mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header

Friday, 7 May 2021

2020ರ ಸಾಲಿನ 30ನೇ ಸರಸ್ವತಿ ಸಮ್ಮಾನ್ ಸಾಹಿತ್ಯ ಪ್ರಶಸ್ತಿ


     2020ರ ಸಾಲಿನ 30ನೇ ಸರಸ್ವತಿ ಸಮ್ಮಾನ್ ಸಾಹಿತ್ಯ ಪ್ರಶಸ್ತಿಗೆ ಮರಾಠಿ ಲೇಖಕ ಶರಣ್‌ಕುಮಾರ್ ಅಂಬಾಲೆ ಅವರ ಸನಾತನ ಕೃತಿಯು ಆಯ್ಕೆಯಾಗಿದೆ. ಈ ಮೂಲಕ ಅಂಬಾಲೆ ಅವರು 15 ಲಕ್ಷ ರೂ. ನಗದು ಮತ್ತು ಸ್ಮರಣಿಕೆಯನ್ನು ಪಡೆಯಲಿದ್ದಾರೆ. 2018 ರಲ್ಲಿ ಅಡುಗಡೆಯಾಗಿರುವ ಸನಾತನ ಕೃತಿಯು ದಂತ ಹೋರಾಟದ ಸಾಮಾಜಿಕ ಮತ್ತು ಐತಿಹಾಸಿಕ ದಾಖಲೆಯಾಗಿ ಮಹತ್ವತೆಯನ್ನು ಪಡೆದಿದೆ. ಕೆ.ಕೆ. ಜರ್ಲಾ ಪೌಂಡೇಷನ್ ಸಂಸ್ಥೆಯು ಪ್ರತೀ ವರ್ಷ ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಕೃತಿಗಳಿಗೆ ಸರಸ್ವತಿ ಸಮ್ಮಾನ್ ಪ್ರಶಸ್ತಿಗಳನ್ನು ನೀಡುತ್ತಿದೆ. 2019ನೇ ಸಾಲಿನ 29ನೇ ಸರಸ್ವತಿ ಸಮ್ಮಾನ್ ಪ್ರಶಸ್ತಿಯನ್ನು ಹಿಂದಿ ಸಾಹಿತಿ ವಾಸುದೇವರವರ ಕೃತಿಗೆ ಚೆಕ್ ಬುಕ್ ನೀಡಲಾಗಿತ್ತು


ಸರಸ್ವತಿ ಸಮ್ಮಾನ್ ಪ್ರಶಸ್ತಿ - ಸಾಹಿತ್ಯ ಕ್ಷೇತ್ರದ ಪ್ರಶಸ್ತಿ 

*ಆರಂಭ: 1991 (ಕೃಷ್ಣ ಕುಮಾರ್ ಬಿರ್ಲಾ ಅವರಿಂದ ನವದೆಹಲಿಯಲ್ಲಿ ಆರಂಭ)


* ಸ್ಥಾಪಕರು: ಕೆ.ಕೆ. ಬಿರ್ಲಾ ಫೌಂಡೇಷನ್ * ಪ್ರಶಸ್ತಿಯ ಅರ್ಹತೆ: ಸಂವಿಧಾನದ 8ನೇ ಅನುಸೂಚಿಯಲ್ಲಿರುವ 22 ಭಾಷೆಗಳ ಉತ್ತಮ ಸಾಹಿತ್ಯ ರಚನೆಯ ಕೃತಿಗಳಿಗೆ ನೀಡಲಾಗುತ್ತದೆ.


* ಪ್ರಶಸ್ತಿಯ ಮೊತ್ತ : 15 ಲಕ್ಷ ರೂ. ನಗದು, ಪ್ರಶಸ್ತಿ ಪತ್ರ, ಫಲಕ.


ಶರಣಕುಮಾರ ಲಿಂಬಾಲೆ ಬಗ್ಗೆ ಮಾಹಿತಿ

      2020ರ ಸಾಲಿನ ಸರಸ್ವತಿ ಸಮ್ಮಾನ್ ಪ್ರಶಸ್ತಿಗೆ ಆಯ್ಕೆಯದ ಶರಣ್ ಕುಮಾರ್ (Sharankumar Limbale) ಅವರು ಮರಾಠಿ ಭಾಷೆಯ ಲೇಖಕ, ಕವಿ ಮತ್ತು ಸಾಹಿತ್ಯ ವಿಮರ್ಶಕ, ಮರಾಠಿ ದಲಿತ ಸಾಹಿತ್ಯ ಮತ್ತು ಅಮೆರಿಕಾದ ಕಪ್ಪು ಸಾಹಿತ್ಯದ ನಡುವಿನ ಹೋಲಿಕೆಗಾಗಿ ಇವರು ಕೊಲ್ಲಾಪುರದ ಶಿವಾಜಿ ವಿಶ್ವವಿದ್ಯಾಲಯದಿಂದ ಪಿಹೆಚ್.ಡಿ ಪದವಿಯನ್ನು ಪಡೆದಿದ್ದರು. 40ಕ್ಕೂಹೆಚ್ಚು ಪುಸ್ತಕಗಳನ್ನು ಇವರು ಬರೆದಿದ್ದಾರೆ.


ಇವರ ಆತ್ಮಚರಿತ್ರೆಯಾದ Akkarmashi ಎಂಬುದು ಇಂಗ್ಲಿಷ್ ಭಾಷೆ ಸೇರಿದಂತೆ ಹಲವು ಭಾಷೆಗಳಿಗೆ ಭಾಷಾಂತರಗೊಂಡಿದೆ.


ಸನಾತನ ಕೃತಿಯ ಬಗ್ಗೆ ಮಾಹಿತಿ:-

       ಮರಾಠಿ ಲೇಖಕ ಶರಣ್‌ಕುಮಾರ್‌ ಅವರಿಂದ ಮರಾಠಿ ಭಾಷೆಯಲ್ಲಿ ರಚಿತವಾದ ಸನಾತನ ಕಾದಂಬರಿಯು 2018 ರಲ್ಲಿ ಪ್ರಕಟಗೊಂಡಿತ್ತು. ಇದು ದಲಿತ ಹೋರಾಟದ ಸಾಮಾಜಿಕ ಮತ್ತು ಐತಿಹಾಸಿಕ ಘಟನೆಗಳನ್ನು ತಿಳಿಸುವುದು. 2020ರ ಸರಸ್ವತಿ ಸಮ್ಮಾನ್ ಪ್ರಶಸ್ತಿಗೆ ಈ ಕಾದಂಬರಿ ಆಯ್ಕೆಯಾಗಿರುವುದು ವಿಶೇಷವಾಗಿದೆ. ಸನಾತನ ಕಾದಂಬರಿಯು ಅಸ್ಪೃಶ್ಯರ ಸಾಮಾಜಿಕ, ಸಾಂಸ್ಕೃತಿಕ ಹೋರಾಟದ ಕಥೆಯನ್ನು ವಿಶೇಷ ಶೈಲಿಯಲ್ಲಿ ಬಿಂಬಿಸಿದೆ. ಲೋಕಸಭಾ ಮಾಜಿ ಸೆಕ್ರೆಟರಿ ಜನರಲ್ ಸುಭಾಷ್ ಕಶ್ಯಪ್ ಅವರ ನೇತೃತ್ವದ ವಿದ್ವಾಂಸರ ಆಯ್ಕೆ ಸಮಿತಿಯು ಲಿಂಬಾಲೆ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.


ಸರಸ್ವತಿ ಸಮ್ಮಾನ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಸಾಹಿತಿಗಳು

         ಎಸ್.ಎಲ್. ಭೈರಪ್ಪ: ಕನ್ನಡದ ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪರವರ 'ಮಂದ್ರಾ' ಕೃತಿಗೆ 2010ನೇ ಸಾಲಿನ ಸರಸ್ವತಿ ಸಮ್ಮಾನ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಮೂಲಕ ಎಸ್.ಎಲ್. ಭೈರಪ್ಪನವರು ಸರಸ್ವತಿ ಸಮ್ಮಾನ್ ಪ್ರಶಸ್ತಿಗೆ ಭಾಜನರಾದ ಮೊದಲ ಕನ್ನಡ ಸಾಹಿತಿ, 2016 ರಲ್ಲಿ ಕೇಂದ್ರ ಸರ್ಕಾರವು ಪದ್ಮಶ್ರೀ ಗೌರವವನ್ನು ನೀಡಿ ಗೌರವಿಸಿದೆ. 2017 ಕ.ಸಾ.ಪ ಮತ್ತು ಬಿಎಂಟಿಸಿ ಸಹಭಾಗಿತ್ವದಲ್ಲಿ ನೀಡುವ ನೃಪತುಂಗ ಪ್ರಶಸ್ತಿ ಲಭಿಸಿತ್ತು. 2020 ರಲ್ಲಿ ಕರ್ನಾಟಕ ಕೇಂದ್ರೀಯ ವಿವಿಯು ಇವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಭಿತ್ತಿ ಎಂಬುದು ಭೈರಪ್ಪ ಅವರ ಆತ್ಮಚರಿತ್ರೆಯಾಗಿದೆ. 2020ರ ಅಕ್ಟೋಬರ್‌ನಲ್ಲಿ ಇವರ ಅಂಚು ಕಾದಂಬರಿಯು ಇಂಗ್ಲಿಷ್‌ಗೆ ಆರ್‌.ರಂಗನಾಥ್ ಪ್ರಸಾದ್ ಅವರಿಂದ ಭಾಷಾಂತರಗೊಂಡಿದೆ.


ಎಂ. ವೀರಪ್ಪ ಮೊಯ್ಲಿ: ಕನ್ನಡದ ಸಾಹಿತಿ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿರವರ “ಶ್ರೀ ರಾಮಾಯಣ ಮಹಾನ್ವೇಷಣಂ” ಕೃತಿಗೆ 2014ನೇ ಸಾಲಿನ ಸರಸ್ವತಿ ಸಮ್ಮಾನ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಮೂಲಕ ಎಂ.ವೀರಪ್ಪ ಮೊಯ್ಲಿ ಅವರು ಸರಸ್ವತಿ ಸಮ್ಮಾನ್ ಪ್ರಶಸ್ತಿ ಪಡೆದ ಕನ್ನಡದ 2ನೇ ಸಾಹಿತಿ ಎನಿಸಿದ್ದಾರೆ. ವೀರಪ್ಪ ಮೊಯ್ಲಿ ಅವರ ಬಾಹುಬಲಿ ಅಹಿಂಸಾ ದಿಗ್ವಿಜಯಂ ಮಹಾಕಾವ್ಯಕ್ಕೆ 2020ರ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. 2007 ರಲ್ಲಿ ರಾಮಾಯಣ ಮಹಾನ್ವೇಷಣಂ ಕೃತಿಗೆ ಮೂರ್ತಿದೇವಿ ಪ್ರಶಸ್ತಿ ಲಭಿಸಿದೆ.


ಕೆ.ಕೆ.ಜರ್ಲಾ ಫೌಂಡೇಷನ್

        ಕೃಷ್ಣಕುಮಾರ್ ಬಿರ್ಲಾ ಅವರಿಂದ 1991ರಲ್ಲಿ ದೆಹಲಿಯಲ್ಲಿ ಕೆ.ಕೆ.ಬಿರ್ಲಾ ಪೌಂಡೇಷನ್ ಸ್ಥಾಪನೆಗೊಂಡಿತು. ಈ ಫೌಂಡೇಷನ್ ಮೂಲಕ ಸಾಹಿತ್ಯದ ಉತ್ತೇಜನ, ಕಲೆ, ಶಿಕ್ಷಣ, ಸಾಮಾಜಿಕ ಸೇವೆ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ KRISHNMAR BIRLA ಗಣನೀಯ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿಯನ್ನು ನೀಡಿ ಪ್ರೋತ್ಸಾಹಿಸಲಾಗುತ್ತದೆ.

      ಈ ಸಂಸ್ಥೆ ವತಿಯಿಂದ ನೀಡಲಾಗುವ ಪ್ರಮುಖ ಪ್ರಶಸ್ತಿಗಳು: ಸರಸ್ವತಿ ಸಮ್ಮಾನ್, ವ್ಯಾಸ ಸಮ್ಮಾನ್, ಬಿಹಾರಿ ಪುರಸ್ಕಾರ್, ಶಂಕರ್ ಪುರಸ್ಕಾರ್‌, ವಾಚಸ್ಪತಿ ಪುರಸ್ಕಾರ, ವೈಜ್ಞಾನಿಕ ಸಂಶೋಧನೆಗೆ ಜಿ.ಡಿ.ಬಿರ್ಲಾ ಪ್ರಶಸ್ತಿ ನೀಡಲಾಗುತ್ತದೆ.


No comments:

Post a Comment

Blog Archive

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

Current Affairs Quiz - September, 2021

  1 ಇತ್ತೀಚೆಗೆ ನಿಧನರಾದ ಬುದ್ಧದೇವ್ ಗುಹಾ ಯಾವ ವೃತ್ತಿಯೊಂದಿಗೆ ಸಂಬಂಧ ಹೊಂದಿದ್ದರು ? [A] ಕ್ರೀಡಾಪಟು [B] ಬರಹಗಾರ [C] ರಾಜಕಾರಣಿ [D] ವ್ಯಾಪಾರ-ವ್ಯಕ್ತಿ answar ಸರಿಯಾದ ಉತ್ತರ:   ಬಿ [ಬರಹಗಾರ] ಟಿಪ್ಪಣಿಗಳು: ಮಧುಕಾರಿ ಸೇರಿದಂತೆ ಹಲವಾರು ಜನಪ್ರಿಯ ಪುಸ್ತಕಗಳನ್ನು ಬರೆದ ಖ್ಯಾತ ಬಂಗಾಳಿ ಬರಹಗಾರ ಬುದ್ಧದೇವ್ ಗುಹಾ ಇತ್ತೀಚೆಗೆ ನಿಧನರಾದರು. ಬರಹಗಾರ ತನ್ನ 85 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಆನಂದ ಪುರಸ್ಕಾರ ಮತ್ತು ಶರತ್ ಪುರಸ್ಕಾರ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದರು. ಬಂಗಾಳಿ ಸಾಹಿತ್ಯದ ಲೇಖಕರು , ' ಕೋಯೆಲ್ ', ' ಕೋಜಗರ್ ', ' ಮಧುಕರಿ ', ' ಜಂಗಲಮಹಲ್ ', ' ಚರಿಬೇತಿ ' ಇತ್ಯಾದಿಗಳನ್ನು ಒಳಗೊಂಡಂತೆ ಗಮನಾರ್ಹ ಪುಸ್ತಕಗಳನ್ನು ಬರೆದಿದ್ದಾರೆ. ಅವರು ಬಂಗಾಳಿ ಸಾಹಿತ್ಯದಲ್ಲಿ ' ರಿವು ಮತ್ತು ರಿಜುಡಾ ' ಹೆಸರಿನ ಎರಡು ಜನಪ್ರಿಯ ಕಾಲ್ಪನಿಕ ಪಾತ್ರಗಳ ಸೃಷ್ಟಿಕರ್ತ. Current Affairs Quiz - October, 2021     2. ಇತ್ತೀಚೆಗೆ ಭಾರತ ಮತ್ತು ಅಲ್ಜೀರಿಯಾ ನಡುವಿನ ನೌಕಾ ವ್ಯಾಯಾಮವನ್ನು ಎಲ್ಲಿ ನಡೆಸಲಾಯಿತು ? [A] ಬಂಗಾಳ ಕೊಲ್ಲಿ [B] ಅರೇಬಿಯನ್ ಸಮುದ್ರ [C] ಹಿಂದೂ ಮಹಾಸಾಗರ [D] ಮೆಡಿಟರೇನಿಯನ್ ಸಮುದ್ರ answar ಸರಿಯಾದ ಉತ್ತರ:   ಡಿ [ಮೆಡಿಟರೇನಿಯನ್ ಸಮುದ್ರ] ಟಿಪ್ಪಣಿಗಳು: ಇತ್ತ...

ಭಾರತ ಸರ್ಕಾರದ ಕಾಯಿದೆ, 1858: ಪ್ರಮುಖ ಲಕ್ಷಣಗಳು

  ಕಂಪನಿಯ ಆಡಳಿತವನ್ನು ಕೊನೆಗೊಳಿಸಲು 1858 ರ ಭಾರತ ಸರ್ಕಾರದ ಕಾಯಿದೆಯನ್ನು ಅಂಗೀಕರಿಸಲಾಯಿತು ಮತ್ತು ಅದನ್ನು 1857 ರ ದಂಗೆಯ ಪರಿಣಾಮವಾಗಿ ಬ್ರಿಟಿಷ್ ಕಿರೀಟಕ್ಕೆ ವರ್ಗಾಯಿಸಲಾಯಿತು. ಭಾರತದ ಬ್ರಿಟಿಷ್ ಗವರ್ನರ್-ಜನರಲ್‌ಗೆ ವೈಸ್‌ರಾಯ್ ಎಂಬ ಬಿರುದನ್ನು ನೀಡಲಾಯಿತು , ಅವರು ರಾಜನ ಪ್ರತಿನಿಧಿಯಾದರು.   ಆಗಸ್ಟ್ 1858 ರಲ್ಲಿ , ಬ್ರಿಟಿಷ್ ಸಂಸತ್ತು ಕಂಪನಿಯ ಆಡಳಿತವನ್ನು ಕೊನೆಗೊಳಿಸುವ ಕಾಯಿದೆಯನ್ನು ಅಂಗೀಕರಿಸಿತು.   ಭಾರತದಲ್ಲಿ ಬ್ರಿಟಿಷ್ ಸರ್ಕಾರದ ನಿಯಂತ್ರಣವನ್ನು ಬ್ರಿಟಿಷ್ ಕಿರೀಟಕ್ಕೆ ವರ್ಗಾಯಿಸಲಾಯಿತು.   ಈ ಸಮಯದಲ್ಲಿ , ವಿಕ್ಟೋರಿಯಾ ಬ್ರಿಟನ್ನಿನ ರಾಣಿಯಾಗಿದ್ದಳು.   ಬ್ರಿಟನ್‌ನಲ್ಲಿನ ಸರ್ವೋಚ್ಚ ಸಂಸ್ಥೆಯು ಬ್ರಿಟಿಷ್ ಸಂಸತ್ತಾಗಿತ್ತು , ಇದಕ್ಕೆ ಬ್ರಿಟಿಷ್ ಸರ್ಕಾರವು ಜವಾಬ್ದಾರನಾಗಿದ್ದನು.   ಆದಾಗ್ಯೂ , ಬ್ರಿಟಿಷ್ ಸರ್ಕಾರದ ಎಲ್ಲಾ ಚಟುವಟಿಕೆಗಳನ್ನು ರಾಜನ ಹೆಸರಿನಲ್ಲಿ ನಡೆಸಲಾಯಿತು.   ರಾಜ್ಯ ಕಾರ್ಯದರ್ಶಿ ಎಂದು ಕರೆಯಲ್ಪಡುವ ಬ್ರಿಟಿಷ್ ಸರ್ಕಾರದ ಮಂತ್ರಿಯನ್ನು ಭಾರತ ಸರ್ಕಾರದ ಜವಾಬ್ದಾರಿಯನ್ನು ವಹಿಸಲಾಯಿತು.   ಬ್ರಿಟಿಷ್ ಸರ್ಕಾರವು ಸಂಸತ್ತಿಗೆ ಜವಾಬ್ದಾರರಾಗಿದ್ದರಿಂದ , ಭಾರತದ ಸರ್ವೋಚ್ಚ ಸಂಸ್ಥೆಯು ಬ್ರಿಟಿಷ್ ಸಂಸತ್ತಾಗಿತ್ತು.   ಭಾರತದ ಬ್ರಿಟಿಷ್ ಗವರ್ನರ್-ಜನರಲ್‌ಗೆ ಈಗ ವೈಸರಾಯ್ ಎಂಬ ಬಿರುದನ್ನು ನೀಡಲಾಯಿತು , ಅಂದರೆ ರಾಜನ ಪ್ರತಿನಿಧಿ. ...

ಗ್ರಹಗಳ ಚಲನೆಯ ಕೆಪ್ಲರ್ ನಿಯಮಗಳು

ಖಗೋಳಶಾಸ್ತ್ರದಲ್ಲಿ ,   ಕೆಪ್ಲರ್ನ ಗ್ರಹಗಳ ಚಲನೆಯ ನಿಯಮಗಳು   ಸೂರ್ಯನ ಸುತ್ತ ಗ್ರಹಗಳ ಚಲನೆಯನ್ನು ವಿವರಿಸುವ ಮೂರು ವೈಜ್ಞಾನಿಕ ಕಾನೂನುಗಳಾಗಿವೆ. ಕೆಪ್ಲರ್ನ ಮೊದಲ ನಿಯಮ - ಕಕ್ಷೆಗಳ ನಿಯಮ ಕೆಪ್ಲರ್ನ ಎರಡನೇ ನಿಯಮ - ಸಮಾನ ಪ್ರದೇಶಗಳ ಕಾನೂನು ಕೆಪ್ಲರ್ನ ಮೂರನೇ ನಿಯಮ - ಅವಧಿಗಳ ನಿಯಮ ಪರಿವಿಡಿ ಪರಿಚಯ ಮೊದಲ ಕಾನೂನು ಎರಡನೇ ಕಾನೂನು ಮೂರನೇ ಕಾನೂನು ಕೆಪ್ಲರ್ ಕಾನೂನುಗಳ ಪರಿಚಯ ಚಲನೆ ಯಾವಾಗಲೂ ಸಾಪೇಕ್ಷವಾಗಿರುತ್ತದೆ.   ಚಲನೆಯಲ್ಲಿರುವ ಕಣದ ಶಕ್ತಿಯ ಆಧಾರದ ಮೇಲೆ , ಚಲನೆಗಳನ್ನು ಎರಡು ವಿಧಗಳಾಗಿ ವರ್ಗೀಕರಿಸಲಾಗಿದೆ: ಬೌಂಡೆಡ್ ಮೋಷನ್ ಅನಿಯಮಿತ ಚಲನೆ ಸೀಮಿತ ಚಲನೆಯಲ್ಲಿ , ಕಣವು ಋಣಾತ್ಮಕ ಒಟ್ಟು ಶಕ್ತಿಯನ್ನು ಹೊಂದಿರುತ್ತದೆ ( E <0) ಮತ್ತು ಒಟ್ಟು ಶಕ್ತಿಯು ಯಾವಾಗಲೂ ಕಣದ ಸಂಭಾವ್ಯ ಶಕ್ತಿಗೆ   ಸಮನಾಗಿರುವ ಎರಡು ಅಥವಾ ಹೆಚ್ಚು ತೀವ್ರವಾದ ಬಿಂದುಗಳನ್ನು ಹೊಂದಿರುತ್ತದೆ   , ಅಂದರೆ , ಕಣದ ಚಲನ ಶಕ್ತಿಯು ಶೂನ್ಯವಾಗುತ್ತದೆ. ವಿಕೇಂದ್ರೀಯತೆಗೆ 0 ≤ e <1, E < 0 ದೇಹವು ಸೀಮಿತ ಚಲನೆಯನ್ನು ಸೂಚಿಸುತ್ತದೆ.   ವೃತ್ತಾಕಾರದ ಕಕ್ಷೆಯು ವಿಕೇಂದ್ರೀಯತೆಯನ್ನು ಹೊಂದಿದೆ e = 0, ಮತ್ತು ದೀರ್ಘವೃತ್ತದ ಕಕ್ಷೆಯು ವಿಕೇಂದ್ರೀಯತೆಯನ್ನು ಹೊಂದಿದೆ e <1. ಅನಿಯಮಿತ ಚಲನೆಯಲ್ಲಿ , ಕಣವು ಧನಾತ್ಮಕ ಒಟ್ಟು ಶಕ್ತಿಯನ್ನು ಹೊಂದಿರುತ್ತದೆ ( E...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.