mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header

Wednesday, 12 May 2021

ರಾಷ್ಟ್ರೀಯ ಮತದಾರರ ದಿನ

     2021ರ ಜನವರಿ 25 ರಂದು ಭಾರತದಲ್ಲಿ IIನೇ ಆವೃತ್ತಿಯ ರಾಷ್ಟ್ರೀಯ ಮತದಾರರ ದಿನವನ್ನು (NVD National Voters Day) Making our Voters Empowered, Vigilant, Safe Informed & ಧೈಯವಾಕ್ಯದಲ್ಲಿ ಆಚರಿಸಲಾಗಿದೆ. ನವದೆಹಲಿಯಲ್ಲಿ ಚುನಾವಣಾ ಆಯೋಗದಿಂದ ಆಚರಿಸಿದ ಮತದಾರರ ದಿನದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮುಖ್ಯ ಅತಿಥಿಗಳಾಗಿದ್ದರು. ಪ್ರಧಾನಿ ಮೋದಿ ಅವರು ಈ ಸಂದರ್ಭದಲ್ಲಿ ಕೇಂದ್ರ ಚುನಾವಣಾ ಆಯೋಗಕ್ಕೆ ಶುಭಾಶಯ ಕೋರಿದರು. ದೇಶಾದ್ಯಂತ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯಂತ ಪ್ರಮುಖ

ಘಟ್ಟವಾದ ಚುನಾವಣಾ ಪ್ರಕ್ರಿಯೆಯಲ್ಲಿ ಜವಾಬ್ದಾರಿಯುತ ನಾಗರಿಕರ ಮತದಾನದ ಬಗ್ಗೆ ಅರಿವನ್ನು ಮೂಡಿಸುವುದು, ಜತೆಗೆ ಮತದಾರರ ಪಟ್ಟಿಗೆ ಹೊಸದಾಗಿ ನೋಂದಣಿಯಾಗುವ ಯುವ ಮತದಾರರಿಗೆ ಗುರುತಿನ ಚೀಟಿ (EPIC-Elector Photo Identity Card) ವಿತರಿಸುವುದು ಉದ್ದೇಶವಾಗಿದೆ. ಕೋವಿಡ್-19ರ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆಯುವ ಯಾವುದೇ ಚುನಾವಣೆಗಳನ್ನು ಸುರಕ್ಷಿತವಾಗಿ ನಡೆಸುವ ಜವಾಬ್ದಾರಿಯನ್ನು ಹೊಂದಿದೆ. ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಇಲಾಖೆ ಸಚಿವ ರವಿಶಂಕರ್ ಪ್ರಸಾದ್ ಅವರು ಈ ಸಂದರ್ಭದಲ್ಲಿ ಕೋವಿಡ್ ಸಾಂಕ್ರಾಮಿಕತೆ ಸಂದರ್ಭದಲ್ಲಿ ಕೈಗೊಂಡ ಚುನಾವಣೆಗಳ ಕೆಲವು ತುಣುಕುಗಳನ್ನು ತಿಳಿಸುವ ಫೋಟೋ, 2019ರಲ್ಲಿ ನಡೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕೈಗೊಂಡ SVEEP Systematic Voters Education & Electoral Participation ಕಾರ್ಯಕ್ರಮದ ಅರಿವು ಪುಸ್ತಕ ಹಾಗೂ ಚುನಾವಣಾ ಆಯೋಗದ ವತಿಯಿಂದ ಸಿದ್ಧವಾಗಿರುವ ಮತದಾರರ ಶಿಕ್ಷಣದ ಕಾಮಿಕ್ ಪುಸ್ತಕವಾದ Chalo Karen Matdaan ಅನ್ನು ಬಿಡುಗಡೆ ಮಾಡಿದರು.

    

2021ರ ರಾಷ್ಟ್ರೀಯ ಚುನಾವಣಾ ಪ್ರಶಸ್ತಿ ಪ್ರದಾನ


        2021ರ ಜನವರಿ 25ರಂದು ಚುನಾವಣಾ ಆಯೋಗದ ವತಿಯಿಂದ ಆಯ್ಕೆಮಾಡಿದ 2020-21ರ ಅವಧಿಯ ರಾಷ್ಟ್ರೀಯ ಚುನಾವಣಾ 17 ಪ್ರಶಸ್ತಿಗಳನ್ನು (National Awards for the year 2020-21) ರಾಷ್ಟ್ರಪತಿಗಳು ಪ್ರದಾನ ಮಾಡಿದರು. ಐಟಿ ವಿಧಾನಗಳ ಅಳವಡಿಕೆ ಭದ್ರತಾ ನಿರ್ವಹಣೆ, ಕೋವಿಡ್-19ರ ಸಂದರ್ಭದಲ್ಲಿ ಸುರಕ್ಷಿತ ಚುನಾವಣಾ ನಿರ್ವಹಣೆ, ಮತದಾರರಲ್ಲಿ ಜಾಗೃತಿ ಮೂಡಿಸಿದ ಚುನಾವಣಾ ಅಧಿಕಾರಿಗಳನ್ನು ಈ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿತ್ತು. ಕೋವಿಡ್-19ರ ಸಾಂಕ್ರಾಮಿಕತೆ ಅವಧಿಯಲ್ಲಿ ದೇಶದಲ್ಲಿ ಮೊದಲ ಬಾರಿಗೆ ಚುನಾವಣೆ ನಡೆಸಿದ ರಾಜ್ಯ ಎಂಬ ಹೆಗ್ಗಳಿಕೆಯನ್ನು ಬಿಹಾರ ರಾಜ್ಯವು ಹೊಂದಿದ್ದು, ಈ ರಾಜ್ಯದ ಚುನಾವಣಾ ನಿರ್ವಹಣೆಯ ಜವಾಬ್ದಾರಿ ಹೊಂದಿದ್ದ ಆಯೋಗದ ಸಿಇಒ ಎಚ್.ಆರ್ ಶ್ರೀನಿವಾಸ್ ಸೇರಿದಂತೆ 7 ಜನ ಬಿಹಾರದ ಚುನಾವಣಾ ಅಧಿಕಾರಿಗಳಿಗೆ ರಾಷ್ಟ್ರೀಯ ಚುನಾವಣಾ ಪ್ರಶಸ್ತಿ (Best Electoral Practices Award)ಲಭಿಸಿದೆ. ಬಿಹಾರ ಮೂಲದ ಸರ್ಕಾರೇತರ ಸಂಘಟನೆಯಾದ JEEVIKA ಬಿಹಾರದ ಚುನಾವಣೆ ಸಂದರ್ಭದಲ್ಲಿ ಅರಿವು ಮೂಡಿಸಿದ್ದ ಕಾರಣದಿಂದಲೂ ಪ್ರಶಸ್ತಿ ಪಡೆದಿತ್ತು. ಮೇಘಾಲಯ ರಾಜ್ಯ ಚುನಾವಣಾ ಆಯೋಗವು ಚುನಾವಣೆಯಲ್ಲಿ ಉತ್ತಮ ಮಾಹಿತಿ ತಂತ್ರಜ್ಞಾನ ಅನ್ವಯಿಕೆಗಾಗಿ ವಿಶೇಷ ಪ್ರಶಸ್ತಿ ಪಡೆದಿದೆ.


   ಭಾರತದಲ್ಲಿ ರಾಷ್ಟ್ರೀಯ ಮತದಾರರ ದಿನದ ಆಚರಣೆ ಹಿನ್ನೆಲೆ


         1950ರ ಜನವರಿ 25 ರಂದು ಕೇಂದ್ರ ಚುನಾವಣಾ ಆಯೋಗವು ಸಂವಿಧಾನದ 15ನೇ ಭಾಗದ 324ನೇ ವಿಧಿ ಅನ್ವಯ ಸ್ಥಾಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜನವರಿ 25 ಅನ್ನು ಪ್ರತಿ ವರ್ಷ ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತದೆ. 2011ರ ಜನವರಿ 25 ರಂದು ಮೊದಲ ಬಾರಿಗೆ ರಾಷ್ಟ್ರೀಯ ಮತದಾರರ ದಿನವನ್ನು ಅಂದಿನ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಚುನಾವಣಾ ಆಯೋಗದ 61ನೇ ಸಂಸ್ಥಾಪನಾ ದಿನದ ಅಂಗವಾಗಿ ಆಚರಿಸಲು ನಿರ್ಧರಿಸಿದರು. 2020ರ ಮತದಾರರ ದಿನದ Electoral Literacy for Stronger Democracy. ಹಲೋ ವೋಟರ್‌ (Hello Voters) ವೆಬ್ ರೇಡಿಯೋ : ಚುನಾವಣಾ ಆಯೋಗವು ಹಲೋ ವೋಟರ್ ಹೆಸರಿನ ಆನ್‌ಲೈನ್‌ ಡಿಜಿಟಲ್ ರೇಡಿಯೋ ಸೇವೆ ಆರಂಭಿಸಿದ್ದು, ಈ ಸೇವೆಗೆ ಭಾರತದ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು ಚಾಲನೆ ನೀಡಿದರು. ಈ ರೇಡಿಯೋ ಮತದಾರರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಬಿತ್ತರಿಸುವುದು. ಗೀತೆ, ನಾಟಕ, ಚರ್ಚೆ, ಕಥೆಗಳ ಮೂಲಕ ಚುನಾವಣೆಯ ಬಗ್ಗೆ ಹಿಂದಿ, ಇಂಗ್ಲಿಷ್ ಹಾಗೂ ಪ್ರಾದೇಶಿಕ ಭಾಷೆಗಳಲ್ಲಿ ಕಾರ್ಯಕ್ರಮಗಳನ್ನು ಈ ರೇಡಿಯೋ ಸೇವೆ ನೀಡುತ್ತದೆ.


     ಚುನಾವಣಾ ಆಯುಕ್ತ ಸುನೀಲ್‌ ಅರೋರಾ ಅವರು 2021ರ ಜನವರಿ 15ರಂದು ಕೋಮಲ್ ಜೈನ್ ಅವರು ಬರೆದ “Electoral Reforms in India' ಪುಸ್ತಕವನ್ನು ಬಿಡುಗಡೆಗೊಳಿಸಿದರು. ಬಿಬಿಎಂಪಿ ಆಯುಕ್ತ ಎಂ. ಮಂಜುನಾಥ್ ಪ್ರಸಾದ್‌ರವರು ರಾಜ್ಯಮಟ್ಟದ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ ಪಡೆದಿದ್ದಾರೆ.


   ಕೇಂದ್ರ ಚುನಾವಣಾ ಆಯೋಗ (ECI- Election Commission Of India) ದ ಬಗ್ಗೆ ಮಾಹಿತಿ


ಸ್ಥಾಪನೆ: 1950ರ ಜನವರಿ 25, 

ಕೇಂದ್ರ ಕಚೇರಿ: ನವದೆಹಲಿ, 

ವಿಶೇಷತೆ: ಸಾಂವಿಧಾನಿಕ ಮತ್ತು ಶಾಸನಬದ್ಧ ಸಂಸ್ಥೆ 

ಕಾರ್ಯಗಳು: 1950-1951ರ ಜನತಾ ಪ್ರಾತಿನಿಧ್ಯ ಕಾಯಿದೆ ಅನ್ವಯ ಚುನಾವಣೆಯನ್ನು ನಡೆಸುವುದು, ರಾಜಕೀಯ ಪಕ್ಷಗಳಿಗೆ ಮಾಹಿತಿ  ನೀಡುವುದು, ಚುನಾವಣಾ ನೀತಿ ಸಂಹಿತೆ (MCC-Model Code of Conduct) ರೂಪಿಸುವುದು. ಕೇಂದ್ರ ಚುನಾವಣಾ ಆಯೋಗವು ರಾಷ್ಟ್ರಪತಿ, ಉಪ ರಾಷ್ಟ್ರಪತಿ, ರಾಜ್ಯಸಭೆ, ಲೋಕಸಭೆ, ವಿಧಾನಸಭೆ, ವಿಧಾನ ಪರಿಷತ್ ಸದನಗಳ ಸದಸ್ಯರುಗಳನ್ನು ಆಯ್ಕೆ ಮಾಡುವ ಚುನಾವಣೆಯನ್ನು ನಡೆಸುತ್ತದೆ. 1951ರ ಅಕ್ಟೋಬರ್ 25 ರಿಂದ 1952ರ ಫೆಬ್ರವರಿ 21 ರವರೆಗೆ ಭಾರತದಲ್ಲಿ ಮೊದಲ ಬಾರಿಗೆ ಲೋಕಸಭಾ ಸಾರ್ವತ್ರಿಕ ಚುನಾವಣೆ ಜರುಗಿತ್ತು. ಕೇಂದ್ರ ಚುನಾವಣಾ ಆಯುಕ್ತರು: ರಾಷ್ಟ್ರಪತಿ ಅವರಿಂದ ಆಯುಕ್ತರು ನೇಮಕಗೊಂಡು 6 ವರ್ಷ ಅಥವಾ 65ನೇ ವರ್ಷ ವಯಸ್ಸಿನವರೆಗೆ ಅಧಿಕಾರದಲ್ಲಿರುತ್ತಾರೆ. ಸುಕುಮಾರ್ ಸೇನ್ ಅವರು ಆಯೋಗದ ಸಂಸ್ಥಾಪಕ ಮತ್ತು ಮೊದಲ ಮುಖ್ಯ ಆಯುಕ್ತರಾಗಿದ್ದರು. ಆಯೋಗದ ಆಯುಕ್ತರಾಗಿ

ಕಾರ್ಯನಿರ್ವಹಿಸಿದ ಮೊದಲ ಮತ್ತು ಏಕೈಕ ಮಹಿಳೆ ಎಂಬ ಕೀರ್ತಿಗೆ ವಿ.ಎಸ್. ರಮಾದೇವಿ ಪಾತ್ರರಾಗಿದ್ದಾರೆ. ಭಾರತದ 10ನೇ ಚುನಾವಣಾ

ಆಯುಕ್ತರಾಗಿ ಮತ್ತು ದೇಶದ ಚುನಾವಣೆಗಳ ಸುಧಾರಕ ಎಂದು ಗುರುತಿಸಲ್ಪಟ್ಟಿದ್ದ ಟಿ.ಎನ್. ಶೇಷನ್ ಅವರು 2019ರ ನವೆಂಬರ್ 10 ನಿಧನರಾದರು.ಸುನೀಲ್ ಅರೋರಾ ಅವರು 23ನೇ ಚುನಾವಣಾ ಮುಖ್ಯ ಆಯುಕ್ತರಾಗಿ 2018ರ ಡಿಸೆಂಬರ್ 2 ರಿಂದ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ ರಾಜೀವ್

ಕುಮಾರ್ ಮತ್ತು ಸುಶೀಲ್ ಚಂದ್ರ ಅವರು ಆಯೋಗದ ಇತರ ಆಯುಕ್ತರುಗಳಾಗಿದ್ದಾರೆ. (ಅಶೋಕ್ ಲವಾಸ ಅವರು 2020ರ ಆಗಸ್ಟ್ 18 ರಂದು ಚುನಾವಣಾ ಆಯುಕ್ತ ಹುದ್ದೆಗೆ ರಾಜೀನಾಮೆ ನೀಡಿ ಮನಿಲಾದಲ್ಲಿರುವ ಏಷ್ಯಾ ಅಭಿವೃದ್ಧಿ ಬ್ಯಾಂಕ್‌ನ ಉಪಾಧ್ಯಕ್ಷರಾಗಿ ನೇಮಕವಾಗಿದ್ದಾರೆ).

   

No comments:

Post a Comment

Blog Archive

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

Current Affairs Quiz - September, 2021

  1 ಇತ್ತೀಚೆಗೆ ನಿಧನರಾದ ಬುದ್ಧದೇವ್ ಗುಹಾ ಯಾವ ವೃತ್ತಿಯೊಂದಿಗೆ ಸಂಬಂಧ ಹೊಂದಿದ್ದರು ? [A] ಕ್ರೀಡಾಪಟು [B] ಬರಹಗಾರ [C] ರಾಜಕಾರಣಿ [D] ವ್ಯಾಪಾರ-ವ್ಯಕ್ತಿ answar ಸರಿಯಾದ ಉತ್ತರ:   ಬಿ [ಬರಹಗಾರ] ಟಿಪ್ಪಣಿಗಳು: ಮಧುಕಾರಿ ಸೇರಿದಂತೆ ಹಲವಾರು ಜನಪ್ರಿಯ ಪುಸ್ತಕಗಳನ್ನು ಬರೆದ ಖ್ಯಾತ ಬಂಗಾಳಿ ಬರಹಗಾರ ಬುದ್ಧದೇವ್ ಗುಹಾ ಇತ್ತೀಚೆಗೆ ನಿಧನರಾದರು. ಬರಹಗಾರ ತನ್ನ 85 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಆನಂದ ಪುರಸ್ಕಾರ ಮತ್ತು ಶರತ್ ಪುರಸ್ಕಾರ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದರು. ಬಂಗಾಳಿ ಸಾಹಿತ್ಯದ ಲೇಖಕರು , ' ಕೋಯೆಲ್ ', ' ಕೋಜಗರ್ ', ' ಮಧುಕರಿ ', ' ಜಂಗಲಮಹಲ್ ', ' ಚರಿಬೇತಿ ' ಇತ್ಯಾದಿಗಳನ್ನು ಒಳಗೊಂಡಂತೆ ಗಮನಾರ್ಹ ಪುಸ್ತಕಗಳನ್ನು ಬರೆದಿದ್ದಾರೆ. ಅವರು ಬಂಗಾಳಿ ಸಾಹಿತ್ಯದಲ್ಲಿ ' ರಿವು ಮತ್ತು ರಿಜುಡಾ ' ಹೆಸರಿನ ಎರಡು ಜನಪ್ರಿಯ ಕಾಲ್ಪನಿಕ ಪಾತ್ರಗಳ ಸೃಷ್ಟಿಕರ್ತ. Current Affairs Quiz - October, 2021     2. ಇತ್ತೀಚೆಗೆ ಭಾರತ ಮತ್ತು ಅಲ್ಜೀರಿಯಾ ನಡುವಿನ ನೌಕಾ ವ್ಯಾಯಾಮವನ್ನು ಎಲ್ಲಿ ನಡೆಸಲಾಯಿತು ? [A] ಬಂಗಾಳ ಕೊಲ್ಲಿ [B] ಅರೇಬಿಯನ್ ಸಮುದ್ರ [C] ಹಿಂದೂ ಮಹಾಸಾಗರ [D] ಮೆಡಿಟರೇನಿಯನ್ ಸಮುದ್ರ answar ಸರಿಯಾದ ಉತ್ತರ:   ಡಿ [ಮೆಡಿಟರೇನಿಯನ್ ಸಮುದ್ರ] ಟಿಪ್ಪಣಿಗಳು: ಇತ್ತ...

ಭಾರತ ಸರ್ಕಾರದ ಕಾಯಿದೆ, 1858: ಪ್ರಮುಖ ಲಕ್ಷಣಗಳು

  ಕಂಪನಿಯ ಆಡಳಿತವನ್ನು ಕೊನೆಗೊಳಿಸಲು 1858 ರ ಭಾರತ ಸರ್ಕಾರದ ಕಾಯಿದೆಯನ್ನು ಅಂಗೀಕರಿಸಲಾಯಿತು ಮತ್ತು ಅದನ್ನು 1857 ರ ದಂಗೆಯ ಪರಿಣಾಮವಾಗಿ ಬ್ರಿಟಿಷ್ ಕಿರೀಟಕ್ಕೆ ವರ್ಗಾಯಿಸಲಾಯಿತು. ಭಾರತದ ಬ್ರಿಟಿಷ್ ಗವರ್ನರ್-ಜನರಲ್‌ಗೆ ವೈಸ್‌ರಾಯ್ ಎಂಬ ಬಿರುದನ್ನು ನೀಡಲಾಯಿತು , ಅವರು ರಾಜನ ಪ್ರತಿನಿಧಿಯಾದರು.   ಆಗಸ್ಟ್ 1858 ರಲ್ಲಿ , ಬ್ರಿಟಿಷ್ ಸಂಸತ್ತು ಕಂಪನಿಯ ಆಡಳಿತವನ್ನು ಕೊನೆಗೊಳಿಸುವ ಕಾಯಿದೆಯನ್ನು ಅಂಗೀಕರಿಸಿತು.   ಭಾರತದಲ್ಲಿ ಬ್ರಿಟಿಷ್ ಸರ್ಕಾರದ ನಿಯಂತ್ರಣವನ್ನು ಬ್ರಿಟಿಷ್ ಕಿರೀಟಕ್ಕೆ ವರ್ಗಾಯಿಸಲಾಯಿತು.   ಈ ಸಮಯದಲ್ಲಿ , ವಿಕ್ಟೋರಿಯಾ ಬ್ರಿಟನ್ನಿನ ರಾಣಿಯಾಗಿದ್ದಳು.   ಬ್ರಿಟನ್‌ನಲ್ಲಿನ ಸರ್ವೋಚ್ಚ ಸಂಸ್ಥೆಯು ಬ್ರಿಟಿಷ್ ಸಂಸತ್ತಾಗಿತ್ತು , ಇದಕ್ಕೆ ಬ್ರಿಟಿಷ್ ಸರ್ಕಾರವು ಜವಾಬ್ದಾರನಾಗಿದ್ದನು.   ಆದಾಗ್ಯೂ , ಬ್ರಿಟಿಷ್ ಸರ್ಕಾರದ ಎಲ್ಲಾ ಚಟುವಟಿಕೆಗಳನ್ನು ರಾಜನ ಹೆಸರಿನಲ್ಲಿ ನಡೆಸಲಾಯಿತು.   ರಾಜ್ಯ ಕಾರ್ಯದರ್ಶಿ ಎಂದು ಕರೆಯಲ್ಪಡುವ ಬ್ರಿಟಿಷ್ ಸರ್ಕಾರದ ಮಂತ್ರಿಯನ್ನು ಭಾರತ ಸರ್ಕಾರದ ಜವಾಬ್ದಾರಿಯನ್ನು ವಹಿಸಲಾಯಿತು.   ಬ್ರಿಟಿಷ್ ಸರ್ಕಾರವು ಸಂಸತ್ತಿಗೆ ಜವಾಬ್ದಾರರಾಗಿದ್ದರಿಂದ , ಭಾರತದ ಸರ್ವೋಚ್ಚ ಸಂಸ್ಥೆಯು ಬ್ರಿಟಿಷ್ ಸಂಸತ್ತಾಗಿತ್ತು.   ಭಾರತದ ಬ್ರಿಟಿಷ್ ಗವರ್ನರ್-ಜನರಲ್‌ಗೆ ಈಗ ವೈಸರಾಯ್ ಎಂಬ ಬಿರುದನ್ನು ನೀಡಲಾಯಿತು , ಅಂದರೆ ರಾಜನ ಪ್ರತಿನಿಧಿ. ...

ಗ್ರಹಗಳ ಚಲನೆಯ ಕೆಪ್ಲರ್ ನಿಯಮಗಳು

ಖಗೋಳಶಾಸ್ತ್ರದಲ್ಲಿ ,   ಕೆಪ್ಲರ್ನ ಗ್ರಹಗಳ ಚಲನೆಯ ನಿಯಮಗಳು   ಸೂರ್ಯನ ಸುತ್ತ ಗ್ರಹಗಳ ಚಲನೆಯನ್ನು ವಿವರಿಸುವ ಮೂರು ವೈಜ್ಞಾನಿಕ ಕಾನೂನುಗಳಾಗಿವೆ. ಕೆಪ್ಲರ್ನ ಮೊದಲ ನಿಯಮ - ಕಕ್ಷೆಗಳ ನಿಯಮ ಕೆಪ್ಲರ್ನ ಎರಡನೇ ನಿಯಮ - ಸಮಾನ ಪ್ರದೇಶಗಳ ಕಾನೂನು ಕೆಪ್ಲರ್ನ ಮೂರನೇ ನಿಯಮ - ಅವಧಿಗಳ ನಿಯಮ ಪರಿವಿಡಿ ಪರಿಚಯ ಮೊದಲ ಕಾನೂನು ಎರಡನೇ ಕಾನೂನು ಮೂರನೇ ಕಾನೂನು ಕೆಪ್ಲರ್ ಕಾನೂನುಗಳ ಪರಿಚಯ ಚಲನೆ ಯಾವಾಗಲೂ ಸಾಪೇಕ್ಷವಾಗಿರುತ್ತದೆ.   ಚಲನೆಯಲ್ಲಿರುವ ಕಣದ ಶಕ್ತಿಯ ಆಧಾರದ ಮೇಲೆ , ಚಲನೆಗಳನ್ನು ಎರಡು ವಿಧಗಳಾಗಿ ವರ್ಗೀಕರಿಸಲಾಗಿದೆ: ಬೌಂಡೆಡ್ ಮೋಷನ್ ಅನಿಯಮಿತ ಚಲನೆ ಸೀಮಿತ ಚಲನೆಯಲ್ಲಿ , ಕಣವು ಋಣಾತ್ಮಕ ಒಟ್ಟು ಶಕ್ತಿಯನ್ನು ಹೊಂದಿರುತ್ತದೆ ( E <0) ಮತ್ತು ಒಟ್ಟು ಶಕ್ತಿಯು ಯಾವಾಗಲೂ ಕಣದ ಸಂಭಾವ್ಯ ಶಕ್ತಿಗೆ   ಸಮನಾಗಿರುವ ಎರಡು ಅಥವಾ ಹೆಚ್ಚು ತೀವ್ರವಾದ ಬಿಂದುಗಳನ್ನು ಹೊಂದಿರುತ್ತದೆ   , ಅಂದರೆ , ಕಣದ ಚಲನ ಶಕ್ತಿಯು ಶೂನ್ಯವಾಗುತ್ತದೆ. ವಿಕೇಂದ್ರೀಯತೆಗೆ 0 ≤ e <1, E < 0 ದೇಹವು ಸೀಮಿತ ಚಲನೆಯನ್ನು ಸೂಚಿಸುತ್ತದೆ.   ವೃತ್ತಾಕಾರದ ಕಕ್ಷೆಯು ವಿಕೇಂದ್ರೀಯತೆಯನ್ನು ಹೊಂದಿದೆ e = 0, ಮತ್ತು ದೀರ್ಘವೃತ್ತದ ಕಕ್ಷೆಯು ವಿಕೇಂದ್ರೀಯತೆಯನ್ನು ಹೊಂದಿದೆ e <1. ಅನಿಯಮಿತ ಚಲನೆಯಲ್ಲಿ , ಕಣವು ಧನಾತ್ಮಕ ಒಟ್ಟು ಶಕ್ತಿಯನ್ನು ಹೊಂದಿರುತ್ತದೆ ( E...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.