mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header

Tuesday, 18 May 2021

ಕೃಷಿಯ ವಿಧಗಳು







ಕೃಷಿಯ ಮೇಲೆ ಕೆಲವು ಅಂಶಗಳು ಪ್ರಭಾವ ಬೀರುತ್ತವೆ. ಅವುಗಳೆಂದರೆ ಹವಾಮಾನ, ಮಣ್ಣು, ಭೂಸ್ವರೂಪಗಳು, ಕೃಷಿಗೆ ತಗಲುವ ವೆಚ್ಚ, ಸರಕುಗಳಿಗೆ ಮಾರುಕಟ್ಟೆ, ಸಾರಿಗೆ ಸೌಲಭ್ಯಗಳು, ಕಾರ್ಮಿಕರ ಲಭ್ಯತೆ ಮತ್ತು ಭೂಬಳಕೆ ವಿಧಾನ ಇತ್ಯಾದಿಗಳು ಪ್ರಮುಖವಾಗಿವೆ. ಭೌತಿಕ ಮತ್ತು ಸಾಮಾಜಿಕ ಆರ್ಥಿಕ ಅಂಶಗಳ ಆಧಾರದ ಮೇಲಿಂದ, ಕೃಷಿಯ ವಿಧಾನಗಳು ವಿಭಿನ್ನವಾಗಿರುತ್ತವೆ. ಆದ್ದರಿಂದ, ದೇಶದ ವಿವಿಧ ಪ್ರದೇಶಗಳಲ್ಲಿ ವಿವಿಧ ಪ್ರಕಾರದ ಕೃಷಿ ವಿಧಾನಗಳು ರೂಢಿಯಲ್ಲಿವೆ.

1) ಪ್ರಾಚೀನ ಜೀವನಾಧಾರ ವ್ಯವಸಾಯ,

ಆ) ವಲಸೆ ಜೀವನಾಧಾರ ಬೇಸಾಯ 

ಬ) ಸ್ಥಿರ ಜೀವನಾಧರ ಬೇಸಾಯ

2) ಸಾಂದ್ರ ಬೇಸಾಯ

3) ವಾಣಿಜ್ಯ ದೇಸಾಯ

4) ಮಿಶ್ರ ಬೇಸಾಯ

5) ತೋಟಗಾರಿಕೆ ಬೇಸಾಯ

6) ಒಣ ಬೇಸಾಯ

7) ಆರ್ದ ಬೇಸಾಯ

8) ನೀರಾವರಿ ಬೇಸಾಯ


1) ಪ್ರಾಚೀನ ಜೀವನಾಧಾರ ವ್ಯವಸಾಯ,
           ಕುಟುಂಬದ ಬಳಕೆಗಾಗಿ ಅಥವಾ ಜೀವನೋಪಾಯಕ್ಕಾಗಿ ಹಾಗೂ ವಾಣಿಜ್ಯ ಉದ್ದೇಶಕಲ್ಲದೆ ಬೆಳೆಗಳನ್ನು ಬೆಳೆಯುವ ಕೃಷಿ ಪದ್ಧತಿಗೆ "ಪ್ರಾಚೀನ ಜೀವನಾಧಾರ ಬೇಸಾಯ” ಎನ್ನುವರು. ರೈತರು ಪ್ರಾಚೀನ ಕೃಷಿ ವಿಧಾನಗಳನ್ನು ಅನುಸರಿಸುವರು. ಈ ರೀತಿಯ ಕೃಷಿಯು ಗುಡ್ಡಗಾಡು ಪ್ರದೇಶಗಳಲ್ಲಿ ವ್ಯಾಪಕವಾಗಿ ರೂಢಿಯಲ್ಲಿರುವುದು, ಅವು ಈಶಾನ್ಯ ಭಾರತದ ರಾಜ್ಯಗಳು, ಒಡಿಶಾ ಮತ್ತು ಮಧ್ಯಪ್ರದೇಶಗಳಲ್ಲಿ ರೂಢಿಯಲ್ಲಿದೆ. ಪ್ರಾಚೀನ ಜೀವನಾಧಾರ ಕೃಷಿಯಲ್ಲಿ ಎರಡು ವಿಧ. ಅವು ಅ) ವಲಸೆ ಜೀವನಾಧಾರ ಬೇಸಾಯ ಮತ್ತು ಬ) ಸ್ಥಿರ ಜೀವನಾಧಾರ ಬೇಸಾಯ.

ಆ) ವಲಸೆ ಜೀವನಾಧಾರ ಬೇಸಾಯ

ಉಷ್ಣವಲಯದ ಅತಿ ಹೆಚ್ಚು ಮಳೆಯಾಗುವ ಅರಣ್ಯ ಪ್ರದೇಶಗಳಲ್ಲಿ ಬುಡಕಟ್ಟು ಜನಾಂಗದವರಿಂದ ರೂಢಿಯಲ್ಲಿರುವ ಒಂದು ಪ್ರಾಚೀನ ಬೇಸಾಯ ಪದ್ಧತಿಯಾಗಿದೆ. ಈ ಪದ್ಧತಿಯಲ್ಲಿ ರೈತರು ಆರಣ್ಯಗಳ ಮಧ್ಯದಲ್ಲಿ ಪೊದೆ ಮತ್ತು ಮರಗಳನ್ನು ಕತ್ತರಿಸುವ ಮತ್ತು ಸುಡುವುದರ ಮೂಲಕ ಭೂಮಿಯನ್ನು ತೆರವುಗೊಳಿಸುವರು ಮತ್ತು ಸಾಗುವಳಿ ಮಾಡುವರು. ಕೆಲವು ವರ್ಷಗಳವರೆಗೂ ಈ ಬೇಸಾಯ ಕ್ರಮ ಮುಂದುವರೆಯುತ್ತದೆ. ಅನಂತರ ಆ ಪ್ರದೇಶವನ್ನು ಬಿಟ್ಟು ಬೇರೊಂದು ಭಾಗದ ಆರಣ್ಯ ಪ್ರದೇಶಕ್ಕೆ ಸ್ಥಳಾಂತರ ಹೊಂದುವರು. ಬೆಳೆಗಳನ್ನು ಬೆಳೆಯುವುದರ ಜೊತೆಗೆ, ಬೇಟೆಗಾರಿಕೆ, ಮೀನುಗಾರಿಕೆ ಮತ್ತು ಆರಣ್ಯ ಸಂಪನ್ಮೂಲಗಳ ಸಂಗ್ರಹ ಇತ್ಯಾದಿ ಚಟುವಟಿಕೆಗಳಲ್ಲಿ ಜನರು ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ.

ಈ ಪ್ರಕಾರದ ಕೃಷಿಯನ್ನು ವಿವಿಧ ಸ್ಥಳೀಯ ಹೆಸರುಗಳಿಂದ ಕರೆಯುವರು, ಉದಾ: ಈಶಾನ್ಯ ಪ್ರದೇಶಗಳಲ್ಲಿ (ಅಸ್ಸಾಂ) 'ಝೂಮ್", ಒಡಿಶಾದಲ್ಲಿ ಕೋಮನ್, ಕೇರಳದಲ್ಲಿ 'ಫೋನಮ್', ಮತ್ತು ಆಂಧ್ರಪ್ರದೇಶದಲ್ಲಿ 'ಪೊಡು, ಇತ್ಯಾದಿ, ಮುಡಿಗೆಣಸು (ಯಾಮ್ಸ್), ನೆಲಗಡಲೆ, ಬೀನ್ಸ್, ಬಾಳೆಹಣ್ಣುಗಳು, ಮಲೆನಾಡಿನ ಭತ್ತ, ಬಕ್‌ಗೋಧಿ, ಮೆಕ್ಕೆಜೋಳ, ದ್ವಿದಳ ಧಾನ್ಯಗಳು ಮತ್ತು ಕೆಲವೊಮ್ಮೆ ತರಕಾರಿಗಳನ್ನೂ ಸಹ ವಲಸೆ ಬೇಸಾಯದಲ್ಲಿ ಬೆಳೆಯಲಾಗುತ್ತದೆ. ಇಂತಹ ಬೇಸಾಯವು ಆಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ತ್ರಿಪುರ, ಮಿರಾಂ, ಅರುಣಾಚಲ ಪ್ರದೇಶ, ಮಧ್ಯಪ್ರದೇಶದ ಕೆಲ ಭಾಗಗಳು, ಓಡಿಶಾ ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ರೂಢಿಯಲ್ಲಿದೆ.

ಬ) ಸ್ಥಿರ ಜೀವನಾಧಾರ ಬೇಸಾಯ

ಜನರು ಒಂದು ನಿರ್ಧಿಷ್ಟ ಪ್ರದೇಶದಲ್ಲಿ ಶಾಶ್ವತವಾಗಿ ನೆಲೆಸಿ ರೂಢಿಸಿಕೊಂಡಿರುವ ಒಂದು ಪ್ರಾಚೀನ ಕೃಷಿ ಪದ್ಧತಿಯಾಗಿದೆ. ಇಲ್ಲಿನ ಪ್ರಾಕೃತಿಕ ಅಂಶಗಳು ಸಾಗುವಳಿಗೆ ಅನುಕೂಲವಾಗಿರುತ್ತವೆ. ಕೃಷಿ ಭೂಮಿಯನ್ನು ಪಾಳುಬಿಡದೆ ಪ್ರತಿ ವರ್ಷವೂ ನಿರಂತರವಾಗಿ ಸಾಗುವಳಿ ಮಾಡುವರು, ಆದ್ದರಿಂದ ಈ ಪದ್ಧತಿಯನ್ನು 'ಸ್ಥಿರ ಜೀವನಾಧಾರ ಬೇಸಾಯ' ಎಂದು ಕರೆಯಲಾಗುತ್ತದೆ. ಈ ವಿಧಾನದಲ್ಲಿ ಹೆಚ್ಚುವರಿ ಕೃಷಿ ಉತ್ಪನ್ನಗಳನ್ನು ನೆರೆಯ ಜನರಿಗೆ ಮಾರಾಟ ಮಾಡಲಾಗುತ್ತದೆ. ಅಥವಾ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಲಾಗುತ್ತದೆ.

ಸ್ಥಿರ ಜೀವನಾಧಾರ ಬೇಸಾಯದಲ್ಲಿ ಹಾಲು, ಮಾಂಸ, ಉಣ್ಣೆ ಮತ್ತು ತೊಗಲು ಮುಂತಾದ ಉತ್ಪನ್ನಗಳಿಗಾಗಿ ಪ್ರಾಣಿಗಳನ್ನು ಸಾಕಲಾಗುತ್ತದೆ. ಇದನ್ನು ಅಲೆಮಾರಿ ಪಶುಪಾಲನೆ' ಎಂತಲೂ ಕರೆಯುವರು,

2) ಸಾಂದ್ರ ಬೇಸಾಯ

ಅಧಿಕ ಜನ ಸಾಂದ್ರತೆಯುಳ್ಳ ಪ್ರದೇಶಗಳಲ್ಲಿ ಭೂಹಿಡುವಳಿಯ ಗಾತ್ರವು ಚಿಕ್ಕದಾಗಿದ್ದು, ಬಹಳ ಸಾಂದ್ರ ಮತ್ತು ಹೆಚ್ಚು ಉತ್ಪಾದನೆ ಪಡೆಯುವ ಬೇಸಾಯ ಕ್ರಮವನ್ನು ಸಾಂದ್ರ ಬೇಸಾಯ' ಎನ್ನುವರು.

ಇದು ಹೆಚ್ಚು ಕಾರ್ಮಿಕರು (ಶ್ರಮ) ಮತ್ತು ಬಂಡವಾಳವನ್ನು ತೊಡಗಿಸುವ ಕೃಷಿಯಾಗಿದೆ. ಚಿಕ್ಕ ಭೂಹಿಡುವಳಿಗಳಲ್ಲಿ ಬೆಳೆಗಳ ಗರಿಷ್ಠ ಇಳುವರಿಯನ್ನು ಪಡೆಯುವುದಕ್ಕಾಗಿ ಹೆಚ್ಚು ಶ್ರಮ ಮತ್ತು ಬಂಡವಾಳವನ್ನು ತೊಡಗಿಸಲಾಗುತ್ತದೆ. ಲಭ್ಯವಿರುವ ಸಣ್ಣ ತುಂಡು ಭೂಮಿಯನ್ನು ವರ್ಷದುದ್ದಕ್ಕೂ ಸಾಗುವಳಿಗಾಗಿ ಉಪಯೋಗ ಮಾಡಲಾಗುತ್ತದೆ. ಈ ಪದ್ಧತಿಯಲ್ಲಿ ರೈತರು ಜಾಗರೂಕತೆಯಿಂದ ಮಣ್ಣನ್ನು ಉಳುಮೆ ಮಾಡುವುದರ ಜೊತೆಗೆ ಎರಡು ಅಥವಾ ಎರಡಕ್ಕಿಂತ ಹೆಚ್ಚು ಬೆಳೆಗಳನ್ನು ಬೆಳೆಯಲು ಪ್ರಯತ್ನಿಸುವರು, ರೈತರು ಪ್ರತಿ ಘಟಕ ಪ್ರದೇಶದಿಂದ ಹೆಚ್ಚು ಇಳುವರಿ ಮತ್ತು ಚಿಕ್ಕ ಭೂಹಿಡುವಳಿಯಲ್ಲೇ ಗರಿಷ್ಠ ಉತ್ಪಾದನೆಯನ್ನು ಪಡೆಯಲು ಪ್ರಯತ್ನಿಸುವುದೇ ಸಾಂದ್ರ ಬೇಸಾಯದ ಗುಣಲಕ್ಷಣ, ಈ ವಿಧದಲ್ಲಿ, ಕೃಷಿ ಕಾರ್ಯಾಚರಣೆಗಳು ಮಾನವನ ದೈಹಿಕ ಶ್ರಮ ಮತ್ತು ಪಾಣಿಗಳಿಂದ ನಿರ್ವಹಿಸಲಾಗುತ್ತದೆ. ಈ ಕೃಷಿ ಪದ್ಧತಿಯು ದೇಶದ ಫಲವತ್ತಾದ ಹಾಗೂ ನೀರಾವರಿ ಸೌಲಭ್ಯವಿರುವ ಭಾಗಗಳಲ್ಲಿ ಸರ್ವೆ ಸಾಮಾನ್ಯವಾದುದು, ಭತ್ತವು ಸಾಂದ್ರ ಬೇಸಾಯದ ಪ್ರಮುಖ ಬೆಳೆಯಾಗಿದೆ.

3) ವಾಣಿಜ್ಯ ಬೇಸಾಯ

ದೇಶೀಯ ಬಳಕೆಗಳಲ್ಲದೆ ಮಾರಾಟ ಮಾಡುವ ಉದ್ದೇಶದಿಂದ ಕೃಷಿ ಬೆಳೆಗಳನ್ನು ದೊಡ್ಡ ಪ್ರಮಾಣದಲ್ಲಿ ಉತ್ಪಾದಿಸುವುದನ್ನು 'ವಾಣಿಜ್ಯ ದೇಸಾಯ' ಎಂದು ಕರೆಯುವರು, ಈ ರೀತಿಯ ಕೃಷಿಯು ಸಾಮಾನ್ಯವಾಗಿ ಉತ್ತಮ ಸಾರಿಗೆ ಸೌಲಭ್ಯ, ಹೆಚ್ಚು ವಿಶಾಲವಾದ ವಿರಳ ಜನಸಂಖ್ಯೆಯನ್ನು ಹೊಂದಿರುವ ಪ್ರದೇಶಗಳಲ್ಲಿ ರೂಢಿಯಲ್ಲಿದೆ. ವಿಸ್ತಾರವಾದ ಜಮೀನುಗಳಲ್ಲಿ, ಕಡಿಮೆ ಶ್ರಮ, ದೊಡ್ಡ ಪ್ರಮಾಣದ ಯಂತ್ರೋಪಕರಣಗಳ ಬಳಕೆ, ಮಾರಾಟಕ್ಕಾಗಿ ಹಣದ ಬೆಳೆಗಳನ್ನು ಬೆಳೆಯಲಾಗುವುದು,

4) ಮಿಶ್ರ ಬೇಸಾಯ

ಬೆಳೆಗಳನ್ನು ಬೆಳೆಯುವದರ ಜೊತೆಗೆ ಜಾನುವಾರುಗಳ ಪಾಲನೆಯನ್ನು ಒಳಗೊಂಡಿರುವ ಕೃಷಿ ವಿಧಾನವನ್ನು ಮಾತ್ರ ದೇಸಾಯ' ಎಂದು ಕರೆಯುವರು. ಈ ಪದ್ಧತಿಯಲ್ಲಿ ಜಮೀನನ್ನು ಆಹಾರ ಮತ್ತು ವಾಣಿಜ್ಯ ಬೆಳೆಗಳನ್ನು ಬೆಳೆಯುವದಕಲ್ಲದೆ ಇತರ ಉದ್ದೇಶಗಳಿಗಾಗಿ ಬಳಸಲಾಗುತ್ತದೆ. ಅವುಗಳೆಂದರೆ ಜಾನುವಾರುಗಳ ಪಾಲನೆ, ಕೋಳಿ ಸಾಕಣೆ, ರೇಷ್ಮೆ ಕೃಷಿ, ಜೇನು ಸಾಕಣೆ ಇತ್ಯಾದಿ, ರೈತರು ಬೆಳೆ ಮತ್ತು ಜಾನುವಾರು ಸಾಕಣೆ ಎರಡೂ ಕಡೆಯಿಂದ ಹೆಚ್ಚು ಆದಾಯವನ್ನು ಪಡೆಯುವರು ಭಾರತದಲ್ಲಿ ಇದನ್ನು 1951 ರಿಂದ ಜಾರಿಗೆ ತರಲಾಯಿತು. ಇದು ಪ್ರಚಲಿತವಾಗಿರುವ ಪ್ರಮುಖ ರಾಜ್ಯಗಳೆಂದರೆ, ರಾಜಸ್ತಾನ, ಆಂಧ್ರಪ್ರದೇಶ, ಪಂಜಾಟ, ಹರಿಯಾಣ ಮತ್ತು ತಮಿಳುನಾಡು,

5) ನೆಡುತೋಟದ ಬೇಸಾಯ

ಒಂದೇ ತರಹದ ಹಣದ ಬೆಳೆಯನ್ನು ವಿಶಾಲವಾದ ಭೂಮಿ ಅಥವಾ ತೋಟಗಳಲ್ಲಿ ಬೆಳೆಯುವುದಕ್ಕೆ ನೆಡುತೋಟದ ದೇಸಾಯ' ಎಂದು ಕರೆಯುವರು, ವಿಶೇಷ ರೀತಿಯ ವಾಣಿಜ್ಯ ಮಾದರಿ ಬೇಸಾಯ. ಇದಕ್ಕೆ ಅಧಿಕ ಬಂಡವಾಳ ಮತ್ತು ಶ್ರಮದ ಅಗತ್ಯವಿರುತ್ತದೆ. ಮಾನವನ ದೈಹಿಕ ಶ್ರಮ ಮತ್ತು ನುರಿತ ಕಾರ್ಮಿಕರ ಪೂರೈಕೆ ಮುಖ್ಯವಾಗಿರುತ್ತದೆ. ಈ ವ್ಯವಸ್ಥೆಯಲ್ಲಿ ಆಧುನಿಕ ಮತ್ತು ವೈಜ್ಞಾನಿಕ ತಂತ್ರಗಳನ್ನು ಬಳಸಿಕೊಂಡು ಬೆಳೆಗಳನ್ನು ಮುಖ್ಯವಾಗಿ ರಫ್ತು ಮಾಡುವುದಕ್ಕೆ ಬೆಳೆಯಲಾಗುತ್ತದೆ, ಭಾರತದ ಪ್ರಮುಖ ನೆಡು ತೋಟದ ಬೆಳೆಗಳೆಂದರೆ, ಚಹ, ಕಾಫಿ ಮತ್ತು ರಬ್ಬರ್,

6). ಒಣಬೇಸಾಯ
ಕಡಿಮೆ ಮಳೆಯನ್ನು (ಅಂದರೆ 50 ಸೆಂ.ಮೀ ಗಿಂತ ಕಡಿಮೆ) ಪಡೆಯುವ, ನೀರಾವರಿ ಸೌಲಭ್ಯಗಳು ಬಹಳ ಸೀಮಿತ ಅಥವಾ ಇಲ್ಲದ ಪ್ರದೇಶಗಳಲ್ಲಿ ರೂಢಿಯಲ್ಲಿರುವ ಬೇಸಾಯ ಪದ್ಧತಿಯನ್ನು 'ಒಣ ಬೇಸಾಯ' ಎಂದು ಕರೆಯುವರು. ಈ ಪ್ರಕಾರದ ಬೇಸಾಯವು ದಕ್ಷಿಣ ಭಾರತದ ದಬ್ಬನ್ ಪ್ರಸ್ಥಭೂಮಿ, ಪಶ್ಚಿಮ ರಾಜಸ್ತಾನ, ಮತ್ತು ಇತರೆ ಶುಷ್ಕ ಮತ್ತು ಆರೆಶುಷ್ಕ ಪ್ರದೇಶಗಳಲ್ಲಿ ರೂಢಿಯಲ್ಲಿರುವುದು, ಕ್ಷಾಮ ಮತ್ತು ಬರಗಾಲಗಳು ಈ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಕಂಡು ಬರುತ್ತವೆ. ಇಲ್ಲಿ ಬೆಳೆಯುವ ಬೆಳೆಗಳು ಕಡಿಮೆ ಇಳುವರಿ ಒದಗಿಸುತ್ತವೆ. ಅಲ್ಪಾವಧಿಯಲ್ಲಿ ಫಸಲು ನೀಡುವ ಹಾಗೂ ಬರವನ್ನು ನಿಭಾಯಿಸಬಲ್ಲ ಬೆಳೆಗಳನ್ನು ಬೆಳೆಯಲಾಗುತ್ತದೆ. ಜೋಳ, ಸಜ್ಜೆ, ರಾಗಿ, ಎಣ್ಣೆಕಾಳುಗಳು ಒಣ ಬೇಸಾಯದ ಪ್ರಮುಖ ಬೆಳೆಗಳಾಗಿರುತ್ತವೆ.

7) ಅರ್ದ ಬೇಸಾಯ

ಸಾಕಷ್ಟು ಮಳೆಯನ್ನು ಪಡೆಯುವ ಪ್ರದೇಶಗಳಲ್ಲಿ ನೀರಾವರಿಯ ಸಹಾಯವಿಲ್ಲದೇ ಬೆಳೆಗಳನ್ನು ಬೆಳೆಯುವದಕ್ಕೆ ತು ಬೇಸಾಯ ಅಥವಾ ಆರ್ದ ಬೇಸಾಯ ಎಂದು ಕರೆಯುವರು. ಸಾಕಷ್ಟು ಮಳೆಯನ್ನು ಪಡೆಯುವ ಪ್ರದೇಶದಲ್ಲಿ ಅಂದರೆ

100 ರಿಂದ 150 ಸೆಂ.ಮೀ. ವಾರ್ಷಿಕ ಮಳೆಯಾಗುವ ಪ್ರದೇಶದಲ್ಲಿ ಎರಡು ಅಥವಾ ಬಹು ಬೆಳೆ ಪದ್ಧತಿಯು ರೂಢಿಯಲ್ಲಿರುವುದು. ಭತ್ತ, ಕಬ್ಬು, ಸೆಣಬು, ಚಹ, ಕಾಫಿ, ರಬ್ಬರ್ ಇತ್ಯಾದಿ ಬೆಳೆಗಳನ್ನು ಬೆಳೆಯಲಾಗುತ್ತದೆ. ಸಾಕಷ್ಟು ಮಳೆಯಾಗುವದರಿಂದ ಅಧಿಕ ಇಳುವರಿ ಮತ್ತು ಉತ್ತಮ ಗುಣಮಟ್ಟದ ಬೆಳೆಗಳನ್ನು ಬೆಳೆಯಲು ನೆರವಾಗುತ್ತದೆ.

8) ನೀರಾವರಿ ಬೇಸಾಯ

ನೀರಾವರಿ ಪೂರೈಕೆಮಾಡಿ ಬೆಳೆಗಳನ್ನು ಬೆಳೆಯುವುದಕ್ಕೆ “ನೀರಾವರಿ ಬೇಸಾಯ” ಎನ್ನುವರು. ಮಾನ್ಸೂನ್ ಮಳೆಯು ಋತುಕಾಲಿಕ, ಅನಿಶ್ಚಿತ ಮತ್ತು ಅನಿಯಮಿತವಾಗಿರುವುದರಿಂದ ಭಾರತದಲ್ಲಿ ಈ ರೀತಿಯ ಕೃಷಿ ವಿಧಾನವು ಅತ್ಯವಶ್ಯಕವಾಗಿರುತ್ತದೆ. ಭಾರತದಲ್ಲಿ ಹೆಚ್ಚು ವಿಸ್ತಾರ ಪ್ರದೇಶದ ಸಾಗುವಳಿ ಭೂಮಿಯು ನೀರಾವರಿಗೆ ಒಳಪಟ್ಟಿದೆ. ಈ ಪ್ರಕಾರದ ಬೇಸಾಯವು ಹೆಚ್ಚಾಗಿ ಉತ್ತರಪ್ರದೇಶ, ಪಂಜಾಬ, ಹರಿಯಾಣ, ಬಿಹಾರ, ಒಡಿಶಾ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳಲ್ಲಿ ಕೇಂದ್ರೀಕೃತವಾಗಿದೆ ಮತ್ತು ದೇಶದ ಅನೇಕ ಹಲವು ರಾಜ್ಯಗಳಲ್ಲಿಯೂ ಸಹ ರೂಢಿಯಲ್ಲಿದೆ.

No comments:

Post a Comment

Blog Archive

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

ಭಾರತದ ಪ್ರಮುಖ ಗವರ್ನರ್‌ಗಳು-ಜನರಲ್ ಮತ್ತು ವೈಸ್‌ರಾಯ್

  ಪರಿಚಯ 1600 ರ ಡಿಸೆಂಬರ್ 31 ರಂದು ಈಸ್ಟ್ ಇಂಡಿಯಾ ಕಂಪನಿಯು ರಾಣಿ ಎಲಿಜಬೆತ್ I ರಿಂದ ರಾಯಲ್ ಚಾರ್ಟರ್ ಪಡೆದಾಗ ಭಾರತದ ಮೇಲೆ ಬ್ರಿಟಿಷ್ ಆಡಳಿತವು ಒಂದು ವ್ಯಾಪಾರ ಘಟಕವಾಗಿ ಪ್ರಾರಂಭವಾಯಿತು . ಸುಮಾರು ಮೂರು ಶತಮಾನಗಳ ಅವಧಿಯಲ್ಲಿ , ಬ್ರಿಟಿಷರು ವ್ಯಾಪಾರ ಶಕ್ತಿಯಿಂದ ಅತ್ಯಂತ ಶಕ್ತಿಶಾಲಿ ರಾಷ್ಟ್ರಗಳಲ್ಲಿ ಒಂದಾದರು ಜಗತ್ತಿನಲ್ಲಿ . ಸಣ್ಣ ದ್ವೀಪ ದೇಶವಾದ ನಂತರವೂ ಬ್ರಿಟನ್ ವಿಶ್ವದ ಅತಿದೊಡ್ಡ ಸಾಮ್ರಾಜ್ಯಗಳಲ್ಲಿ ಒಂದನ್ನು ಸ್ಥಾಪಿಸಲು ಸಾಧ್ಯವಾಯಿತು .  " ಸೂರ್ಯನು ಎಂದಿಗೂ ಅಸ್ತಮಿಸದ ಸಾಮ್ರಾಜ್ಯ " ಎಂಬ   ಪದಗುಚ್ by ದಿಂದ ಸಾಮ್ರಾಜ್ಯದ ವ್ಯಾಪ್ತಿಯನ್ನು ಚಿತ್ರಿಸಬಹುದು   . ತನ್ನ ವಸಾಹತುಗಳಲ್ಲಿ ಸ್ಥಾಪಿಸಿದ ಬಲವಾದ ಮತ್ತು ಪರಿಣಾಮಕಾರಿ ಅಧಿಕಾರಶಾಹಿಯ ಹಿನ್ನೆಲೆಯಲ್ಲಿ ಬ್ರಿಟನ್ ಈ ಅದ್ಭುತ ಸಾಧನೆ ಮಾಡಲು ಸಾಧ್ಯವಾಯಿತು .  ಭಾರತದಲ್ಲಿ , ಗವರ್ನರ್ - ಜನರಲ್ ಮತ್ತು ವೈಸ್ ‌ ರಾಯ್ ‌ ಗಳ ಮೂಲಕ ಬ್ರಿಟಿಷರು ಈ ನಿಯಂತ್ರಣವನ್ನು ಸ್ಥಾಪಿಸಲು ಸಾಧ್ಯವಾಯಿತು . §   ಬಂಗಾಳದ ಗವರ್ನರ್ - ಜನರಲ್ (1773-1833):   ಈಸ್ಟ್ ಇಂಡಿಯಾ ಕಂಪನಿ ಭಾರತಕ್ಕೆ ಬಂದಾಗ , ಅದು " ಬಂಗಾಳದ ಗವರ್ನರ್ "  (   ಬಂಗಾಳದ   ಮೊದಲ ಗವರ್ನರ್ : ರಾಬರ್ಟ್ ಕ್ಲೈವ್ )   ಎಂಬ ಹುದ್ದೆ...

Microsoft Word Shortcut Keys: Mastering Document Creation 📝✨

  Creating documents in Microsoft Word can be a seamless and efficient experience if you harness the power of keyboard shortcuts. In this blog post, we will dive into all the essential Microsoft Word shortcut keys, exploring their uses and practical applications. We'll also sprinkle in some helpful emojis, keywords, hashtags, and related article web links to enhance your reading experience. Let's get started! Table of Contents Introduction to Microsoft Word Shortcuts Basic Navigation and Selection Shortcuts Formatting Text and Paragraphs Working with Documents and Files Inserting and Editing Content Miscellaneous Shortcuts Practical Applications and Tips Conclusion 1. Introduction to Microsoft Word Shortcuts 🚀 Microsoft Word is a powerful word processing tool, but navigating through menus and ribbons can be time-consuming. By using keyboard shortcuts, you can speed up your workflow, reduce repetitive strain, and become more efficient in creating and editing documents. 2. Bas...

ಭಾರತದ ನದಿಗಳು, ನಕ್ಷೆ, ಪಟ್ಟಿ, ಹೆಸರು, ಭಾರತದ ಉದ್ದವಾದ ನದಿಗಳು Rivers of India, Map, List, Name, Longest Rivers of India..

  ಭಾರತದ ನದಿಗಳು ಭಾರತದ ಜನರು ಮತ್ತು ಪರಿಸರದ ಜೀವನ ಮತ್ತು ಪರಿಸರದಲ್ಲಿ ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಭಾರತದ ನದಿಗಳ ಸಂಪೂರ್ಣ ವಿವರಗಳನ್ನು ಕೆಳಗೆ ನೀಡಲಾಗಿದೆ. UPSC, ಮುಖ್ಯಾಂಶಗಳು. ಪರಿವಿಡಿ   ಭಾರತದ ನದಿಗಳು ಭಾರತೀಯ ಜನರ ಜೀವನವು ಭಾರತದ ನದಿಗಳಿಂದ ಗಮನಾರ್ಹವಾಗಿ ಪ್ರಭಾವಿತವಾಗಿದೆ. ಶಕ್ತಿ , ಕೈಗೆಟುಕುವ ಸಾರಿಗೆ , ನೀರಾವರಿ ಮತ್ತು ಕುಡಿಯುವ ನೀರನ್ನು ಒದಗಿಸುವುದರ ಜೊತೆಗೆ , ರಾಷ್ಟ್ರದ ನದಿ ವ್ಯವಸ್ಥೆಗಳು ಹೆಚ್ಚಿನ ಸಂಖ್ಯೆಯ ಜನರ ಜೀವನೋಪಾಯವನ್ನು ಬೆಂಬಲಿಸುತ್ತವೆ. ಭಾರತದ ಪ್ರತಿಯೊಂದು ಪ್ರಮುಖ ನಗರವು ನದಿಯ ಉದ್ದಕ್ಕೂ ಏಕೆ ನೆಲೆಗೊಂಡಿದೆ ಎಂಬುದನ್ನು ಇದು ವಿವರಿಸುತ್ತದೆ. ದೇಶದ ಎಲ್ಲಾ ಹಿಂದೂಗಳು ನದಿಗಳನ್ನು ಪವಿತ್ರವೆಂದು ಪರಿಗಣಿಸುತ್ತಾರೆ ಏಕೆಂದರೆ ಅವು ಹಿಂದೂ ಪುರಾಣಗಳಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ.   ಭಾರತೀಯ ನದಿ ವ್ಯವಸ್ಥೆಯು ಏಳು ಪ್ರಮುಖ ನದಿಗಳಿಂದ (ಸಿಂಧೂ , ಬ್ರಹ್ಮಪುತ್ರ , ನರ್ಮದಾ , ತಾಪಿ , ಗೋದಾವರಿ , ಕೃಷ್ಣ ಮತ್ತು ಮಹಾನದಿ) ದೊಡ್ಡ ಸಂಖ್ಯೆಯ ಉಪನದಿಗಳನ್ನು ಹೊಂದಿದೆ. ಬಂಗಾಳ ಕೊಲ್ಲಿಯು ಬಹುಪಾಲು ನದಿಗಳಿಂದ ನೀರನ್ನು ಪಡೆಯುತ್ತದೆ. ರಾಷ್ಟ್ರದ ಪಶ್ಚಿಮ ಪ್ರದೇಶದ ಮೂಲಕ ಮತ್ತು ಪೂರ್ವಕ್ಕೆ ಹಿಮಾಚಲ ಪ್ರದೇಶ ರಾಜ್ಯದ ಮೂಲಕ ಹರಿಯುವ ಕೆಲವು ನದಿಗಳು ಅರಬ್ಬಿ ಸಮುದ್ರಕ್ಕೆ ಬಿಡುತ್ತವೆ. ಒಳನಾಡಿನ ಒಳಚರಂಡಿಯನ್ನು ಲಡಾಖ್ , ಉತ್ತರ ಅರಾವಳಿ ಶ್ರೇಣಿ ಮತ್...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.