mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header

Wednesday, 12 May 2021

72ನೇ ಗಣರಾಜ್ಯೋತ್ಸವ. 72nd republic day 2021

      2021ರ ಜನವರಿ 26 ರಂದು ಭಾರತದಲ್ಲಿ ವರ್ಷದ ಮೊದಲ ರಾಷ್ಟ್ರೀಯ ಹಬ್ಬವಾದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ನವದೆಹಲಿಯ ರಾಜಪಥದಲ್ಲಿ ಸೇನಾ ಪಥಸಂಚಲನ, ಸ್ತಬ್ಧ ಚಿತ್ರಗಳ ಪ್ರದರ್ಶನ, ಯುದ್ಧ ವಿಮಾನಗಳ ಸಾಹಸವುಳ್ಳ ಕಾರ್ಯಕ್ರಮಗಳು 72ನೇ ಗಣರಾಜ್ಯೋತ್ಸವದ. ದಿನದಂದು ಕೋವಿಡ್-19ರ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರದೊಂದಿಗೆ ಜರುಗಿದವು.

   2021ರ ಜನವರಿ 26ರ ಗಣರಾಜ್ಯೋತ್ಸವ ದಿನ

ಭಾರತದ ರಾಷ್ಟ್ರಪತಿಗಳು ನವದೆಹಲಿಯ ರಾಜಪಥದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ್ದು ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮಗಳನ್ನು ಕೇಂದ್ರ ರಕ್ಷಣಾ ಸಚಿವಾಲಯ ವತಿಯಿಂದ ಆಯೋಜಿಸಲಾಗಿತ್ತು. ಭಾರತದ ಪ್ರಮುಖ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಟ್ಯಾಬ್ಲೆ, 9 ಕೇಂದ್ರ ಸಚಿವಾಲಯಗಳ ಟ್ಯಾಬ್ ಮತ್ತು ರಕ್ಷಣಾ ಘಟಕದಿಂದ 6 ಸೇರಿ ಒಟ್ಟು 32 ಟ್ಯಾಬ್ಲೊಗಳು ಪ್ರದರ್ಶನ ಕಂಡವು. ದೇಶದ ಸೇನಾ ಸಾಮರ್ಥ್ಯ, ಸಾರ್ವಭೌಮತೆ, ಸಂಸ್ಕೃತಿ ಮತ್ತು ಶ್ರೀಮಂತ ಪರಂಪರೆಯು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಅನಾವರಣಗೊಂಡಿತು. ಪಥಸಂಚಲನದಲ್ಲಿ ಬಾಂಗ್ಲಾದೇಶದ ಸಶಸ್ತ್ರಪಡೆಯ ತುಕಡಿಯು ಇತ್ತು.


        ವಿದೇಶಿ ಮುಖ್ಯ ಅತಿಥಿಯಿಲ್ಲದೆ ನಡೆದ ಗಣರಾಜ್ಯೋತ್ಸವ ಸಮಾರಂಭ 55 ವರ್ಷದಲ್ಲಿ ಇದೇ ಮೊದಲ ಬಾರಿಗೆ ವಿದೇಶಿ ಮುಖ್ಯ ಅತಿಥಿಯಿಲ್ಲದೆ ಕಾರ್ಯಕ್ರಮ ನೆರವೇರಿಸಲಾಯಿತು. ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ನಿಗದಿಯಾಗಿದ್ದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಕೋವಿಡ್ ಹಿನ್ನಲೆಯಲ್ಲಿ ಭಾರತದ ಪ್ರವಾಸ ರದ್ದುಗೊಳಿಸಿದ್ದರು. ನಂತರ ಸುರಿನೇಂ ಗಣರಾಜ್ಯದ ಅಧ್ಯಕ್ಷ ಚಂದ್ರಿಕಾ ಪ್ರಸಾದ್ ಸಂತೋಖಿ ರವರನ್ನು ಆಹ್ವಾನಿಸಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಈ ಹಿನ್ನಲೆಯಲ್ಲಿ ಯಾವುದೇ ವಿದೇಶಿ ಮುಖ್ಯ ಅತಿಥಿ ಇಲ್ಲದೇ ಗಣರಾಜ್ಯೋತ್ಸವ ಸಮಾರಂಭ ಜರುಗಿತು. 1966ರ ನಂತರ ಇದೇ ಮೊದಲ ಬಾರಿಗೆ ವಿದೇಶಿ ಮುಖ್ಯ ಅತಿಥಿಗಳಿಲ್ಲದೇ ಪರೇಡ್ ನಡೆಯಿತು. 1952, 1953 ಮತ್ತು 1966 [ರಲ್ಲೂ ಮುಖ್ಯ ಅತಿಥಿಗಳಿಲ್ಲದೇ ಪರೇಡ್ ನಡೆದಿತ್ತು.


  ಭಾರತದ ಗಣರಾಜ್ಯೋತ್ಸವದ ವಿಶೇಷ ಅತಿಥಿಗಳಿಗೆ ಆಹ್ವಾನ


* ಭಾರತದಲ್ಲಿ 1950 ಜನವರಿ 26ರ ಮೊದಲ ಗಣರಾಜ್ಯೋತ್ಸವ ದಿನದ ಆಚರಣೆಯಿಂದಲೂ ವಿಶೇಷವಾಗಿ ವಿದೇಶಿ ಅತಿಥಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವ ಸಂಪ್ರದಾಯವಿದೆ. ಮೊದಲ ಗಣರಾಜ್ಯೋತ್ಸವಕ್ಕೆ ಇಂಡೋನೇಷಿಯಾ ಅಧ್ಯಕ್ಷ ಸುಕಾರ್ನೊ ಭಾಗವಹಿಸಿದ್ದರು.


* 1950 - 54ರವರೆಗೆ ಗಣರಾಜ್ಯೋತ್ಸವ ಆಚರಣೆಯು ಇರ್ವಿನ್ ಸ್ಟೇಡಿಯಂ, ಕೆಂಪುಕೋಟೆ, ರಾಮ್‌ಲೀಲಾ ಗೌಂಡ್ ಮುಂತಾದ ಕಡೆ ನಡೆಯುತ್ತಿತ್ತು. 1955ರ ನಂತರ ದೆಹಲಿಯ ರಾಜ ಪಥದಲ್ಲಿ ಆಚರಣೆಯು ಪ್ರಾರಂಭಗೊಂಡಿದೆ. ಈ ರಾಜಪಥದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಭಾಗವಹಿಸಿದ ಮೊದಲ ಅತಿಥಿ ಪಾಕಿಸ್ತಾನದ ಮೊದಲ ನಾಯಕ ಗೌವರ್ನರ್ ಜನರಲ್ ಮಲ್ಲಿಕ್ ಗುಲಾಮ್ ಮೊಹಮದ್ ಆಗಿದ್ದರು.


* ಗಣರಾಜ್ಯೋತ್ಸವದಲ್ಲಿ ಅತಿಥಿಯಾಗಿ ಭಾಗವಹಿಸಿದ ಪಾಕ್‌ನ ಕೊನೆಯ ಗಣ್ಯರು – 1965ರಲ್ಲಿ ಪಾಕಿಸ್ತಾನದ ಅಂದಿನ ಕೃಷಿ ಮತ್ತು ಆಹಾರ ಸಚಿವ ರಾಣಾ ಅಬ್ದುಲ್ ಹಮೀದ್.

  

ಗಣರಾಜ್ಯೋತ್ಸವ ಆಚರಣೆಯ ಹಿನ್ನಲೆ


      1929ರಲ್ಲಿ ಜವಾಹರ್ ಲಾಲ್ ನೆಹರೂ ಅಧ್ಯಕ್ಷತೆಯಲ್ಲಿ ಲಾಹೋರ್‌ನಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದಲ್ಲಿ 1930ರ ಜನವರಿ 26ನ್ನು ಪೂರ್ಣ ಸ್ವರಾಜ್ಯ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಯಿತು. 1949ರ ನವೆಂಬರ್ 26 ರಂದು ಸಂವಿಧಾನ ರಚನಾ ಸಭೆಯು ಸಂವಿಧಾನಕ್ಕೆ ಅನುಮೋದನೆ ನೀಡಿತ್ತು. ಆದರೆ ಪೂರ್ಣ ಸ್ವರಾಜ್ಯ ಘೋಷಣೆಯಾದ ಜನವರಿ 26ರ ನೆನಪಿಗಾಗಿ 1950ರ ಜನವರಿ 26ರಲ್ಲಿ ಭಾರತದ ಸಂವಿಧಾನವನ್ನು ಜಾರಿಗೊಳಿಸಲಾಯಿತು. ಇದೇ ದಿನ ಭಾರತದ ಮೊದಲ ರಾಷ್ಟ್ರಪತಿಯಾಗಿ ಡಾ|| ಬಾಬು ರಾಜೇಂದ್ರ ಪ್ರಸಾದ್ (ಸಂವಿಧಾನ ರಚನಾ ಸಭೆ ಅಧ್ಯಕ್ಷರು) ಅವರು ಅಧಿಕಾರ ವಹಿಸಿಕೊಂಡರು.


ಸಂವಿಧಾನ ದಿವಸ್ : ನವೆಂಬರ್ 26 (2015ರಿಂದ)


ಭಾರತದಲ್ಲಿ 2 ವರ್ಷ 11 ತಿಂಗಳು 18 ದಿವಸಗಳ ಪರಿಶ್ರಮದ ಫಲವಾಗಿ ಡಾ. ಬಿ.ಆರ್. ಅಂಬೇಡ್ಕರ್ ನೇತೃತ್ವದ ಸಂವಿಧಾನ ಕರಡು ಸಮಿತಿ ಅಧ್ಯಕ್ಷತೆಯಲ್ಲಿ ಸಿದ್ಧವಾದ ಸಂವಿಧಾನವನ್ನು ಬಾಬು ರಾಜೇಂದ್ರ ಪ್ರಸಾದ್ ನೇತೃತ್ವದ ರಚನಾ ಸಭೆಯು 1949ರ ನವೆಂಬರ್ 26 ರಂದು ಅಂಗೀಕರಿಸಿದ ಹಿನ್ನೆಲೆಯಲ್ಲಿ ನವೆಂಬರ್ 26 ಅನ್ನು ಸಂವಿಧಾನ ದಿವಸವಾಗಿ 2015 ರಿಂದ ಆಚರಣೆ ಮಾಡಲಾಗುತ್ತಿದೆ.


   ಅಯೋಧ್ಯೆ ರಾಮಮಂದಿರ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ


ಉತ್ತರ ಪ್ರದೇಶ ರಾಜ್ಯವು


ಗಣರಾಜ್ಯೋತ್ಸವ ದ ಪಥಸಂಚಲನದಲ್ಲಿ ಅಯೋಧ್ಯೆಯ ಪ್ರಾಚೀನ ಪರಂಪರೆಯನ್ನು ಬಿಂಬಿಸುವ “ಅಯೋಧ್ಯೆ: ಉತ್ತರ ಪ್ರದೇಶದ ಸಾಂಸ್ಕೃತಿಕ ಪರಂಪರೆ” (Ayodhya: The Cultural


Heritage Of Uttar Pradesh) ಎಂಬ ಹೆಸರಿನಲ್ಲಿ ಸ್ತಬ್ಧ ಚಿತ್ರವನ್ನು ಪ್ರದರ್ಶಿಸಿತ್ತು( Replica Of Ram Temple-Ayodhya), ಈ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ ದೊರೆತಿದೆ. ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದ ಮಾದರಿಯ ಮುಂದೆ ರಾಮಾಯಣ ರಚಿಸಿದ ಮಹರ್ಷಿ ವಾಲ್ಮೀಕಿ ರವರು ಕುಳಿತಿರುವ ಟ್ಯಾಬ್ ದೇಶದ ಜನತೆಯ ಗಮನವನ್ನು ಸೆಳೆದಿತ್ತು. ಸತತವಾಗಿ 2ನೇ ವರ್ಷ ಉತ್ತರ ಪ್ರದೇಶ ರಾಜ್ಯವು ಪ್ರಥಮ ಬಹುಮಾನವನ್ನು ತನ್ನದಾಗಿಸಿಕೊಂಡಿದೆ.


ದ್ವಿತೀಯ ಪ್ರಶಸ್ತಿ ಪಡೆದ ಟ್ಯಾಬ್ಲೆ - ತ್ರಿಪುರ (Tripura)


ಸಾಮಾಜಿಕ ಆರ್ಥಿಕ ವಲಯದಲ್ಲಿ ಪರಿಸರ ಸ್ನೇಹಿಯಾಗಿ ಆತ್ಮ ನಿರ್ಭರತೆ ಸಾಧಿಸುವ ಕುರಿತ (Eco-Friendly and Aatma Nirbhar)ತ್ರಿಪುರದ ಸ್ತಬ್ಧಚಿತ್ರಕ್ಕೆ 2ನೇ ಸ್ಥಾನ ದೊರೆತಿದೆ.


ತೃತೀಯ ಪ್ರಶಸ್ತಿಗೆ ಭಾಜನವಾದ ಟ್ಯಾಬ್ಲೆ - ಉತ್ತರಾಖಂಡ “Dev Bhoomi - The Land Of The Gods' ಹೆಸರಿನ ಸ್ತಬ್ಧಚಿತ್ರ ಪ್ರದರ್ಶಿಸಿದ ಉತ್ತರಾಖಂಡ ರಾಜ್ಯಕ್ಕೆ 2021ರ ಗಣರಾಜ್ಯೋತ್ಸವದ ಟ್ಯಾಬ್ಲೆ ಪ್ರದರ್ಶನದಲ್ಲಿ ಮೂರನೇ ಪ್ರಶಸ್ತಿ ದೊರೆತಿದೆ.

   ಕರ್ನಾಟಕ ರಾಜ್ಯದ ಸ್ತಬ್ಧ ಚಿತ್ರ ವಿಜಯನಗರ ಸಾಮ್ರಾಜ್ಯದ ಗತವೈಭವ


ರಾಜ್ಯದ ಸ್ತಬ್ಧಚಿತ್ರವಾಗಿ ವಿಜಯನಗರ (City of Victory)


ಕರ್ನಾಟಕ ಸಾಮ್ರಾಜ್ಯದ ಗತವೈಭವ ಸಾರುವ ಸ್ತಬ್ಧ ಚಿತ್ರವು ಪಾಲ್ಗೊಂಡಿತ್ತು. ರಾಜ್ಯದ ವಾರ್ತಾ ಇಲಾಖೆಯು  ಈ ಸ್ತಬ್ಧ ಚಿತ್ರವನ್ನು ತಯಾರಿಸಿತ್ತು, ವಿಜಯನಗರ ಸಾಮ್ರಾಜ್ಯದ ಗತವೈಭವ ಸ್ತಬ್ಧಚಿತ್ರದಲ್ಲಿ ಹನುಮಂತನ ಮಾತಂಗ ಪರ್ವತ, ಶ್ರೀಕೃಷ್ಣ ದೇವರಾಯನ ಪಟ್ಟಾಭಿಷೇಕ ಕಾರ್ಯಕ್ರಮ, ಹಂಪಿಯ ಹಜಾರ ರಾಮ ದೇಗುಲ ಮತ್ತು ಉಗ್ರ ನರಸಿಂಹನ ಆಕೃತಿ ಈ ಸ್ತಬ್ಧಚಿತ್ರದ ಪ್ರಮುಖ ಆಕರ್ಷಣೆಗಳಾಗಿದ್ದವು.


   ಹಂಪಿಯ ಕಲ್ಲಿನ ರಥ, ವಿಜಯ ವಿಠಲ ದೇವಸ್ಥಾನದ ಸಪ್ತ ಸ್ವರ ಮಂಟಪ, ಉಗ್ರ ನರಸಿಂಹ ಸ್ಮಾರಕ, ಅಂಜನಾದ್ರಿ ಬೆಟ್ಟದ ಮೇಲೆ ಹನುಮಂತ ನಿಂತಿರುವುದನ್ನು ಸ್ತಬ್ಧಚಿತ್ರ ಒಳಗೊಂಡಿರಲಿದೆ. ಇದರ ಜತೆಗೆ ವಿದೇಶಿ ಪ್ರವಾಸಿಗರ ವೇಷಧಾರಿಗಳು, 1509 ರಲ್ಲಿ ಶ್ರೀಕೃಷ್ಣ ದೇವರಾಯನಿಗೆ ನಡೆದ ಪಟ್ಟಾಭಿಷೇಕದ ಅನಾವರಣವನ್ನು ಪ್ರದರ್ಶಿಸಲಾಗಿತ್ತು, ಕತ್ತಿ ಗುರಾಣಿ ಹಿಡಿದ ಮಹಿಳಾ ಯೋಧರ ಜತೆಗೆ ಚಾಮರ ಹಿಡಿದ ಪುರುಷರು ಇದ್ದರು. ವಿಜಯನಗರ ಸಾಮ್ರಾಜ್ಯದ ಆಡಳಿತದಲ್ಲಿ ಮಹಿಳಾ ಯೋಧರಿದ್ದರು ಎಂಬುದನ್ನು ಈ ಮೂಲಕ ವಿಶ್ವಕ್ಕೆ ಸಾರಲಾಯಿತು. ಪ್ರವೀಣ್ ಡಿ ರಾವ್ ಮತ್ತು ತಂಡ ಹಿನ್ನಲೆ ಸಂಗೀತ ನೀಡಿದೆ.

No comments:

Post a Comment

Blog Archive

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು, ಪಟ್ಟಿ, ನಕ್ಷೆ, ಹೆಸರುಗಳು, ಮೊದಲ, ದೊಡ್ಡದು

  ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು: ಕೂಡಂಕುಳಂ ಪರಮಾಣು ವಿದ್ಯುತ್ ಸ್ಥಾವರವು ಭಾರತದ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರವಾಗಿದೆ. ಭಾರತದಲ್ಲಿನ ಪರಮಾಣು ವಿದ್ಯುತ್ ಸ್ಥಾವರಗಳ ಪಟ್ಟಿ, ನಕ್ಷೆ, ಹೆಸರುಗಳು, ಮೊದಲ ಮತ್ತು ದೊಡ್ಡದು,       ಪರಿವಿಡಿ ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು:  ರಾಷ್ಟ್ರದ ಶಕ್ತಿಯ ಮಿಶ್ರಣದ ಮಹತ್ವದ ಭಾಗವಾಗಿರುವ ಪರಮಾಣು ಶಕ್ತಿಯನ್ನು ಅನುಸರಿಸುವಾಗ ವಿವಿಧ ಶಕ್ತಿ ಮೂಲಗಳ ನಡುವೆ ಉತ್ತಮವಾದ ಸಮತೋಲನವನ್ನು ಹುಡುಕಲಾಗುತ್ತಿದೆ. ಒಂದು ಕ್ಲೀನ್, ಪರಿಸರ ಪ್ರಯೋಜನಕಾರಿ ಬೇಸ್ ಲೋಡ್ ಶಕ್ತಿಯ ಮೂಲ, ಇದು ಗಡಿಯಾರದ ಸುತ್ತ ಪ್ರವೇಶಿಸಬಹುದಾಗಿದೆ. ಹೆಚ್ಚುವರಿಯಾಗಿ, ಇದು ರಾಷ್ಟ್ರದ ಸುಸ್ಥಿರ ದೀರ್ಘಕಾಲೀನ ಇಂಧನ ಭದ್ರತೆಯನ್ನು ಭದ್ರಪಡಿಸುವ ಅಗಾಧ ಭರವಸೆಯನ್ನು ಹೊಂದಿದೆ. ಕಲ್ಲಿದ್ದಲು, ಅನಿಲ, ಗಾಳಿ ಮತ್ತು ಜಲವಿದ್ಯುತ್ ನಂತರ, ಪರಮಾಣು ಶಕ್ತಿಯು ಭಾರತದಲ್ಲಿ ವಿದ್ಯುತ್ ಉತ್ಪಾದನೆಯ ಐದನೇ ಅತಿದೊಡ್ಡ ಮೂಲವಾಗಿದೆ. ರಾಷ್ಟ್ರದಲ್ಲಿ 22 ರಿಯಾಕ್ಟರ್‌ಗಳು 2021 ರ ಹೊತ್ತಿಗೆ 80% ಪ್ಲಾಂಟ್ ಲೋಡ್ ಫ್ಯಾಕ್ಟರ್‌ಗಿಂತ ಹೆಚ್ಚು ಚಾಲನೆಯಲ್ಲಿವೆ, ಸಂಯೋಜಿತ ಸ್ಥಾಪಿತ ಸಾಮರ್ಥ್ಯ 6780 MW. ನಾಲ್ಕು ಲಘು ನೀರಿನ ರಿಯಾಕ್ಟರ್‌ಗಳು ಮತ್ತು ಹದಿನೆಂಟು ಒತ್ತಡದ ಭಾರೀ ನೀರಿನ ರಿಯಾಕ್ಟರ್‌ಗಳು (...

ಆಮ್ಲಗಳು, ಕ್ಷಾರಗಳು ಮತ್ತು ಲವಣಗಳು ಯಾವುವು?

ಕಿತ್ತಳೆ , ನಿಂಬೆ ಮುಂತಾದ ಹಣ್ಣುಗಳಲ್ಲಿ ಸಿಟ್ರಿಕ್ ಆಮ್ಲ , ಹುಣಸೆ ಹಣ್ಣಿನಲ್ಲಿ ಟಾರ್ಟಾರಿಕ್ ಆಮ್ಲ , ಸೇಬಿನಲ್ಲಿರುವ ಮಾಲಿಕ್ ಆಮ್ಲ ಮತ್ತು ಹಾಲು ಮತ್ತು ಹಾಲಿನ ಉತ್ಪನ್ನಗಳಲ್ಲಿ ಲ್ಯಾಕ್ಟಿಕ್ ಆಮ್ಲ , ಗ್ಯಾಸ್ಟ್ರಿಕ್ ಜ್ಯೂಸ್‌ನಲ್ಲಿ ಹೈಡ್ರೋಕ್ಲೋರಿಕ್ ಆಮ್ಲದಂತಹ ಅನೇಕ ಆಮ್ಲಗಳು ಮತ್ತು ಬೇಸ್‌ಗಳು ಪ್ರಕೃತಿಯಲ್ಲಿ ನೈಸರ್ಗಿಕವಾಗಿ ಕಂಡುಬರುತ್ತವೆ. ಅಂತೆಯೇ , ಸುಣ್ಣದ ನೀರಿನಂತಹ ಅನೇಕ ನೆಲೆಗಳು ಕಂಡುಬರುತ್ತವೆ.   ನಾವು ನಮ್ಮ ದಿನನಿತ್ಯದ ಜೀವನದಲ್ಲಿ ಇಂತಹ ಅನೇಕ ಆಮ್ಲಗಳನ್ನು ಬಳಸುತ್ತೇವೆ , ಉದಾಹರಣೆಗೆ ಅಡುಗೆಮನೆಯಲ್ಲಿ ವಿನೆಗರ್ ಅಥವಾ ಅಸಿಟಿಕ್ ಆಮ್ಲ , ಲಾಂಡ್ರಿಗಾಗಿ ಬೋರಿಕ್ ಆಮ್ಲ , ಅಡುಗೆ ಉದ್ದೇಶಕ್ಕಾಗಿ ಅಡಿಗೆ ಸೋಡಾ , ಸ್ವಚ್ಛಗೊಳಿಸಲು ತೊಳೆಯುವ ಸೋಡಾ ,   ಇತ್ಯಾದಿ   . ವಿಷಯ ಕೋಷ್ಟಕ ವ್ಯಾಖ್ಯಾನಗಳು ಶಿಫಾರಸು ಮಾಡಿದ ವೀಡಿಯೊಗಳು ಆಮ್ಲಗಳು ಆಧಾರಗಳು ಲವಣಗಳು ಪದೇ ಪದೇ ಕೇಳಲಾಗುವ ಪ್ರಶ್ನೆಗಳು - FAQ ಗಳು ನಾವು ಮನೆಯಲ್ಲಿ ಸೇವಿಸದ ಅನೇಕ ಆಮ್ಲಗಳನ್ನು ಪ್ರಯೋಗಾಲಯಗಳು ಮತ್ತು ಕೈಗಾರಿಕೆಗಳಲ್ಲಿ ಬಳಸಲಾಗುತ್ತದೆ , ಇದರಲ್ಲಿ HCl, H   2   SO   4   ಇತ್ಯಾದಿ ಆಮ್ಲಗಳು ಮತ್ತು NaOH, KOH ಇತ್ಯಾದಿ ಬೇಸ್‌ಗಳು ಸೇರಿವೆ. ಈ ಆಮ್ಲಗಳು ಮತ್ತು ಬೇಸ್‌ಗಳನ್ನು ಮಿಶ್ರಣ ಮಾಡಿದಾಗ ಸರಿಯಾದ ಪ್ರಮಾಣದಲ್ಲಿ ,   ತಟಸ್ಥೀಕರಣ ಕ್ರಿಯೆಯು   ಉಪ್ಪು ಮತ್ತ...

ಅಸಹಕಾರ ಚಳುವಳಿ, ಕಾರಣಗಳು, ಪರಿಣಾಮಗಳು, ಮಹತ್ವ

ಬ್ರಿಟಿಷ್ ಸರ್ಕಾರದ ನಿಯಮಗಳನ್ನು ಬಹಿಷ್ಕರಿಸಲು ಮತ್ತು ಭಾರತದಲ್ಲಿ ಪೂರ್ಣ ಸ್ವರಾಜ್ಯವನ್ನು ಜಾರಿಗೆ ತರಲು ಮಹಾತ್ಮಾ ಗಾಂಧಿಯವರು 1920 ರಲ್ಲಿ ಅಸಹಕಾರ ಚಳುವಳಿಯನ್ನು ಪ್ರಾರಂಭಿಸಿದರು.  1922 ರ ವೇಳೆಗೆ ಅಸಹಕಾರ ಚಳುವಳಿ ಕೊನೆಗೊಂಡಿತು. ಪರಿವಿಡಿ ಅಸಹಕಾರ ಚಳುವಳಿ ಎಂದರೇನು ? ಭಾರತಕ್ಕೆ ಸ್ವರಾಜ್ ಅಥವಾ ಸ್ವರಾಜ್ಯ ನೀಡಲು ಭಾರತದ ಬ್ರಿಟಿಷ್ ಸರ್ಕಾರವನ್ನು ಮನವೊಲಿಸಲು ಮಹಾತ್ಮ ಗಾಂಧಿಯವರು 1920-1922 ರಿಂದ   ಅಸಹಕಾರ ಚಳವಳಿಯನ್ನು   ಸಂಘಟಿಸಿದರು .   ಇದು ವ್ಯಾಪಕವಾದ ನಾಗರಿಕ ಅಸಹಕಾರ ಚಳವಳಿಯ  ( ಸತ್ಯಾಗ್ರಹ) ಗಾಂಧಿಯವರ ಆರಂಭಿಕ ಯೋಜಿತ ನಿದರ್ಶನಗಳಲ್ಲಿ ಒಂದಾಗಿದೆ  .  ಅಸಹಕಾರ ಚಳವಳಿಯು ಸೆಪ್ಟೆಂಬರ್ 1920 ಮತ್ತು ಫೆಬ್ರವರಿ 1922 ರ ನಡುವೆ ಅಸ್ತಿತ್ವದಲ್ಲಿತ್ತು ಎಂದು ಹೇಳಲಾಗುತ್ತದೆ. ಇದು ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಹೊಸ ಅಧ್ಯಾಯದ ಆರಂಭವನ್ನು ಪ್ರತಿನಿಧಿಸುತ್ತದೆ. ಜಲಿಯನ್ ವಾಲಾ ಬಾಗ್ ಹತ್ಯಾಕಾಂಡವು ಅಸಹಕಾರ ಚಳವಳಿಯ ಆರಂಭಕ್ಕೆ ವೇಗವರ್ಧಕವಾಗಿ ಕಾರ್ಯನಿರ್ವಹಿಸಿತು , ನಂತರ 1922 ರ   ಚೌರಿ ಚೌರಾ ಘಟನೆಯ   ಕಾರಣದಿಂದಾಗಿ ಅದನ್ನು ಸ್ಥಗಿತಗೊಳಿಸಲಾಯಿತು . ಮಹಾತ್ಮಾ ಗಾಂಧಿಯವರ   ಅಸಹಕಾರ ಚಳುವಳಿ ಮಹಾತ್ಮಾ ಗಾಂಧಿಯವರು ಅಸಹಕಾರ ಚಳವಳಿಯ   ಪ್ರಮುಖ ಪ್ರತಿಪಾದಕರು  .  ಅವರು ಮಾರ್ಚ್ 1920 ರಲ್ಲಿ ಚಳುವಳಿಯ ಅಹಿಂಸಾತ್ಮಕ ಅ...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.