mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header

Wednesday, 12 May 2021

72ನೇ ಗಣರಾಜ್ಯೋತ್ಸವ. 72nd republic day 2021

      2021ರ ಜನವರಿ 26 ರಂದು ಭಾರತದಲ್ಲಿ ವರ್ಷದ ಮೊದಲ ರಾಷ್ಟ್ರೀಯ ಹಬ್ಬವಾದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ನವದೆಹಲಿಯ ರಾಜಪಥದಲ್ಲಿ ಸೇನಾ ಪಥಸಂಚಲನ, ಸ್ತಬ್ಧ ಚಿತ್ರಗಳ ಪ್ರದರ್ಶನ, ಯುದ್ಧ ವಿಮಾನಗಳ ಸಾಹಸವುಳ್ಳ ಕಾರ್ಯಕ್ರಮಗಳು 72ನೇ ಗಣರಾಜ್ಯೋತ್ಸವದ. ದಿನದಂದು ಕೋವಿಡ್-19ರ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರದೊಂದಿಗೆ ಜರುಗಿದವು.

   2021ರ ಜನವರಿ 26ರ ಗಣರಾಜ್ಯೋತ್ಸವ ದಿನ

ಭಾರತದ ರಾಷ್ಟ್ರಪತಿಗಳು ನವದೆಹಲಿಯ ರಾಜಪಥದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ್ದು ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮಗಳನ್ನು ಕೇಂದ್ರ ರಕ್ಷಣಾ ಸಚಿವಾಲಯ ವತಿಯಿಂದ ಆಯೋಜಿಸಲಾಗಿತ್ತು. ಭಾರತದ ಪ್ರಮುಖ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಟ್ಯಾಬ್ಲೆ, 9 ಕೇಂದ್ರ ಸಚಿವಾಲಯಗಳ ಟ್ಯಾಬ್ ಮತ್ತು ರಕ್ಷಣಾ ಘಟಕದಿಂದ 6 ಸೇರಿ ಒಟ್ಟು 32 ಟ್ಯಾಬ್ಲೊಗಳು ಪ್ರದರ್ಶನ ಕಂಡವು. ದೇಶದ ಸೇನಾ ಸಾಮರ್ಥ್ಯ, ಸಾರ್ವಭೌಮತೆ, ಸಂಸ್ಕೃತಿ ಮತ್ತು ಶ್ರೀಮಂತ ಪರಂಪರೆಯು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಅನಾವರಣಗೊಂಡಿತು. ಪಥಸಂಚಲನದಲ್ಲಿ ಬಾಂಗ್ಲಾದೇಶದ ಸಶಸ್ತ್ರಪಡೆಯ ತುಕಡಿಯು ಇತ್ತು.


        ವಿದೇಶಿ ಮುಖ್ಯ ಅತಿಥಿಯಿಲ್ಲದೆ ನಡೆದ ಗಣರಾಜ್ಯೋತ್ಸವ ಸಮಾರಂಭ 55 ವರ್ಷದಲ್ಲಿ ಇದೇ ಮೊದಲ ಬಾರಿಗೆ ವಿದೇಶಿ ಮುಖ್ಯ ಅತಿಥಿಯಿಲ್ಲದೆ ಕಾರ್ಯಕ್ರಮ ನೆರವೇರಿಸಲಾಯಿತು. ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ನಿಗದಿಯಾಗಿದ್ದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಕೋವಿಡ್ ಹಿನ್ನಲೆಯಲ್ಲಿ ಭಾರತದ ಪ್ರವಾಸ ರದ್ದುಗೊಳಿಸಿದ್ದರು. ನಂತರ ಸುರಿನೇಂ ಗಣರಾಜ್ಯದ ಅಧ್ಯಕ್ಷ ಚಂದ್ರಿಕಾ ಪ್ರಸಾದ್ ಸಂತೋಖಿ ರವರನ್ನು ಆಹ್ವಾನಿಸಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಈ ಹಿನ್ನಲೆಯಲ್ಲಿ ಯಾವುದೇ ವಿದೇಶಿ ಮುಖ್ಯ ಅತಿಥಿ ಇಲ್ಲದೇ ಗಣರಾಜ್ಯೋತ್ಸವ ಸಮಾರಂಭ ಜರುಗಿತು. 1966ರ ನಂತರ ಇದೇ ಮೊದಲ ಬಾರಿಗೆ ವಿದೇಶಿ ಮುಖ್ಯ ಅತಿಥಿಗಳಿಲ್ಲದೇ ಪರೇಡ್ ನಡೆಯಿತು. 1952, 1953 ಮತ್ತು 1966 [ರಲ್ಲೂ ಮುಖ್ಯ ಅತಿಥಿಗಳಿಲ್ಲದೇ ಪರೇಡ್ ನಡೆದಿತ್ತು.


  ಭಾರತದ ಗಣರಾಜ್ಯೋತ್ಸವದ ವಿಶೇಷ ಅತಿಥಿಗಳಿಗೆ ಆಹ್ವಾನ


* ಭಾರತದಲ್ಲಿ 1950 ಜನವರಿ 26ರ ಮೊದಲ ಗಣರಾಜ್ಯೋತ್ಸವ ದಿನದ ಆಚರಣೆಯಿಂದಲೂ ವಿಶೇಷವಾಗಿ ವಿದೇಶಿ ಅತಿಥಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವ ಸಂಪ್ರದಾಯವಿದೆ. ಮೊದಲ ಗಣರಾಜ್ಯೋತ್ಸವಕ್ಕೆ ಇಂಡೋನೇಷಿಯಾ ಅಧ್ಯಕ್ಷ ಸುಕಾರ್ನೊ ಭಾಗವಹಿಸಿದ್ದರು.


* 1950 - 54ರವರೆಗೆ ಗಣರಾಜ್ಯೋತ್ಸವ ಆಚರಣೆಯು ಇರ್ವಿನ್ ಸ್ಟೇಡಿಯಂ, ಕೆಂಪುಕೋಟೆ, ರಾಮ್‌ಲೀಲಾ ಗೌಂಡ್ ಮುಂತಾದ ಕಡೆ ನಡೆಯುತ್ತಿತ್ತು. 1955ರ ನಂತರ ದೆಹಲಿಯ ರಾಜ ಪಥದಲ್ಲಿ ಆಚರಣೆಯು ಪ್ರಾರಂಭಗೊಂಡಿದೆ. ಈ ರಾಜಪಥದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಭಾಗವಹಿಸಿದ ಮೊದಲ ಅತಿಥಿ ಪಾಕಿಸ್ತಾನದ ಮೊದಲ ನಾಯಕ ಗೌವರ್ನರ್ ಜನರಲ್ ಮಲ್ಲಿಕ್ ಗುಲಾಮ್ ಮೊಹಮದ್ ಆಗಿದ್ದರು.


* ಗಣರಾಜ್ಯೋತ್ಸವದಲ್ಲಿ ಅತಿಥಿಯಾಗಿ ಭಾಗವಹಿಸಿದ ಪಾಕ್‌ನ ಕೊನೆಯ ಗಣ್ಯರು – 1965ರಲ್ಲಿ ಪಾಕಿಸ್ತಾನದ ಅಂದಿನ ಕೃಷಿ ಮತ್ತು ಆಹಾರ ಸಚಿವ ರಾಣಾ ಅಬ್ದುಲ್ ಹಮೀದ್.

  

ಗಣರಾಜ್ಯೋತ್ಸವ ಆಚರಣೆಯ ಹಿನ್ನಲೆ


      1929ರಲ್ಲಿ ಜವಾಹರ್ ಲಾಲ್ ನೆಹರೂ ಅಧ್ಯಕ್ಷತೆಯಲ್ಲಿ ಲಾಹೋರ್‌ನಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದಲ್ಲಿ 1930ರ ಜನವರಿ 26ನ್ನು ಪೂರ್ಣ ಸ್ವರಾಜ್ಯ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಯಿತು. 1949ರ ನವೆಂಬರ್ 26 ರಂದು ಸಂವಿಧಾನ ರಚನಾ ಸಭೆಯು ಸಂವಿಧಾನಕ್ಕೆ ಅನುಮೋದನೆ ನೀಡಿತ್ತು. ಆದರೆ ಪೂರ್ಣ ಸ್ವರಾಜ್ಯ ಘೋಷಣೆಯಾದ ಜನವರಿ 26ರ ನೆನಪಿಗಾಗಿ 1950ರ ಜನವರಿ 26ರಲ್ಲಿ ಭಾರತದ ಸಂವಿಧಾನವನ್ನು ಜಾರಿಗೊಳಿಸಲಾಯಿತು. ಇದೇ ದಿನ ಭಾರತದ ಮೊದಲ ರಾಷ್ಟ್ರಪತಿಯಾಗಿ ಡಾ|| ಬಾಬು ರಾಜೇಂದ್ರ ಪ್ರಸಾದ್ (ಸಂವಿಧಾನ ರಚನಾ ಸಭೆ ಅಧ್ಯಕ್ಷರು) ಅವರು ಅಧಿಕಾರ ವಹಿಸಿಕೊಂಡರು.


ಸಂವಿಧಾನ ದಿವಸ್ : ನವೆಂಬರ್ 26 (2015ರಿಂದ)


ಭಾರತದಲ್ಲಿ 2 ವರ್ಷ 11 ತಿಂಗಳು 18 ದಿವಸಗಳ ಪರಿಶ್ರಮದ ಫಲವಾಗಿ ಡಾ. ಬಿ.ಆರ್. ಅಂಬೇಡ್ಕರ್ ನೇತೃತ್ವದ ಸಂವಿಧಾನ ಕರಡು ಸಮಿತಿ ಅಧ್ಯಕ್ಷತೆಯಲ್ಲಿ ಸಿದ್ಧವಾದ ಸಂವಿಧಾನವನ್ನು ಬಾಬು ರಾಜೇಂದ್ರ ಪ್ರಸಾದ್ ನೇತೃತ್ವದ ರಚನಾ ಸಭೆಯು 1949ರ ನವೆಂಬರ್ 26 ರಂದು ಅಂಗೀಕರಿಸಿದ ಹಿನ್ನೆಲೆಯಲ್ಲಿ ನವೆಂಬರ್ 26 ಅನ್ನು ಸಂವಿಧಾನ ದಿವಸವಾಗಿ 2015 ರಿಂದ ಆಚರಣೆ ಮಾಡಲಾಗುತ್ತಿದೆ.


   ಅಯೋಧ್ಯೆ ರಾಮಮಂದಿರ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ


ಉತ್ತರ ಪ್ರದೇಶ ರಾಜ್ಯವು


ಗಣರಾಜ್ಯೋತ್ಸವ ದ ಪಥಸಂಚಲನದಲ್ಲಿ ಅಯೋಧ್ಯೆಯ ಪ್ರಾಚೀನ ಪರಂಪರೆಯನ್ನು ಬಿಂಬಿಸುವ “ಅಯೋಧ್ಯೆ: ಉತ್ತರ ಪ್ರದೇಶದ ಸಾಂಸ್ಕೃತಿಕ ಪರಂಪರೆ” (Ayodhya: The Cultural


Heritage Of Uttar Pradesh) ಎಂಬ ಹೆಸರಿನಲ್ಲಿ ಸ್ತಬ್ಧ ಚಿತ್ರವನ್ನು ಪ್ರದರ್ಶಿಸಿತ್ತು( Replica Of Ram Temple-Ayodhya), ಈ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ ದೊರೆತಿದೆ. ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದ ಮಾದರಿಯ ಮುಂದೆ ರಾಮಾಯಣ ರಚಿಸಿದ ಮಹರ್ಷಿ ವಾಲ್ಮೀಕಿ ರವರು ಕುಳಿತಿರುವ ಟ್ಯಾಬ್ ದೇಶದ ಜನತೆಯ ಗಮನವನ್ನು ಸೆಳೆದಿತ್ತು. ಸತತವಾಗಿ 2ನೇ ವರ್ಷ ಉತ್ತರ ಪ್ರದೇಶ ರಾಜ್ಯವು ಪ್ರಥಮ ಬಹುಮಾನವನ್ನು ತನ್ನದಾಗಿಸಿಕೊಂಡಿದೆ.


ದ್ವಿತೀಯ ಪ್ರಶಸ್ತಿ ಪಡೆದ ಟ್ಯಾಬ್ಲೆ - ತ್ರಿಪುರ (Tripura)


ಸಾಮಾಜಿಕ ಆರ್ಥಿಕ ವಲಯದಲ್ಲಿ ಪರಿಸರ ಸ್ನೇಹಿಯಾಗಿ ಆತ್ಮ ನಿರ್ಭರತೆ ಸಾಧಿಸುವ ಕುರಿತ (Eco-Friendly and Aatma Nirbhar)ತ್ರಿಪುರದ ಸ್ತಬ್ಧಚಿತ್ರಕ್ಕೆ 2ನೇ ಸ್ಥಾನ ದೊರೆತಿದೆ.


ತೃತೀಯ ಪ್ರಶಸ್ತಿಗೆ ಭಾಜನವಾದ ಟ್ಯಾಬ್ಲೆ - ಉತ್ತರಾಖಂಡ “Dev Bhoomi - The Land Of The Gods' ಹೆಸರಿನ ಸ್ತಬ್ಧಚಿತ್ರ ಪ್ರದರ್ಶಿಸಿದ ಉತ್ತರಾಖಂಡ ರಾಜ್ಯಕ್ಕೆ 2021ರ ಗಣರಾಜ್ಯೋತ್ಸವದ ಟ್ಯಾಬ್ಲೆ ಪ್ರದರ್ಶನದಲ್ಲಿ ಮೂರನೇ ಪ್ರಶಸ್ತಿ ದೊರೆತಿದೆ.

   ಕರ್ನಾಟಕ ರಾಜ್ಯದ ಸ್ತಬ್ಧ ಚಿತ್ರ ವಿಜಯನಗರ ಸಾಮ್ರಾಜ್ಯದ ಗತವೈಭವ


ರಾಜ್ಯದ ಸ್ತಬ್ಧಚಿತ್ರವಾಗಿ ವಿಜಯನಗರ (City of Victory)


ಕರ್ನಾಟಕ ಸಾಮ್ರಾಜ್ಯದ ಗತವೈಭವ ಸಾರುವ ಸ್ತಬ್ಧ ಚಿತ್ರವು ಪಾಲ್ಗೊಂಡಿತ್ತು. ರಾಜ್ಯದ ವಾರ್ತಾ ಇಲಾಖೆಯು  ಈ ಸ್ತಬ್ಧ ಚಿತ್ರವನ್ನು ತಯಾರಿಸಿತ್ತು, ವಿಜಯನಗರ ಸಾಮ್ರಾಜ್ಯದ ಗತವೈಭವ ಸ್ತಬ್ಧಚಿತ್ರದಲ್ಲಿ ಹನುಮಂತನ ಮಾತಂಗ ಪರ್ವತ, ಶ್ರೀಕೃಷ್ಣ ದೇವರಾಯನ ಪಟ್ಟಾಭಿಷೇಕ ಕಾರ್ಯಕ್ರಮ, ಹಂಪಿಯ ಹಜಾರ ರಾಮ ದೇಗುಲ ಮತ್ತು ಉಗ್ರ ನರಸಿಂಹನ ಆಕೃತಿ ಈ ಸ್ತಬ್ಧಚಿತ್ರದ ಪ್ರಮುಖ ಆಕರ್ಷಣೆಗಳಾಗಿದ್ದವು.


   ಹಂಪಿಯ ಕಲ್ಲಿನ ರಥ, ವಿಜಯ ವಿಠಲ ದೇವಸ್ಥಾನದ ಸಪ್ತ ಸ್ವರ ಮಂಟಪ, ಉಗ್ರ ನರಸಿಂಹ ಸ್ಮಾರಕ, ಅಂಜನಾದ್ರಿ ಬೆಟ್ಟದ ಮೇಲೆ ಹನುಮಂತ ನಿಂತಿರುವುದನ್ನು ಸ್ತಬ್ಧಚಿತ್ರ ಒಳಗೊಂಡಿರಲಿದೆ. ಇದರ ಜತೆಗೆ ವಿದೇಶಿ ಪ್ರವಾಸಿಗರ ವೇಷಧಾರಿಗಳು, 1509 ರಲ್ಲಿ ಶ್ರೀಕೃಷ್ಣ ದೇವರಾಯನಿಗೆ ನಡೆದ ಪಟ್ಟಾಭಿಷೇಕದ ಅನಾವರಣವನ್ನು ಪ್ರದರ್ಶಿಸಲಾಗಿತ್ತು, ಕತ್ತಿ ಗುರಾಣಿ ಹಿಡಿದ ಮಹಿಳಾ ಯೋಧರ ಜತೆಗೆ ಚಾಮರ ಹಿಡಿದ ಪುರುಷರು ಇದ್ದರು. ವಿಜಯನಗರ ಸಾಮ್ರಾಜ್ಯದ ಆಡಳಿತದಲ್ಲಿ ಮಹಿಳಾ ಯೋಧರಿದ್ದರು ಎಂಬುದನ್ನು ಈ ಮೂಲಕ ವಿಶ್ವಕ್ಕೆ ಸಾರಲಾಯಿತು. ಪ್ರವೀಣ್ ಡಿ ರಾವ್ ಮತ್ತು ತಂಡ ಹಿನ್ನಲೆ ಸಂಗೀತ ನೀಡಿದೆ.

No comments:

Post a Comment

Blog Archive

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

United Nations (UN): A Pillar of Global Governance 🌍🕊️

  The United Nations (UN) is a cornerstone of international diplomacy and global governance, promoting peace, security, human rights, and development across the world. Established in the aftermath of World War II, the UN has been instrumental in shaping the post-war international order, addressing global challenges, and fostering cooperation among its member states. Origins and Evolution of the UN 📜🕰️ Founding of the UN The UN was founded on October 24, 1945, with the primary objective of preventing future conflicts and fostering international cooperation. This date is now celebrated annually as United Nations Day. The UN replaced the League of Nations, which had failed to prevent the outbreak of World War II. Charter and Structure The UN Charter, signed by 50 countries in San Francisco, outlines the organization's purposes, principles, and structure. The UN has six main organs: General Assembly : Comprising all member states, it serves as a forum for deliberation and policymakin...

Nudi Kannada Typing: A Comprehensive Guide

  In today's digital age, the need for localized content has never been more significant. For Kannada speakers, typing in their native script can sometimes be a challenge. Enter Nudi Kannada Typing - a solution that has revolutionized how Kannada is typed on digital platforms. Whether you're a student, professional, or casual user, this guide will walk you through everything you need to know about Nudi Kannada Typing. 🌐📱 What is Nudi Kannada Typing? Nudi is a software developed by the Kannada Ganaka Parishat to facilitate typing in the Kannada language on computers. It supports various fonts and keyboard layouts that cater to different user preferences. Nudi is compatible with Windows OS and provides an intuitive interface for typing in Kannada. Why Use Nudi? Ease of Use : Nudi is designed to be user-friendly, making it accessible even for beginners. Wide Acceptance : It is widely accepted and used in many government and private institutions across Karnataka. Customization ...

ಭಾರತದ ಕೇಂದ್ರಾಡಳಿತ ಪ್ರದೇಶಗಳು, ಪಟ್ಟಿ, ನಕ್ಷೆ, ಹೆಸರುಗಳು, ರಾಜಧಾನಿ, 8 UTಗಳ ಪ್ರದೇಶ

  ಭಾರತದ ಕೇಂದ್ರಾಡಳಿತ ಪ್ರದೇಶಗಳು: ಭಾರತದ ಕೇಂದ್ರಾಡಳಿತ ಪ್ರದೇಶಗಳ ಸಂಪೂರ್ಣ ಪಟ್ಟಿಯನ್ನು ಹುಡುಕಿ. ಗಾತ್ರದ ದೃಷ್ಟಿಯಿಂದ ಲಡಾಖ್ ಭಾರತದ ಅತಿದೊಡ್ಡ ಕೇಂದ್ರಾಡಳಿತ ಪ್ರದೇಶವಾಗಿದೆ. ಭಾರತದ 8 ಯುಟಿಗಳು. ಪರಿವಿಡಿ ಭಾರತದ ಕೇಂದ್ರಾಡಳಿತ ಪ್ರದೇಶಗಳು ಭಾರತದ ಕೇಂದ್ರಾಡಳಿತ ಪ್ರದೇಶಗಳು:  ಭಾರತವು ಪ್ರಜಾಪ್ರಭುತ್ವ, ಸಮಾಜವಾದಿ, ಜಾತ್ಯತೀತ ಮತ್ತು ಗಣರಾಜ್ಯ ಶೈಲಿಯ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ರಾಜ್ಯಗಳ ಒಕ್ಕೂಟವಾಗಿದೆ. ಭಾರತದಲ್ಲಿ, ಕೇಂದ್ರಾಡಳಿತ ಪ್ರದೇಶ ಎಂದು ಕರೆಯಲ್ಪಡುವ ಒಂದು ರೀತಿಯ ಆಡಳಿತ ವಿಭಾಗವು ನೇರವಾಗಿ ಕೇಂದ್ರ ಸರ್ಕಾರದಿಂದ (ಕೇಂದ್ರ ಸರ್ಕಾರ) ಆಡಳಿತ ನಡೆಸುತ್ತದೆ. ಆದ್ದರಿಂದ ಇದನ್ನು "ಕೇಂದ್ರಾಡಳಿತ ಪ್ರದೇಶ" ಎಂದು ಕರೆಯಲಾಗುತ್ತದೆ. ಸಂವಿಧಾನದ ಪ್ರಕಾರ ಅಧ್ಯಕ್ಷರು ಒಕ್ಕೂಟದ ಕಾರ್ಯನಿರ್ವಾಹಕ ಮುಖ್ಯಸ್ಥರಾಗಿದ್ದಾರೆ. ಅಧ್ಯಕ್ಷರು ಅವರು ಅಥವಾ ಅವಳು ಗೊತ್ತುಪಡಿಸಿದ ನಿರ್ವಾಹಕರ ಮೂಲಕ ಕೇಂದ್ರಾಡಳಿತ ಪ್ರದೇಶಗಳನ್ನು ನೋಡಿಕೊಳ್ಳುತ್ತಾರೆ. ಅವುಗಳ ಮೂಲ ಮತ್ತು ವಿಕಾಸದ ಕಾರಣದಿಂದಾಗಿ, ಭಾರತದ ಕೇಂದ್ರಾಡಳಿತ ಪ್ರದೇಶಗಳು ಅನನ್ಯ ಹಕ್ಕುಗಳು ಮತ್ತು ಸ್ಥಾನಮಾನವನ್ನು ಹೊಂದಿವೆ. ಸ್ಥಳೀಯ ಸಂಸ್ಕೃತಿಗಳ ಹಕ್ಕುಗಳನ್ನು ರಕ್ಷಿಸಲು, ಆಡಳಿತದ ಸಮಸ್ಯೆಗಳ ಮೇಲೆ ರಾಜಕೀಯ ಅಶಾಂತಿಯನ್ನು ತಡೆಗಟ್ಟಲು ಮತ್ತು ಇತರ ಕಾರಣಗಳಿಗಾಗಿ ಭಾರತೀಯ ಉಪವಿಭಾಗಕ್ಕೆ "ಕೇಂ...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.