mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header

Tuesday, 25 May 2021

ಮೈಸೂರು ಒಂದು ಮಾದರಿ ರಾಜ್ಯ

     


 1799 ರಲ್ಲಿ ಒಡೆಯರಿಗೆ ಹಿಂತಿರುಗಿಸಿದ್ದ ಮೈಸೂರಿನ ಆಳ್ವಿಕೆಯನ್ನು 1831ರ ನಗರ ದಂಗೆಯ ನಂತರ ಬ್ರಿಟಿಷರು ತಮ್ಮ ನೇರ ಆಳ್ವಿಕೆಗೆ ಒಳಪಡಿಸಿದರು. ಇದನ್ನೊಂದು ಸ್ವತಂತ್ರ ಆಡಳಿತಾತ್ಮಕ ಘಟಕವಾಗಿ ಇರಿಸಿ, ಆಡಳಿತವನ್ನು ನೋಡಿಕೊಳ್ಳಲು ಕಮಿಷನರುಗಳನ್ನು ನೇಮಿಸಲಾಗಿತ್ತು. 1831 ರಿಂದ 1881 ರ ವರೆಗಿನ ಕಮಿಷನರರ ನೇರ ಆಳ್ವಿಕೆಯು ಮೈಸೂರು ಒಂದು ಮಾದರಿ ರಾಜ್ಯವಾಗಲು ಅಡಿಪಾಯವನ್ನು ಹಾಕಿತು. ಈ ಅವಧಿಯಲ್ಲಿ ಏಳು ಜನ ಕಮಿಷನರುಗಳು ಆಳಿದರು. ಅವರಲ್ಲಿ ಪ್ರಮುಖರಾದವರೆಂದರೆ ಮಾರ್ಕ್ ಕಬ್ಬನ್ ಮತ್ತು ಲೆವಿಸ್ ಬೆಂಥಾಮ್ ಬೌರಿಂಗ್


ಮಾರ್ಕ್ ಕಬ್ಬನ್ - 1834 1881:


ಕಬ್ಬನ್‌



ನು ರಾಜ್ಯದಲ್ಲಿ ಅನೇಕ ಆಡಳಿತಾತ್ಮಕ ಸುಧಾರಣೆಗಳನ್ನು ಜಾರಿಗೆ ತಂದನು. ಇವನು ರಾಜಧಾನಿಯನ್ನು ಮೈಸೂರಿನಿಂದ ಬೆಂಗಳೂರಿಗೆ ವರ್ಗಾಯಿಸಿದನು. ಮೈಸೂರನ್ನು ಅನೇಕ ಆಡಳಿತ ಘಟಕಗಳಾಗಿ ವಿಭಾಗಿಸಿ, ಅವುಗಳನ್ನು ಸೂಪರಿಂಟೆಂಡೆಂಟ್‌ರ ಮೇಲ್ವಿಚಾರಣೆಯಲ್ಲಿ ಸರಲಾಯಿತು. ಆಡಳಿತ ಘಟಕಗಳನ್ನು ಜಿಲ್ಲೆಗಳು ಮತ್ತು ತಾಲೂಕಗಳಾನ್ನಾಗಿ ವಿಭಜಿಸಲಾಗಿತ್ತು. ನ್ಯಾಯಾಂಗ ಮತ್ತು ಆರಕ್ಷಕ (ಪೋಲಿಸ್) ಇಲಾಖೆಗಳನ್ನು ಉತ್ತಮವಾಗಿ ಸಂಘಟಿಸಲಾಯಿತು. ಕನ್ನಡವನ್ನು ಆಡಳಿತ ಭಾಷೆಯನ್ನಾಗಿ ಜಾರಿಗೊಳಿಸಲಾಯಿತು.


ಹೊಸ ರಸ್ತೆಗಳು ನಿರ್ಮಾಣಗೊಂಡವು. ಅದರ ಪರಿಣಾಮದಿಂದ ರಾಜ್ಯದ ಎಲ್ಲಾ ಪ್ರಮುಖ ಪಟ್ಟಣಗಳು ಬೆಂಗಳೂರಿನೊಂದಿಗೆ ನೇರ ಸಂಪರ್ಕಹೊಂದಿದವು, ಸೇತುವೆಗಳು ನಿರ್ಮಾಣವಾದವು ಮತ್ತು ಟೆಲಿಗ್ರಾಫ್ ತಂತಿಗಳನ್ನೂ ಹಾಕಲಾಯಿತು. 1859ರಲ್ಲಿ ಬೆಂಗಳೂರು ಹಾಗೂ ಜೋಲಾರಪೇಟೆ ಮಧ್ಯೆ ರೈಲು ಮಾರ್ಗವನ್ನು ಹಾಕಲಾಯಿತು. ಇದು ಮೈಸೂರು ರಾಜ್ಯದ ಪ್ರಥಮ ರೈಲು ಮಾರ್ಗವಾಗಿತ್ತು. ತೆರಿಗೆ ಸಂಗ್ರಹವನ್ನು ಶಿಸ್ತುಬದ್ಧಗೊಳಿಸಿದ್ದರಿಂದ ರಾಜ್ಯದ ಆದಾಯದ ಹೆಚ್ಚಳಕ್ಕೆ ಸಹಾಯವಾಯಿತು. ಕಾಫಿ ತೋಟಗಳನ್ನೂ ಅಭಿವೃದ್ಧಿ ಪಡಿಸಲಾಯಿತು. ಇವನು 1861 ರಲ್ಲಿ ಕಮಿಷನರ್ ಹುದ್ದೆಗೆ ರಾಜೀನಾಮೆ ನೀಡಿದನು.

ಲೆವಿಸ್ ಬೆಂಥಾಮ್ ಬೌರಿಂಗ್

ಲೆವಿಸ್ ಬೆಂಥಾಮ್ ಬೌರಿಂಗ್ 1862 ರಲ್ಲಿ ಮುಖ್ಯ ಕಮಿಷನರ್‌ನಾಗಿ ಅಧಿಕಾರ ಸ್ವೀಕರಿಸಿದನು. ಇವನು ಮೈಸೂರು ರಾಜ್ಯದ ಸಮಗ್ರ ಆಡಳಿತವನ್ನು ಪುನರ್‌ಸಂಘಟಿಸಿದನು. ನಂದಿದುರ್ಗ, ನಗರ ಮತ್ತು ಅಷ್ಟಗ್ರಾಮಗಳು ಆಡಳಿತದ ಘಟಕಗಳಾಗಿದ್ದವು. ಈ ಘಟಕಗಳ ಮೇಲ್ವಿಚಾರಣೆಯನ್ನು ಕಮಿಷನರರು ನೋಡಿಕೊಳ್ಳುತ್ತಿದ್ದರು. ಭೂ-ಕಂದಾಯವನ್ನು ಸುಧಾರಿಸಲಾಯಿತು. ನ್ಯಾಯಾಂಗ ಮತ್ತು ಪೊಲೀಸ್ ಇಲಾಖೆಗಳನ್ನು ವ್ಯವಸ್ಥಿತವಾಗಿ ಸಂಘಟಿಸಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆಯೊಂದಿಗೆ ಶಿಕ್ಷಣದಲ್ಲಿ ಸುಧಾರಣೆಗಳನ್ನು ಜಾರಿಗೊಳಿಸಲಾಯಿತು. ನಿರ್ದೇಶಕರು ಇದರ ಮುಖ್ಯಸ್ಥರಾಗಿದ್ದರು. 1870 ರಲ್ಲಿ ಬೌರಿಂಗನು ರಾಜೀನಾಮೆ ನೀಡಿದನು. ಕಮಿಷನರ್‌ಗಳು ಮೈಸೂರು ರಾಜ್ಯದ ಅಭಿವೃದ್ಧಿಗೆ ಬುನಾದಿಯನ್ನು ಹಾಕಿದರು. 1881 ರಲ್ಲಿ ರಾಜ್ಯವನ್ನು ಹತ್ತನೆಯ ಚಾಮರಾಜ ಒಡೆಯರಿಗೆ ಮನಃ ವಹಿಸಿಕೊಡಲಾಯಿತು (ಮನರ್‌ದಾನ), ಅವರು 1894 ರವರೆಗೆ ಆಳ್ವಿಕೆ ಮಾಡಿದರು. ನಾಲ್ವಡಿ ಕೃಷ್ಣರಾಜ್ ಒಡೆಯರು ಇವರ ಉತ್ತರಾಧಿಕಾರಿಯಾದರು. ಈ ಇಬ್ಬರು ಅರಸರ ಆಳ್ವಿಕೆಯಲ್ಲಿ ಮೈಸೂರು ಮಹಾನ್ ದಿವಾನರ ಸೇವೆಯನ್ನು ಪಡೆದುಕೊಂಡಿತು. ಅವರಲ್ಲಿ ಪ್ರಮುಖರೆಂದರೆ ಸರ್. ಎಂ.ವಿಶ್ವೇಶ್ವರಯ್ಯ ಮತ್ತು ಸರ್. ಮಿರ್ಜಾಇಸ್ಮಾಯಿಲ್, ಮೈಸೂರು 'ಮಾದರಿ ರಾಜ್ಯ'ವೆಂಬ ಬಿರುದು ಗಳಿಸಲು ಇವರು ಕಾರಣೀಭೂತರಾದರು.

ಸರ್, ಎಂ. ವಿಶ್ವೇಶ್ವರಯ್ಯ :


1831-33


1833-34


1834-61


1862-70


1870-75


- 1875-78


- 1878-81


ದಿವಾನರು


ಪಿ.ಎನ್. ಕೃಷ್ಣಮೂರ್ತಿ ವಿ.ಪಿ.ಮಾಧವರಾವ್


ಸರ್. ಎಂ. ವಿಶ್ವೇಶ್ವರಯ್ಯ


ಆರ್ಕಾಟ್ ರಾಮಸ್ವಾಮಿ ಮೊದಲಿಯಾರ್


'ಆಧುನಿಕ ಮೈಸೂರಿನ ಶಿಲ್ಪಿ ಮತ್ತು ನಿರ್ಮಾತೃ' ಎಂದು ಪರಿಗಣಿಸಲ್ಪಟ್ಟ ಸರ್. ಎಂ.ವಿಶ್ವೇಶ್ವರಯ್ಯನವರು


1861 ರ ಸೆಪ್ಟೆಂಬರ್ 15 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ


ಮುದ್ದೇನಹಳ್ಳಿಯಲ್ಲಿ ಜನಿಸಿದರು. ಅವರ ತಂದೆ ತಾಯಿಗಳು ಶ್ರೀನಿವಾಸ ಶಾಸ್ತ್ರಿ ಮತ್ತು ವೆಂಕಟಲಕ್ಷ್ಮಮ್ಮ, ಚಿಕ್ಕಬಳ್ಳಾಪುರದಲ್ಲಿ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮುಗಿಸಿ, ಮುಂದಿನ ಶಿಕ್ಷಣಕ್ಕಾಗಿ ಬೆಂಗಳೂರಿಗೆ ಹೋದರು. ನಂತರ ಅವರು ಸೆಂಟ್ರಲ್ ಕಾಲೇಜಿನಲ್ಲಿ ಬಿ.ಎ. ಪದವಿಯನ್ನು ಪಡೆದು, ಇಂಜನಿಯರಿಂಗ್ ಅಧ್ಯಯನಕ್ಕಾಗಿ ಮಣೆಗೆ ತೆರಳಿದರು. 1884 ರಿಂದ 1909ರ ರಲ್ಲಿ ಮೈಸೂರಿನ ಮುಖ್ಯ ಇಂಜಿನೀಯರ್ ಆಗಿ ನೇಮಕಗೊಂಡರು. 1912 ರಲ್ಲಿ ನಾಲ್ವಡಿ ಕೃಷ್ಣರಾಜ್ ಒಡೆಯರು ಇವರನ್ನು ಮೈಸೂರಿನ ದಿವಾನರನ್ನಾಗಿ ನೇಮಿಸಿಕೊಂಡರು. ಇವರ ದಿವಾನಗಿರಿಯಲ್ಲಿ ಮೈಸೂರು ಸರ್ವತೋಮುಖ ಅಭಿವೃದ್ಧಿಯನ್ನು ಕಂಡಿತು.


ವರೆಗೆ ಬಾಂಬೇ ಸರ್ಕಾರದಲ್ಲಿ ಸೇವೆ ಸಲ್ಲಿಸಿದರು. 1909 ಅ ಕಡರ್‌ ಸರ್, 29. ವಿಶ್ವೇಶ್ವರಯ್ಯ


ಆಡಳಿತಾತ್ಮಕ ಸುಧಾರಣೆಗಳು


ಶಾಸನ ಸಭೆಯ ಸದಸ್ಯರ ಸಂಖ್ಯೆಯನ್ನು 18 ರಿಂದ 24 ಕ್ಕೆ ಹೆಚ್ಚಿಸಲಾಯಿತು. ಸ್ಥಳೀಯ ಸಂಸ್ಥೆಗಳ ಮತ್ತು ಗ್ರಾಮ ಪಂಚಾಯಿತಿ ಕಾಯ್ದೆಯು ಜಿಲ್ಲೆ ಮತ್ತು ತಾಲೂಕು ಮಂಡಳಿಗಳಲ್ಲಿ ಚುನಾಯಿತ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸಿತು. ಹಳ್ಳಿಗಳ ಪ್ರಗತಿಗಾಗಿ ಗ್ರಾಮ ಸುಧಾರಣಾ ಸಮಿತಿಗಳನ್ನು ಸ್ಥಾಪಿಸಲಾಯಿತು. ಮಲೆನಾಡು ಪ್ರದೇಶದ ಅಭಿವೃದ್ಧಿಗಾಗಿಯೇ ಒಂದು ಪ್ರತ್ಯೇಕ ಯೋಜನೆಯನ್ನು ರಚಿಸಲಾಯಿತು.


ಕೈಗಾರಿಕಾ ಅಭಿವೃದ್ಧಿ


“ಕೈಗಾರಿಕೀಕರಣ ಇಲ್ಲವೆ ವಿನಾಶ" ಎಂಬುದು ಸರ್.ಎಂ.ವಿಶ್ವೇಶ್ವರಯ್ಯನವರ ಪ್ರಸಿದ್ಧ ಘೋಷಣೆಯಾಗಿತ್ತು. ಇವರ ಅವಧಿಯಲ್ಲಿ ಅನೇಕ ಕೈಗಾರಿಕೆಗಳನ್ನು ಆರಂಭಿಸಲಾಯಿತು ಅವುಗಳಲ್ಲಿ ಕೆಲವು ಇಂತಿವೆ, ಭದ್ರಾವತಿಯಲ್ಲಿನ ಕಬ್ಬಿಣದ ಕಾರ್ಖಾನೆ, ಮೈಸೂರಿನಲ್ಲಿ ಗಂಧದ ಎಣ್ಣೆ ಕಾರ್ಖಾನೆ, ಬೆಂಗಳೂರಿನಲ್ಲಿ ಸಾಬೂನು ಕಾರ್ಖಾನೆ,


ಕೇಂದ್ರ ಕೈಗಾರಿಕಾ ಕಾರ್ಯಾಗಾರ, ಚರ್ಮ ಹದ ಮಾಡುವ ಕಾರ್ಖಾನೆ ಹಾಗೂ ಲೋಹದ ಕಾರ್ಖಾನೆಗಳು, ವ್ಯಾಪಾರ ಹಾಗೂ ವಾಣಿಜ್ಯಕ್ಕೆ ಪ್ರೋತ್ಸಾಹ ನೀಡಲು ಬೆಂಗಳೂರಿನಲ್ಲಿ ಮೈಸೂರು ಛೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿಯನ್ನು ಸ್ಥಾಪಿಸಲಾಯಿತು. ಇವರ ಅವಧಿಯಲ್ಲಿ ಸಣ್ಣ ಕೈಗಾರಿಕೆಗಳು ಅಭಿವೃದ್ಧಿಗೊಂಡವು. ಗುಡಿ ಕೈಗಾರಿಕೆಗಳಾದ, ನೇಕಾರಿಕೆ, ಕುಂಬಾರಿಕೆ, ಹೆಂಚು, ಮರಗೆಲಸ, ಚಾಪೆ, ಚರ್ಮದ ವಸ್ತುಗಳು, ಬೀಡಿ ಮತ್ತು ಅಗರಬತ್ತಿ ಕೈಗಾರಿಕೆಗಳು ಪ್ರವರ್ಧಮಾನಕ್ಕೆ ಬಂದವು. ವ್ಯಾಪಾರ ಮತ್ತು ವಾಣಿಜ್ಯಗಳನ್ನು ಬೆಳೆಸುವುದಕ್ಕಾಗಿ 1913 ರಲ್ಲಿ ಮೈಸೂರು ಬ್ಯಾಂಕನ್ನು ಸ್ಥಾಪಿಸಲಾಯಿತು.


ಶೈಕ್ಷಣಿಕ ಸುಧಾರಣೆಗಳು


ಪ್ರತಿಯೊಂದು ದೇಶದ ಪ್ರಗತಿಯು ಮುಖ್ಯವಾಗಿ ಜನರ ಶಿಕ್ಷಣದ ಮೇಲೆ ಅವಲಂಬಿತವಾಗಿರುತ್ತದೆ


ಎಂದು ಸರ್.ಎಂ.ವಿಶ್ವೇಶ ನವರು ನಂಬಿದ್ದರು. ಇವರು ಕಡ್ಡಾಯ ಪ್ರಾಥಮಿಕ ಶಿಕ್ಷಣವನ್ನು ಜಾರಿಗೊಳಿಸಿದರು. ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳಲ್ಲಿ ಶಿಕ್ಷಣವನ್ನು ಪ್ರೋತ್ಸಾಹಿಸಲು ವಿದ್ಯಾರ್ಥಿ ವೇತನಗಳನ್ನು ನೀಡಲಾರಂಭಿಸಿದರು. ಸ್ತ್ರೀಯರ ಶಿಕ್ಷಣವನ್ನೂ ಪ್ರೋತ್ಸಾಹಿಸಲಾಯಿತು. ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಲಾಯಿತು. ಬೆಂಗಳೂರಿನಲ್ಲಿ ಇಂಜನಿಯರಿಂಗ್ ಕಾಲೇಜು ಮತ್ತು ಮೈಸೂರಿನಲ್ಲಿ ಚಾಮರಾಜೇಂದ್ರ ತಾಂತ್ರಿಕ ಸಂಸ್ಥೆಗಳನ್ನು ಆರಂಭಿಸಿದರು. ಬೆಂಗಳೂರಿನ ಹೆಬ್ಬಾಳದಲ್ಲಿ ಕೃಷಿ ಶಾಲೆಯೊಂದನ್ನು ಸ್ಥಾಪಿಸಿದರು.


1916 ರಲ್ಲಿ ಸ್ಥಾಪಿಸಿದ ಮೈಸೂರು ವಿಶ್ವವಿದ್ಯಾಲಯ ಈ ಕ್ಷೇತ್ರದಲ್ಲಿ ಇವರ ಅತ್ಯಂತ ಮಹತ್ತರ ಸಾಧನೆಯಾಗಿದೆ, 1915 ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಲಾಯಿತು.


ಅವರ ಇನ್ನಿತರ ಸಾಧನೆಗಳು,


ಕೃಷ್ಣರಾಜ ಸಾಗರ ಆಣೆಕಟ್ಟೆಯ ನಿರ್ಮಾಣ ವಿಶ್ವೇಶ್ವರಯ್ಯನವರ ಮಹಾನ್ ಸಾಧನೆಯಾಗಿದೆ. ಮಂಡ್ಯ ಜಿಲ್ಲೆ ತನ್ನ ಕೃಷಿ ಸಮೃದ್ಧಿಗೆ ಅವರಿಗೆ ಋಣಿಯಾಗಿದೆ. 1913ರಲ್ಲಿ ಮೈಸೂರು ಅರಸಿಕೆರೆ ಮತ್ತು ಬೌರಿಂಗ್‌ಪೇಟೆ ಕೋಲಾರ ರೈಲ್ವೆ ಮಾರ್ಗಗಳನ್ನು ಹಾಕಲಾಯಿತು.


ಪರಿಹಾರ ಕಾರ್ಯಗಳು

         ಸರ್.ಎಂ.ವಿಶ್ವೇಶ್ವರಯ್ಯನವರ ದಿವಾನಗಿರಿ ಅವಧಿಯಲ್ಲಿ ಪ್ರಥಮ ಜಾಗತಿಕ ಯುದ್ಧ (1914-18) ವು ಆರಂಭವಾಯಿತು. ಇದು ಆಹಾರ ವಸ್ತುಗಳ ತೀವ್ರ ಕೊರತೆಗೆ ಕಾರಣವಾಯಿತು. ಸರ್.ಎಂ.ವಿಶ್ವೇಶ್ವರಯ್ಯನವರು ನ್ಯಾಯಬೆಲೆ ಅಂಗಡಿಗಳನ್ನು ತೆರೆದು, ಆಹಾರ ಧಾನ್ಯಗಳ ರಫ್ತನ್ನು ನಿಲ್ಲಿಸಿ ಮತ್ತು ಮಾರಾಟದ ದರಗಳನ್ನುನಿಗದಿ ಪಡಿಸುವಂತಹ ಪರಿಹಾರ ಕ್ರಮಗಳನ್ನು ಕೈಗೊಂಡರು. ಸರ್. ಎಂ.ವಿಶ್ವೇಶ್ವರಯ್ಯನವರು 1918 ರಲ್ಲಿ ರಾಜಿನಾಮೆ ನೀಡಿದರು. ಬ್ರಿಟಿಷ್ ಸರಕಾರವು ಇವರ ದಕ್ಷತೆ ಮತ್ತು ಸಮರ್ಪಣಾ ಸೇವೆಗಾಗಿ 'ಸರ್' ಎಂಬ ಬಿರುದನ್ನು ನೀಡಿತು. ತಮ್ಮ ರಾಜೀನಾಮೆ ನಂತರವೂ ರಾಜ್ಯದ ಅಭಿವೃದ್ಧಿ ಚಟುವಟಿಕೆಗಳಲ್ಲಿ ಅತ್ಯಂತ ಸಕ್ರಿಯವಾಗಿ ಭಾಗವಹಿಸಿದರು. 1955 ರಲ್ಲಿ ಭಾರತ ಸರ್ಕಾರವು

ಅವರಿಗೆ 'ಭಾರತ ರತ್ನ' ಪ್ರಶಸ್ತಿಯನ್ನು ನೀಡಿ ಗೌರವಿಸಿತು. ಇವರು ಈ ಪ್ರಶಸ್ತಿಯನ್ನು ಪಡೆದ ಮೊದಲ ಕನ್ನಡಿಗರು. 101 ವರ್ಷಗಳು ಬದುಕಿದ ಇವರು 1962 ರಲ್ಲಿ ನಿಧನ ಹೊಂದಿದರು. ಇವರು ಹಲವು ಪುಸ್ತಕಗಳನ್ನು ರಚಿಸಿದರು, ಅವುಗಳೆಂದರೆ, 'ಎ ವಿಜನ್ ಆಫ್ ಪ್ರಾಸ್ಪರಸ್ ಮೈಸೂರ್' 'ರೀಕನ್‌ ಸ್ಟಕ್ಸಿಂಗ್ ಇಂಡಿಯಾ', 'ರಾಪಿಡ್ ಡೆವೆಲಪ್‌ಮೆಂಟ್ ಆಫ್ ಇಂಡಸ್ಟ್ರೀಸ್', 'ಪ್ಲಾನ್‌ಡ್ ಎಕಾನಮಿ ಫಾರ್ ಇಂಡಿಯಾ', 'ಮೆಮೊಯರ್ಸ್' ಆಫ್ ಮೈ ವರ್ಕಿಂಗ್ ಲೈಫ್' (ಆತ್ಮ ಚರಿತ್ರೆ) ಇತ್ಯಾದಿ.


1926 ರಿಂದ 1941 ರವರೆಗೆ ದಿವಾನರಾಗಿ ಸೇವೆಗೈದ ಸರ್.ಮಿರ್ಜಾ ಇಸ್ಮಾಯಿಲ್‌ರನ್ನು ಸಹ ಆಧುನಿಕ


ಮೈಸೂರಿನ ನಿರ್ಮಾಪಕರಲ್ಲೊಬ್ಬರೆಂದು ಪರಿಗಣಿಸಲಾಗಿದೆ. ಇವರು ಕೈಗಾರಿಕೆಗಳ ಅಭಿವೃದ್ಧಿಗೆ ಪ್ರೋತ್ಸಾಹಿಸಿ ಹಲವಾರು ಕೈಗಾರಿಕೆಗಳನ್ನು ಆರಂಭಿಸಿದರು. ಬೆಂಗಳೂರನಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್ಎಎಲ್), ಗಾಜಿನ ಕಾರ್ಖಾನೆ, ಪಿಂಗಾಣಿ ಪಾತ್ರ ಕಾರ್ಖಾನೆ, ಬೆಳಗೊಳದಲ್ಲಿ ರಾಸಾಯನಿಕ ಗೊಬ್ಬರ ಕಾರ್ಖಾನೆ, ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆ, ಶಿವಮೊಗ್ಗಾದಲ್ಲಿ ಬೆಂಕಿಕಡ್ಡಿ ಕಾರ್ಖಾನೆ ಮತ್ತು ಭದ್ರಾವತಿಯಲ್ಲಿನ ಉಕ್ಕು ಹಾಗೂ ಕಾಗದ ಕಾರ್ಖಾನೆಗಳನ್ನು ಇವರು ಸ್ಥಾಪಿಸಿದರು. ಜಕ್ಕೂರಿನಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸಿದರು. ರೇಡಿಯೋ ಕೇಂದ್ರಗಳನ್ನು ಬೆಂಗಳೂರು ಮತ್ತು ಮೈಸೂರುಗಳಲ್ಲಿ ಆರಂಭಿಸಲಾಯಿತು..


ಇವರು ಗ್ರಾಮೀಣ ಕೈಗಾರಿಕೆಗಳನ್ನು ಪ್ರೋತ್ಸಾಹಿಸಿದರು. ಬದನವಾಳದಲ್ಲಿ ಖಾದಿ ಉತ್ಪಾದನೆಯ ಕೇಂದ್ರವನ್ನು ಸ್ಥಾಪಿಸಿದರು. ಇಶ್ವಿನ್ ಕಾಲುವೆ ನಿರ್ಮಿಸಿ ಮಂಡ್ಯ ಜಿಲ್ಲೆಯ 1,20,000 ಎಕರ ಭೂಮಿಗೆ ನೀರನ್ನು ಒದಗಿಸಲಾಯಿತು. ಇವರಲ್ಲಿ ಸೌಂದರ್ಯ ಪ್ರಜ್ಞೆ ಇದ್ದು, ಮೈಸೂರನ್ನು ಹೂ ತೋಟಗಳು ಮತ್ತು ಉದ್ಯಾನವನಗಳ ನಗರವನ್ನಾಗಿಸಿದರು. ಬೆಂಗಳೂರು ಮತ್ತು ಇತರ ನಗರಗಳಲ್ಲಿಯೂ ಉದ್ಯಾನ ಮತ್ತು ಹೂತೋಟಗಳನ್ನು ನಿರ್ಮಿಸಿದರು. ಕೆ.ಆರ್.ಎಸ್.ನಲ್ಲಿ ಬೃಂದಾವನ ಉದ್ಯಾನವನವನ್ನು ನಿರ್ಮಿಸಿದರು. ಇವರ ಅವಧಿಯಲ್ಲಿಯೇ ಮೈಸೂರು ಮಹಾರಾಜರ ಆಡಳಿತದ ರಜತ ಮಹೋತ್ಸವವನ್ನು ಆಚರಿಸಲಾಯಿತು. ಇದರ ಸ್ಮರಣೆಗಾಗಿ ಆಸ್ಪತ್ರೆಗಳು, ದೇವಾಲಯಗಳು ಮತ್ತು ಗ್ರಂಥಾಲಯಗಳನ್ನು ನಿರ್ಮಿಸಲಾಯಿತು. ಬೆಂಗಳೂರಿನಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ಶಸ್ತ್ರಚಿಕಿತ್ಸೆ ಸಂಸ್ಥೆ (NIMHANS National Institute of Mental Health and Neuro Surgery) ಕೋಲಾರದಲ್ಲಿ ನರಸಿಂಹರಾಜ ಆಸ್ಪತ್ರೆ, ಶಿವಮೊಗ್ಗದಲ್ಲಿ ಮೆಗ್ಗಾನ್ ಆಸ್ಪತ್ರೆ ಮತ್ತು ಮೈಸೂರಿನಲ್ಲಿ ವಾಣಿವಿಲಾಸ ಆಸ್ಪತ್ರೆಗಳನ್ನು ಸ್ಥಾಪಿಸಲಾಯಿತು.


ಶಿಕ್ಷಣದ ಪ್ರೋತ್ಸಾಹಕ್ಕಾಗಿ ಪ್ರಾಥಮಿಕ ಶಿಕ್ಷಣ ಕಾಯ್ದೆಯನ್ನು ಜಾರಿಗೊಳಿಸಿ, ಖಾಸಗಿ ಶಾಲೆಗಳಿಗೆ ಅನುದಾನವನ್ನು ನೀಡಲಾಯಿತು. ಪ್ರೌಢಶಾಲೆಗಳಲ್ಲಿ ಕನ್ನಡ ಮಾಧ್ಯಮದ ಶಿಕ್ಷಣವನ್ನು ಆರಂಭಿಸಲಾಯಿತು. ಹೀಗೆ ಮೈಸೂರನ್ನು ಅಭಿವೃದ್ಧಿಪಡಿಸುವಲ್ಲಿ ಮಿರ್ಜಾ ಇಸ್ಮಾಯಿಲ್‌ರು ಮಹತ್ವದ ಪಾತ್ರ ವಹಿಸಿದ್ದಾರೆ.

No comments:

Post a Comment

Blog Archive

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು, ಪಟ್ಟಿ, ನಕ್ಷೆ, ಹೆಸರುಗಳು, ಮೊದಲ, ದೊಡ್ಡದು

  ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು: ಕೂಡಂಕುಳಂ ಪರಮಾಣು ವಿದ್ಯುತ್ ಸ್ಥಾವರವು ಭಾರತದ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರವಾಗಿದೆ. ಭಾರತದಲ್ಲಿನ ಪರಮಾಣು ವಿದ್ಯುತ್ ಸ್ಥಾವರಗಳ ಪಟ್ಟಿ, ನಕ್ಷೆ, ಹೆಸರುಗಳು, ಮೊದಲ ಮತ್ತು ದೊಡ್ಡದು,       ಪರಿವಿಡಿ ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು:  ರಾಷ್ಟ್ರದ ಶಕ್ತಿಯ ಮಿಶ್ರಣದ ಮಹತ್ವದ ಭಾಗವಾಗಿರುವ ಪರಮಾಣು ಶಕ್ತಿಯನ್ನು ಅನುಸರಿಸುವಾಗ ವಿವಿಧ ಶಕ್ತಿ ಮೂಲಗಳ ನಡುವೆ ಉತ್ತಮವಾದ ಸಮತೋಲನವನ್ನು ಹುಡುಕಲಾಗುತ್ತಿದೆ. ಒಂದು ಕ್ಲೀನ್, ಪರಿಸರ ಪ್ರಯೋಜನಕಾರಿ ಬೇಸ್ ಲೋಡ್ ಶಕ್ತಿಯ ಮೂಲ, ಇದು ಗಡಿಯಾರದ ಸುತ್ತ ಪ್ರವೇಶಿಸಬಹುದಾಗಿದೆ. ಹೆಚ್ಚುವರಿಯಾಗಿ, ಇದು ರಾಷ್ಟ್ರದ ಸುಸ್ಥಿರ ದೀರ್ಘಕಾಲೀನ ಇಂಧನ ಭದ್ರತೆಯನ್ನು ಭದ್ರಪಡಿಸುವ ಅಗಾಧ ಭರವಸೆಯನ್ನು ಹೊಂದಿದೆ. ಕಲ್ಲಿದ್ದಲು, ಅನಿಲ, ಗಾಳಿ ಮತ್ತು ಜಲವಿದ್ಯುತ್ ನಂತರ, ಪರಮಾಣು ಶಕ್ತಿಯು ಭಾರತದಲ್ಲಿ ವಿದ್ಯುತ್ ಉತ್ಪಾದನೆಯ ಐದನೇ ಅತಿದೊಡ್ಡ ಮೂಲವಾಗಿದೆ. ರಾಷ್ಟ್ರದಲ್ಲಿ 22 ರಿಯಾಕ್ಟರ್‌ಗಳು 2021 ರ ಹೊತ್ತಿಗೆ 80% ಪ್ಲಾಂಟ್ ಲೋಡ್ ಫ್ಯಾಕ್ಟರ್‌ಗಿಂತ ಹೆಚ್ಚು ಚಾಲನೆಯಲ್ಲಿವೆ, ಸಂಯೋಜಿತ ಸ್ಥಾಪಿತ ಸಾಮರ್ಥ್ಯ 6780 MW. ನಾಲ್ಕು ಲಘು ನೀರಿನ ರಿಯಾಕ್ಟರ್‌ಗಳು ಮತ್ತು ಹದಿನೆಂಟು ಒತ್ತಡದ ಭಾರೀ ನೀರಿನ ರಿಯಾಕ್ಟರ್‌ಗಳು (...

ಆಮ್ಲಗಳು, ಕ್ಷಾರಗಳು ಮತ್ತು ಲವಣಗಳು ಯಾವುವು?

ಕಿತ್ತಳೆ , ನಿಂಬೆ ಮುಂತಾದ ಹಣ್ಣುಗಳಲ್ಲಿ ಸಿಟ್ರಿಕ್ ಆಮ್ಲ , ಹುಣಸೆ ಹಣ್ಣಿನಲ್ಲಿ ಟಾರ್ಟಾರಿಕ್ ಆಮ್ಲ , ಸೇಬಿನಲ್ಲಿರುವ ಮಾಲಿಕ್ ಆಮ್ಲ ಮತ್ತು ಹಾಲು ಮತ್ತು ಹಾಲಿನ ಉತ್ಪನ್ನಗಳಲ್ಲಿ ಲ್ಯಾಕ್ಟಿಕ್ ಆಮ್ಲ , ಗ್ಯಾಸ್ಟ್ರಿಕ್ ಜ್ಯೂಸ್‌ನಲ್ಲಿ ಹೈಡ್ರೋಕ್ಲೋರಿಕ್ ಆಮ್ಲದಂತಹ ಅನೇಕ ಆಮ್ಲಗಳು ಮತ್ತು ಬೇಸ್‌ಗಳು ಪ್ರಕೃತಿಯಲ್ಲಿ ನೈಸರ್ಗಿಕವಾಗಿ ಕಂಡುಬರುತ್ತವೆ. ಅಂತೆಯೇ , ಸುಣ್ಣದ ನೀರಿನಂತಹ ಅನೇಕ ನೆಲೆಗಳು ಕಂಡುಬರುತ್ತವೆ.   ನಾವು ನಮ್ಮ ದಿನನಿತ್ಯದ ಜೀವನದಲ್ಲಿ ಇಂತಹ ಅನೇಕ ಆಮ್ಲಗಳನ್ನು ಬಳಸುತ್ತೇವೆ , ಉದಾಹರಣೆಗೆ ಅಡುಗೆಮನೆಯಲ್ಲಿ ವಿನೆಗರ್ ಅಥವಾ ಅಸಿಟಿಕ್ ಆಮ್ಲ , ಲಾಂಡ್ರಿಗಾಗಿ ಬೋರಿಕ್ ಆಮ್ಲ , ಅಡುಗೆ ಉದ್ದೇಶಕ್ಕಾಗಿ ಅಡಿಗೆ ಸೋಡಾ , ಸ್ವಚ್ಛಗೊಳಿಸಲು ತೊಳೆಯುವ ಸೋಡಾ ,   ಇತ್ಯಾದಿ   . ವಿಷಯ ಕೋಷ್ಟಕ ವ್ಯಾಖ್ಯಾನಗಳು ಶಿಫಾರಸು ಮಾಡಿದ ವೀಡಿಯೊಗಳು ಆಮ್ಲಗಳು ಆಧಾರಗಳು ಲವಣಗಳು ಪದೇ ಪದೇ ಕೇಳಲಾಗುವ ಪ್ರಶ್ನೆಗಳು - FAQ ಗಳು ನಾವು ಮನೆಯಲ್ಲಿ ಸೇವಿಸದ ಅನೇಕ ಆಮ್ಲಗಳನ್ನು ಪ್ರಯೋಗಾಲಯಗಳು ಮತ್ತು ಕೈಗಾರಿಕೆಗಳಲ್ಲಿ ಬಳಸಲಾಗುತ್ತದೆ , ಇದರಲ್ಲಿ HCl, H   2   SO   4   ಇತ್ಯಾದಿ ಆಮ್ಲಗಳು ಮತ್ತು NaOH, KOH ಇತ್ಯಾದಿ ಬೇಸ್‌ಗಳು ಸೇರಿವೆ. ಈ ಆಮ್ಲಗಳು ಮತ್ತು ಬೇಸ್‌ಗಳನ್ನು ಮಿಶ್ರಣ ಮಾಡಿದಾಗ ಸರಿಯಾದ ಪ್ರಮಾಣದಲ್ಲಿ ,   ತಟಸ್ಥೀಕರಣ ಕ್ರಿಯೆಯು   ಉಪ್ಪು ಮತ್ತ...

ಅಸಹಕಾರ ಚಳುವಳಿ, ಕಾರಣಗಳು, ಪರಿಣಾಮಗಳು, ಮಹತ್ವ

ಬ್ರಿಟಿಷ್ ಸರ್ಕಾರದ ನಿಯಮಗಳನ್ನು ಬಹಿಷ್ಕರಿಸಲು ಮತ್ತು ಭಾರತದಲ್ಲಿ ಪೂರ್ಣ ಸ್ವರಾಜ್ಯವನ್ನು ಜಾರಿಗೆ ತರಲು ಮಹಾತ್ಮಾ ಗಾಂಧಿಯವರು 1920 ರಲ್ಲಿ ಅಸಹಕಾರ ಚಳುವಳಿಯನ್ನು ಪ್ರಾರಂಭಿಸಿದರು.  1922 ರ ವೇಳೆಗೆ ಅಸಹಕಾರ ಚಳುವಳಿ ಕೊನೆಗೊಂಡಿತು. ಪರಿವಿಡಿ ಅಸಹಕಾರ ಚಳುವಳಿ ಎಂದರೇನು ? ಭಾರತಕ್ಕೆ ಸ್ವರಾಜ್ ಅಥವಾ ಸ್ವರಾಜ್ಯ ನೀಡಲು ಭಾರತದ ಬ್ರಿಟಿಷ್ ಸರ್ಕಾರವನ್ನು ಮನವೊಲಿಸಲು ಮಹಾತ್ಮ ಗಾಂಧಿಯವರು 1920-1922 ರಿಂದ   ಅಸಹಕಾರ ಚಳವಳಿಯನ್ನು   ಸಂಘಟಿಸಿದರು .   ಇದು ವ್ಯಾಪಕವಾದ ನಾಗರಿಕ ಅಸಹಕಾರ ಚಳವಳಿಯ  ( ಸತ್ಯಾಗ್ರಹ) ಗಾಂಧಿಯವರ ಆರಂಭಿಕ ಯೋಜಿತ ನಿದರ್ಶನಗಳಲ್ಲಿ ಒಂದಾಗಿದೆ  .  ಅಸಹಕಾರ ಚಳವಳಿಯು ಸೆಪ್ಟೆಂಬರ್ 1920 ಮತ್ತು ಫೆಬ್ರವರಿ 1922 ರ ನಡುವೆ ಅಸ್ತಿತ್ವದಲ್ಲಿತ್ತು ಎಂದು ಹೇಳಲಾಗುತ್ತದೆ. ಇದು ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಹೊಸ ಅಧ್ಯಾಯದ ಆರಂಭವನ್ನು ಪ್ರತಿನಿಧಿಸುತ್ತದೆ. ಜಲಿಯನ್ ವಾಲಾ ಬಾಗ್ ಹತ್ಯಾಕಾಂಡವು ಅಸಹಕಾರ ಚಳವಳಿಯ ಆರಂಭಕ್ಕೆ ವೇಗವರ್ಧಕವಾಗಿ ಕಾರ್ಯನಿರ್ವಹಿಸಿತು , ನಂತರ 1922 ರ   ಚೌರಿ ಚೌರಾ ಘಟನೆಯ   ಕಾರಣದಿಂದಾಗಿ ಅದನ್ನು ಸ್ಥಗಿತಗೊಳಿಸಲಾಯಿತು . ಮಹಾತ್ಮಾ ಗಾಂಧಿಯವರ   ಅಸಹಕಾರ ಚಳುವಳಿ ಮಹಾತ್ಮಾ ಗಾಂಧಿಯವರು ಅಸಹಕಾರ ಚಳವಳಿಯ   ಪ್ರಮುಖ ಪ್ರತಿಪಾದಕರು  .  ಅವರು ಮಾರ್ಚ್ 1920 ರಲ್ಲಿ ಚಳುವಳಿಯ ಅಹಿಂಸಾತ್ಮಕ ಅ...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.