತ್ತು ರಷ್ಯಾ ನಂತರ, ಭಾರತವು ವಿಶ್ವದ ಮೂರನೇ ಅತಿದೊಡ್ಡ ಅಂತರರಾಷ್ಟ್ರೀಯ ಗಡಿಯನ್ನು ಹೊಂದಿದೆ. ಇದು ವಿಶ್ವದ ಅತ್ಯಂತ ದುರ್ಬಲ ಗಡಿಯಾಗಿದೆ, ತೀವ್ರ ಹವಾಮಾನ ಪರಿಸ್ಥಿತಿಗಳಿಂದ ಒಳನುಸುಳುವಿಕ...

ಭಾರತದಲ್ಲಿನ ಒಟ್ಟು ರಾಷ್ಟ್ರೀಯ ಉದ್ಯಾನಗಳು ನಕ್ಷೆ, ರಾಜ್ಯವಾರು ಪಟ್ಟಿ Total National Parks in India

    ಭಾರತದಲ್ಲಿ ರಾಷ್ಟ್ರೀಯ ಉದ್ಯಾನವನಗಳು: ಭಾರತದಲ್ಲಿ 106 ರಾಷ್ಟ್ರೀಯ ಉದ್ಯಾನವನಗಳು 44,378 ಚ.ಕಿ.ಮೀ. ಭಾರತದಲ್ಲಿ ರಾಷ್ಟ್ರೀಯ ಉದ್ಯಾನವನಗಳ ಪಟ್ಟಿ  , ನಕ್ಷೆ , UPSC ಪರೀಕ್ಷೆಗಾಗಿ ಭಾರತದ ರಾಷ್ಟ್ರೀಯ ಉದ್ಯಾನವನಗಳ ರಾಜ್ಯವಾರು ಪಟ್ಟಿ.   ಪರಿವಿಡಿ   ಭಾರತದಲ್ಲಿ ರಾಷ್ಟ್ರೀಯ ಉದ್ಯಾನವನಗಳು ಭಾರತದಲ್ಲಿ ರಾಷ್ಟ್ರೀಯ ಉದ್ಯಾನಗಳು 2023 : ಭಾರತವು ವೈವಿಧ್ಯಮಯ ಜಾತಿಗಳನ್ನು ಹೊಂದಿರುವ ರಾಷ್ಟ್ರವಾಗಿದೆ. ನಮ್ಮಲ್ಲಿ ವೈವಿಧ್ಯಮಯ ಸಸ್ಯಗಳು ಮತ್ತು ಪ್ರಾಣಿಗಳಿವೆ. ಇಂಡೋ-ಹಿಮಾಲಯನ್ ಪರಿಸರ ವಲಯವು ಸರಿಸುಮಾರು 6.2 ಪ್ರತಿಶತ ಸರೀಸೃಪಗಳು , 7.6 ಪ್ರತಿಶತ ಸಸ್ತನಿಗಳು , 6.0 ಪ್ರತಿಶತ ಹೂಬಿಡುವ ಸಸ್ಯಗಳು ಮತ್ತು 12.6 ಪ್ರತಿಶತ ಪಕ್ಷಿ ಪ್ರಭೇದಗಳನ್ನು ಒಳಗೊಂಡಿದೆ. ಅರಣ್ಯದ ವ್ಯಾಪ್ತಿಯು ಹಿಮಾಲಯ ಪ್ರದೇಶದಲ್ಲಿನ ಕೋನಿಫೆರಸ್ ಕಾಡುಗಳು ಮತ್ತು ಈಶಾನ್ಯ ಭಾರತ , ಪಶ್ಚಿಮ ಘಟ್ಟಗಳು ಮತ್ತು ಉಷ್ಣವಲಯದ ಉಷ್ಣವಲಯದ ಮಳೆಕಾಡುಗಳನ್ನು ಒಳಗೊಂಡಿದೆ.   ಭಾರತದ ನದಿಗಳು ,   ನಕ್ಷೆ ,   ಪಟ್ಟಿ ,   ಹೆಸರು ,   ಭಾರತದ ಉದ್ದವಾದ ನದಿಗಳು ಭಾರತದ ರಾಷ್ಟ್ರೀಯ ಉದ್ಯಾನಗಳ ಪಟ್ಟಿ ಭಾರತದಲ್ಲಿನ ರಾಷ್ಟ್ರೀಯ ಉದ್ಯಾನವನಗಳ ಸಂಪೂರ್ಣ ರಾಜ್ಯವಾರು ಪಟ್ಟಿ ಇಲ್ಲಿದೆ :   ಸ.ನಂ.    ರಾಜ್ಯ ( NP ಗಳ ಸಂಖ್ಯೆ)   ಭಾರತದಲ್ಲಿ ರಾಷ್ಟ್ರೀಯ ಉದ್ಯಾ...

ಅಲಿಪ್ತ ಚಳವಳಿ (NAM)

The Non Aligned Movement (NAM) ಸ್ಥಾಪನೆಯ ದಿನಾಂಕ:  1961 ಪ್ರಧಾನ ಕಛೇರಿ:  ಬೆಲ್‌ಗ್ರೇಡ್ ಸದಸ್ಯ ರಾಷ್ಟ್ರಗಳು:  120 ರಂತೆ 2012 ಯುಗೊಸ್ಲಾವಿಯನ್ ಅಧ್ಯಕ್ಷ ಟಿಟೊ ಅವರ ಉಪಕ್ರಮದ ಮೂಲಕ ಸೆಪ್ಟೆಂಬರ್ 1961 ರಲ್ಲಿ ಬೆಲ್‌ಗ್ರೇಡ್‌ನಲ್ಲಿ 25 ದೇಶಗಳನ್ನು ಪ್ರತಿನಿಧಿಸುವ ಅಲಿಪ್ತ ರಾಷ್ಟ್ರಗಳ ಮುಖ್ಯಸ್ಥರ ಮೊದಲ ಸಮ್ಮೇಳನವನ್ನು ಕರೆಯಲಾಯಿತು.  ವೇಗವರ್ಧಿತ ಶಸ್ತ್ರಾಸ್ತ್ರ ಸ್ಪರ್ಧೆಯು ಸೋವಿಯತ್ ಒಕ್ಕೂಟ ಮತ್ತು ಯುಎಸ್ಎ ನಡುವೆ ಯುದ್ಧಕ್ಕೆ ಕಾರಣವಾಗಬಹುದು ಎಂದು ಅವರು ಕಳವಳ ವ್ಯಕ್ತಪಡಿಸಿದ್ದರು. ನಂತರದ ಸಮ್ಮೇಳನಗಳು ಅಭಿವೃದ್ಧಿಶೀಲ ರಾಷ್ಟ್ರಗಳಿಂದ ನಿರಂತರವಾಗಿ ಹೆಚ್ಚುತ್ತಿರುವ ಭಾಗವಹಿಸುವಿಕೆಯನ್ನು ಒಳಗೊಂಡಿವೆ.  47 ದೇಶಗಳನ್ನು ಪ್ರತಿನಿಧಿಸುವ ಕೈರೋದಲ್ಲಿ 1964 ರ ಸಮ್ಮೇಳನವು ಪಾಶ್ಚಿಮಾತ್ಯ ವಸಾಹತುಶಾಹಿ ಮತ್ತು ವಿದೇಶಿ ಮಿಲಿಟರಿ ಸ್ಥಾಪನೆಗಳ ಧಾರಣವನ್ನು ವ್ಯಾಪಕವಾಗಿ ಖಂಡಿಸಿತು.  ಅದರ ನಂತರ, ಗಮನವು ಮೂಲಭೂತವಾಗಿ ರಾಜಕೀಯ ಸಮಸ್ಯೆಗಳಿಂದ ದೂರ ಸರಿಯಿತು, ಜಾಗತಿಕ ಆರ್ಥಿಕ ಮತ್ತು ಇತರ ಸಮಸ್ಯೆಗಳಿಗೆ ಪರಿಹಾರಗಳ ಪ್ರತಿಪಾದನೆಯತ್ತ. NAM ರಚನೆ ಮತ್ತು ಸಂಸ್ಥೆ ಅಲಿಪ್ತ ಚಳವಳಿಯ ಸಂಸ್ಥಾಪಕರು ಮತ್ತು ಅವರ ಉತ್ತರಾಧಿಕಾರಿಗಳು ಆಂದೋಲನಕ್ಕೆ ಸಂವಿಧಾನ ಮತ್ತು ಆಂತರಿಕ ಕಾರ್ಯದರ್ಶಿಯಾಗಿ ಅಂತಹ ಔಪಚಾರಿಕ ರಚನೆಗಳನ್ನು ರಚಿಸಿದರೆ ಬಹುಶಃ ಚಳವಳಿಯು ನಾಶವಾಗಬಹುದು ಎಂದು ಗುರುತಿಸಿದರು.  ವಿಭಿನ್...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.