mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header

Saturday, 25 September 2021

ವಾರ್ಡ್ ಸಭೆ

ಅಧ್ಯಾಯ II
ವಾರ್ಡ್ ಸಭೆ ಮತ್ತು ಗ್ರಾಮಸಭೆ

3. ವಾರ್ಡ್ ಸಭೆ.- (1) ಸರ್ಕಾರದ ಸಾಮಾನ್ಯ ಆದೇಶಗಳಿಗೊಳಪಟ್ಟು, ವಾರ್ಡ್ ಆರು ತಿಂಗಳುಗಳಿಗೆ ಒಂದು ಸಲ ಸಭೆ ಸೇರತಕ್ಕದ್ದು.

(2) ವಾರ್ಡ್ ಸಭೆಯು ಸಭೆ ಸೇರುವಾಗ, ವಾರ್ಡ್ ಸಭೆಯ ಸದಸ್ಯರ ಒಟ್ಟು ಸಂಖ್ಯೆಯ ಹತ್ತನೆಯ ಒಂದರಷ್ಟು ಅಥವಾ ಇಪ್ಪತ್ತು ಸದಸ್ಯರು, ಇವುಗಳಲ್ಲಿ ಯಾವುದು ಕಡಿಮೆಯೋ, ಅದು ಸಭೆಯ ಕೋರಂ
ಆಗಿರತಕ್ಕದ್ದು. ಸಾಧ್ಯವಾದಷ್ಟು ಮಟ್ಟಿಗೆ, ವಾರ್ಡ್ ಸಭೆಗೆ ಹಾಜರಾಗುವ ಮತದಾರರಲ್ಲಿ ಶೇಕಡಾ ಮೂವತ್ತಕ್ಕೆ ಕಡಿಮೆಯಲ್ಲದಷ್ಟು ಸಂಖ್ಯೆಯಲ್ಲಿ ಮಹಿಳೆಯರಿರತಕ್ಕದ್ದು. ಸಾಧ್ಯವಾದಷ್ಟು ಮಟ್ಟಿಗೆ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳಿಗೆ ಸೇರಿದ ವ್ಯಕ್ತಿಗಳು ಸಭೆಯಲ್ಲಿನ ಅವರ ಜನಸಂಖ್ಯೆಯ ಅನುಪಾತ ಪರವಾಗಿ ಪ್ರತಿನಿಧಿಸು ತಕ್ಕದ್ದು.


(3) ನಿಯಮಿಸಬಹುದಾದಂತೆ ಅಂತಹ ನಿಯಮಗಳಿಗೊಳಪಟ್ಟು, ವಾರ್ಡ್ ಸಭೆಯು ಈ ಮುಂದಿನ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಈ ಮುಂದಿನ ಪ್ರಕಾರ್ಯಗಳನ್ನು ನೆರವೇರಿಸತಕ್ಕದ್ದು, ಎಂದರೆ:

(ಎ) ವಾರ್ಡ್ ಸಭೆಯ ಪ್ರದೇಶದೊಳಗೆ ಅನುಷ್ಠಾನಗೊಳಿಸಬೇಕಾದ ಯೋಜನೆಗಳ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಪ್ರಸ್ತಾವಗಳನ್ನು ಮಾಡುವುದು ಮತ್ತು ಅವುಗಳ ಆದ್ಯತೆಯನ್ನು ನಿರ್ಧರಿಸುವುದು ಮತ್ತು ಗ್ರಾಮಪಂಚಾಯಿತಿಯ ಅಭಿವೃದ್ಧಿ ಯೋಜನೆಯಲ್ಲಿ ಸೇರಿಸಿಕೊಳ್ಳುವುದಕ್ಕಾಗಿ ಅದನ್ನು ಗ್ರಾಮಸಭೆಯ ಮುಂದಿಡಲು ಕಳುಹಿಸಿಕೊಡುವುದು;

(ಬಿ) ನಿಗದಿಪಡಿಸಿದ ಮಾನದಂಡಗಳ ಆಧಾರದ ಮೇಲೆ ಫಲಾನುಭವಿ ಆಧಾರಿತ ಯೋಜನೆಗಳಿಗಾಗಿ, ವಾರ್ಡ್ ಸಭೆಯ ಪ್ರದೇಶದಿಂದ ಅತ್ಯಂತ ಅರ್ಹ ವ್ಯಕ್ತಿಗಳನ್ನು ಗುರುತಿಸುವುದು ಮತ್ತು ಆದ್ಯತೆಯ ಕ್ರಮಕ್ಕನುಸಾರ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸುವುದು ಮತ್ತು ಗ್ರಾಮ ಪಂಚಾಯಿತಿಯ ಅಭಿವೃದ್ಧಿಯೋಜನೆಯಲ್ಲಿ ಸೇರಿಸಿಕೊಳ್ಳುವುದಕ್ಕಾಗಿ ಅದನ್ನು ಗ್ರಾಮಸಭೆಯ ಮುಂದಿಡಲು ಕಳುಹಿಸಿಕೊಡುವುದು;

(ಸಿ) ಸರ್ಕಾರದಿಂದ ನಿವೃತ್ತಿ ವೇತನಗಳು ಮತ್ತು ಸಬ್ಸಿಡಿಗಳಂಥ ವಿವಿಧ ಬಗೆಯ ಕಲ್ಯಾಣ ನೆರವನ್ನು ಪಡೆದುಕೊಳ್ಳುತ್ತಿರುವ ವ್ಯಕ್ತಿಗಳ ಅರ್ಹತೆಯ ಬಗ್ಗೆ ಸತ್ಯಾಪನೆ ಮಾಡುವುದು;

(ಡಿ) ಗ್ರಾಮ ಪಂಚಾಯತಿಯ ಅಧಿಕಾರಿಗಳು ಸಲ್ಲಿಸಬೇಕಾದ ಸೇವೆಗೆ ಮತ್ತು ವಾರ್ಡ್ ಸಭೆಯ ತರುವಾಯದ ಮುಂದಿನ ಆರು ತಿಂಗಳ ಅವಧಿಯಲ್ಲಿ ಅವರು ಮಾಡಲು ಉದ್ದೇಶಿಸಲಾದ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅವರಿಂದ ಮಾಹಿತಿ ಪಡೆಯುವುದು;

(ಇ) ವಾರ್ಡ್ ಸಭೆಯ ಪ್ರದೇಶದ ಸಂಬಂಧದಲ್ಲಿ ಗ್ರಾಮ ಪಂಚಾಯಿತಿಯ ಪ್ರತಿಯೊಂದು ತೀರ್ಮಾನವು ಎಷ್ಟು ವಿವೇಚನಾಯುತವಾಗಿದೆಯೆಂಬ ಬಗ್ಗೆ ಗ್ರಾಮ ಪಂಚಾಯಿತಿಯಿಂದ ಮಾಹಿತಿ ಪಡೆಯುವುದು;


(ಎಫ್) ವಾರ್ಡ್ ಸಭೆಯ ತೀರ್ಮಾನದ ಮೇಲೆ ಕೈಕೊಂಡ ಅನುಸರಣಾ ಕ್ರಮದ ಮೇಲೆ ಗ್ರಾಮ ಪಂಚಾಯಿತಿಯಿಂದ ಮಾಹಿತಿ ಪಡೆಯುವುದು

(ಜಿ) ಅಭಿವೃದ್ಧಿ ಕಾಮಗಾರಿಗಾಗಿ ಸ್ವಯಂ ಸೇವಾ ಕಾರ್ಮಿಕರನ್ನು ಹಾಗೂ ಹಣದ ರೂಪದಲ್ಲಿ ಮತ್ತು ವಸ್ತು ರೂಪದಲ್ಲಿ ವಂತಿಗೆಗಳನ್ನು ಒದಗಿಸುವುದು ಮತ್ತು ಸಂಗ್ರಹಿಸುವುದು ಮತ್ತು ಸ್ವಯಂ

ಸೇವಾ ತಂಡಗಳ ಮೂಲಕ ಅಂಥ ಕಾಮಗಾರಿಗಳ ಮೇಲ್ವಿಚಾರಣೆ ನಡೆಸುವುದು; (ಹೆಚ್) ವಾರ್ಡ್ ಸಭೆಯ ಸದಸ್ಯರು, ಗ್ರಾಮ ಪಂಚಾಯಿತಿಗೆ ತೆರಿಗೆಗಳನ್ನು ಸಂದಾಯ ಮಾಡುವಂತೆ

ಮತ್ತು ಸಾಲಗಳನ್ನು ಮರು ಸಂದಾಯ ಮಾಡುವಂತೆ ಪ್ರಯತ್ನಿಸುವುದು. (ಐ) ವಾರ್ಡ್ ಸಭೆಯ ಪ್ರದೇಶದೊಳಗೆ ಬೀದಿ ದೀಪಗಳು, ಬೀದಿ ಅಥವಾ ಸಮುದಾಯ ನಲ್ಲಿಗಳು, ಸಾರ್ವಜನಿಕ ಬಾವಿಗಳು, ಸಾರ್ವಜನಿಕ ನಿರ್ಮಲೀಕರಣ ಘಟಕಗಳು, ನೀರಾವರಿ ಸೌಲಭ್ಯಗಳು ಮತ್ತು ಅಂತಹ ಇತರ ಸಾರ್ವಜನಿಕ ಸೌಲಭ್ಯ ಯೋಜನೆಗಳಿಗಾಗಿ ಸ್ಥಳಗಳನ್ನು ಮಾಡುವುದು; ಸಲಹ

(ಜೆ) ವಾರ್ಡ್ ಸಭೆಯ ಪ್ರದೇಶದಲ್ಲಿ ನೀರು ಸರಬರಾಜು ಮತ್ತು ಬೀದಿ ದೀಪ ವ್ಯವಸ್ಥೆಗಳಲ್ಲಿ ಕೊರತೆಗಳನ್ನು ಗುರುತಿಸುವುದು ಮತ್ತು ಪರಿಹಾರ ಕ್ರಮಗಳನ್ನು ಸಲಹೆ ಮಾಡುವುದು; (ಕೆ) ಸ್ವಚ್ಛತೆ, ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿವಾರಣೆಯಂಥ ಸಾರ್ವಜನಿಕ ಹಿತಾಸಕ್ತಿಯ

ವಿಷಯಗಳ ಬಗ್ಗೆ ಅರಿವು ಮೂಡಿಸುವುದು;

(ಎಲ್) ವಾರ್ಡ್ ಸಭೆಯ ಪ್ರದೇಶದಲ್ಲಿ ನೈರ್ಮಲ್ಯ ವ್ಯವಸ್ಥೆಗಳ ಸಂಬಂಧದಲ್ಲಿ ಗ್ರಾಮ ಪಂಚಾಯಿತಿಯ ನೌಕರರಿಗೆ ನೆರವು ನೀಡುವುದು ಮತ್ತು ಕಸವನ್ನು ತೆಗೆದು ಹಾಕುವಲ್ಲಿ ಸ್ವಯಂ ಸೇವೆ ಸಲ್ಲಿಸುವುದು;

(ಎಮ್) ವಾರ್ಡ್ ಸಭೆಯ ಪ್ರದೇಶದೊಳಗೆ ವಯಸ್ಕರ ಶಿಕ್ಷಣ ಕಾರ್ಯಕ್ರಮಕ್ಕೆ ಉತ್ತೇಜನ ನೀಡುವುದು;

(ಎನ್), ವಿಶೇಷವಾಗಿ, ರೋಗ ಪತಿಬಂಧ ಮತ್ತು ಕುಟುಂಬ ಕಲ್ಯಾಣದ ವಿಷಯದಲ್ಲಿ ವಾರ್ಡ್ ಸಭೆಯ ಪ್ರದೇಶದಲ್ಲಿಯ ಸಾರ್ವಜನಿಕ ಆರೋಗ್ಯ ಕೇಂದ್ರಗಳ ಚಟುವಟಿಕೆಗಳಿಗೆ ನೆರವು ನೀಡುವುದು ಮತ್ತು ಸಾಂಕ್ರಾಮಿಕ ರೋಗಗಳು ಮತ್ತು ನೈಸರ್ಗಿಕ ವಿಕೋಪಗಳು ಸಂಭವಿಸಿದ ಬಗ್ಗೆ ಕೂಡಲೇ ವರದಿ ಮಾಡುವ ವ್ಯವಸ್ಥೆ ಮಾಡುವುದು.

(ಓ) ವಾರ್ಡ್ ಸಭೆಯ ಪ್ರದೇಶದಲ್ಲಿ ಜನರ ವಿವಿಧ ಸಮೂಹಗಳ ನಡುವೆ ಸಾಮರಸ್ಯ ಮತ್ತು ಐಕ್ಯತೆಯನ್ನು ಬೆಳೆಸುವುದು ಮತ್ತು ಆ ಸ್ಥಳದ ಜನರ ಪ್ರತಿಭೆಯನ್ನು ಅಭಿವ್ಯಕ್ತ ಗೊಳಿಸುವುದಕ್ಕಾಗಿ ಸಾಂಸ್ಕೃತಿಕ ಉತ್ಸವಗಳು ಮತ್ತು ಕ್ರೀಡಾಕೂಟಗಳನ್ನು ವ್ಯವಸ್ಥೆ ಮಾಡುವುದು, ಮತ್ತು

(ಪಿ) ನಿಯಮಿಸಬಹುದಾದಂತೆ ಅಂತಹ ಇತರ ಅಧಿಕಾರಗಳನ್ನು ಚಲಾಯಿಸುವುದು ಮತ್ತು ಅಂತಹ ಇತರ ಪ್ರಕಾರ್ಯಗಳನ್ನು ನೆರವೇರಿಸುವುದು.

(4) ವಾರ್ಡ್ ಸಭೆಯ ಸಭೆಗಳನ್ನು ಕರೆಯುವುದಕ್ಕಾಗಿ ಮತ್ತು ನಡೆಸುವುದಕ್ಕಾಗಿ ಕಾರ್ಯವಿಧಾನವು, ನಮಿಸಬಹುದಾಂಥದ್ದಾಗಿರತಕ್ಕದ್ದು. 


(5) ವಾರ್ಡ್ ಸಭೆಯ ಪ್ರತಿಯೊಂದು ಸಭೆಗೆ ಸಂಬಂಧಪಟ್ಟ ವಾರ್ಡ್ ಸಭೆಯ ಪ್ರದೇಶದಿಂದ ನಾಯಿತನಾದ ಗಾಮ ಪಂಚಾಯಿತಿಯ ಸದಸ್ಯರು ಮತ್ತು ಆವನ ಗೈರು ಹಾಜರಿಯಲ್ಲಿ ಗ್ರಾಮ ಪಂಚಾಯಿತಿಯು‌ ನಾಮನಿರ್ದೇಶನ ಮಾಡಿದ ಅದರ ಯಾವೊಬ್ಬ ಇತರ ಸದಸ್ಯನು ಅಧ್ಯಕ್ಷತೆ ವಹಿಸತಕ್ಕದ್ದು.

(6) ವಾರ್ಡ್ ಸಭೆಯ ಸಭೆಯಲ್ಲಿಯ ಯಾವುದೇ ವಿಷಯಕ್ಕೆ ಸಂಬಂಧಪಟ್ಟ ಎಲ್ಲ ನಿರ್ಣಯಗಳನ್ನು ನಜರಿರುವ ಮತ್ತು ಮತಚಲಾಯಿಸುವ ಸದಸ್ಯರ ಬಹುಮತದಿಂದ ಅಂಗೀಕರಿಸತಕ್ಕದ್ದು.

No comments:

Post a Comment

Blog Archive

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

Current Affairs Quiz - September, 2021

  1 ಇತ್ತೀಚೆಗೆ ನಿಧನರಾದ ಬುದ್ಧದೇವ್ ಗುಹಾ ಯಾವ ವೃತ್ತಿಯೊಂದಿಗೆ ಸಂಬಂಧ ಹೊಂದಿದ್ದರು ? [A] ಕ್ರೀಡಾಪಟು [B] ಬರಹಗಾರ [C] ರಾಜಕಾರಣಿ [D] ವ್ಯಾಪಾರ-ವ್ಯಕ್ತಿ answar ಸರಿಯಾದ ಉತ್ತರ:   ಬಿ [ಬರಹಗಾರ] ಟಿಪ್ಪಣಿಗಳು: ಮಧುಕಾರಿ ಸೇರಿದಂತೆ ಹಲವಾರು ಜನಪ್ರಿಯ ಪುಸ್ತಕಗಳನ್ನು ಬರೆದ ಖ್ಯಾತ ಬಂಗಾಳಿ ಬರಹಗಾರ ಬುದ್ಧದೇವ್ ಗುಹಾ ಇತ್ತೀಚೆಗೆ ನಿಧನರಾದರು. ಬರಹಗಾರ ತನ್ನ 85 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಆನಂದ ಪುರಸ್ಕಾರ ಮತ್ತು ಶರತ್ ಪುರಸ್ಕಾರ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದರು. ಬಂಗಾಳಿ ಸಾಹಿತ್ಯದ ಲೇಖಕರು , ' ಕೋಯೆಲ್ ', ' ಕೋಜಗರ್ ', ' ಮಧುಕರಿ ', ' ಜಂಗಲಮಹಲ್ ', ' ಚರಿಬೇತಿ ' ಇತ್ಯಾದಿಗಳನ್ನು ಒಳಗೊಂಡಂತೆ ಗಮನಾರ್ಹ ಪುಸ್ತಕಗಳನ್ನು ಬರೆದಿದ್ದಾರೆ. ಅವರು ಬಂಗಾಳಿ ಸಾಹಿತ್ಯದಲ್ಲಿ ' ರಿವು ಮತ್ತು ರಿಜುಡಾ ' ಹೆಸರಿನ ಎರಡು ಜನಪ್ರಿಯ ಕಾಲ್ಪನಿಕ ಪಾತ್ರಗಳ ಸೃಷ್ಟಿಕರ್ತ. Current Affairs Quiz - October, 2021     2. ಇತ್ತೀಚೆಗೆ ಭಾರತ ಮತ್ತು ಅಲ್ಜೀರಿಯಾ ನಡುವಿನ ನೌಕಾ ವ್ಯಾಯಾಮವನ್ನು ಎಲ್ಲಿ ನಡೆಸಲಾಯಿತು ? [A] ಬಂಗಾಳ ಕೊಲ್ಲಿ [B] ಅರೇಬಿಯನ್ ಸಮುದ್ರ [C] ಹಿಂದೂ ಮಹಾಸಾಗರ [D] ಮೆಡಿಟರೇನಿಯನ್ ಸಮುದ್ರ answar ಸರಿಯಾದ ಉತ್ತರ:   ಡಿ [ಮೆಡಿಟರೇನಿಯನ್ ಸಮುದ್ರ] ಟಿಪ್ಪಣಿಗಳು: ಇತ್ತ...

ಭಾರತದಲ್ಲಿ ಆರ್ಥಿಕ ಉದಾರೀಕರಣ, ಪರಿಕಲ್ಪನೆ, ಉದ್ದೇಶ, ಪರಿಣಾಮಗಳು

ಭಾರತದಲ್ಲಿನ ಆರ್ಥಿಕ ಉದಾರೀಕರಣವು ಬೆಳವಣಿಗೆಯನ್ನು ಉತ್ತೇಜಿಸಲು , ಹೂಡಿಕೆಗಳನ್ನು ಆಕರ್ಷಿಸಲು ಮತ್ತು ದೇಶದ ಉದ್ಯಮಶೀಲತಾ ಮನೋಭಾವವನ್ನು ಹೊರಹಾಕಲು ವೇದಿಕೆಯನ್ನು ಸ್ಥಾಪಿಸಿತು.   ಆರ್ಥಿಕ ಉದಾರೀಕರಣದ ಪರಿಕಲ್ಪನೆಯನ್ನು ಇಲ್ಲಿ ತಿಳಿಯಿರಿ.   ಭಾರತದಲ್ಲಿ ಆರ್ಥಿಕ ಉದಾರೀಕರಣ ಭಾರತದ ಆರ್ಥಿಕ ಅಭಿವೃದ್ಧಿಯ ಇತಿಹಾಸದಲ್ಲಿ , ಆರ್ಥಿಕ ಉದಾರೀಕರಣದ ಪ್ರಾರಂಭದೊಂದಿಗೆ ಮಹತ್ವದ ತಿರುವು ಬಂದಿತು.   ಈ ಪರಿವರ್ತಕ ಯುಗವು ಹಿಂದಿನ ಕಾಲದಿಂದ ನಿರ್ಗಮನವನ್ನು ಗುರುತಿಸಿತು ಮತ್ತು ದೇಶದ ಆರ್ಥಿಕ ಭೂದೃಶ್ಯವನ್ನು ಮರುರೂಪಿಸುವ ಗುರಿಯನ್ನು ಹೊಂದಿರುವ ಸುಧಾರಣೆಗಳ ಸರಣಿಯನ್ನು ತಂದಿತು.   ಹೊಸ ನೀತಿಗಳು ಮತ್ತು ಕ್ರಮಗಳ ಅಳವಡಿಕೆಯೊಂದಿಗೆ , ಭಾರತವು ಮುಕ್ತತೆ , ಅನಿಯಂತ್ರಣ ಮತ್ತು ಜಾಗತಿಕ ಆರ್ಥಿಕತೆಯೊಂದಿಗೆ ಏಕೀಕರಣದ ಕಡೆಗೆ ಪ್ರಯಾಣವನ್ನು ಪ್ರಾರಂಭಿಸಿತು.   ಭಾರತದಲ್ಲಿ ಆರ್ಥಿಕ ಉದಾರೀಕರಣದ ಯುಗವು ಆಳವಾದ ಬದಲಾವಣೆಗಳಿಗೆ , ಬೆಳವಣಿಗೆಯನ್ನು ಉತ್ತೇಜಿಸಲು , ಹೂಡಿಕೆಗಳನ್ನು ಆಕರ್ಷಿಸಲು ಮತ್ತು ದೇಶದ ಉದ್ಯಮಶೀಲತಾ ಮನೋಭಾವವನ್ನು ಹೊರಹಾಕಲು ವೇದಿಕೆಯನ್ನು ಸ್ಥಾಪಿಸಿತು. ಇದರ ಬಗ್ಗೆ ಓದಿ:   ಭಾರತದಲ್ಲಿ LPG ಸುಧಾರಣೆಗಳು ಉದಾರೀಕರಣದ ಪರಿಕಲ್ಪನೆ ಉದಾರೀಕರಣದ ಪರಿಕಲ್ಪನೆಯು ಆರ್ಥಿಕತೆಯ ವಿವಿಧ ವಲಯಗಳಲ್ಲಿನ ಸರ್ಕಾರದ ನಿಯಮಗಳು ಮತ್ತು ನಿರ್ಬಂಧಗಳ ಸಡಿಲಿಕೆಯನ್ನು ಸೂಚಿಸುತ್ತದೆ.   ಇದು ವ...

ಭಾರತ ಸರ್ಕಾರದ ಕಾಯಿದೆ, 1858: ಪ್ರಮುಖ ಲಕ್ಷಣಗಳು

  ಕಂಪನಿಯ ಆಡಳಿತವನ್ನು ಕೊನೆಗೊಳಿಸಲು 1858 ರ ಭಾರತ ಸರ್ಕಾರದ ಕಾಯಿದೆಯನ್ನು ಅಂಗೀಕರಿಸಲಾಯಿತು ಮತ್ತು ಅದನ್ನು 1857 ರ ದಂಗೆಯ ಪರಿಣಾಮವಾಗಿ ಬ್ರಿಟಿಷ್ ಕಿರೀಟಕ್ಕೆ ವರ್ಗಾಯಿಸಲಾಯಿತು. ಭಾರತದ ಬ್ರಿಟಿಷ್ ಗವರ್ನರ್-ಜನರಲ್‌ಗೆ ವೈಸ್‌ರಾಯ್ ಎಂಬ ಬಿರುದನ್ನು ನೀಡಲಾಯಿತು , ಅವರು ರಾಜನ ಪ್ರತಿನಿಧಿಯಾದರು.   ಆಗಸ್ಟ್ 1858 ರಲ್ಲಿ , ಬ್ರಿಟಿಷ್ ಸಂಸತ್ತು ಕಂಪನಿಯ ಆಡಳಿತವನ್ನು ಕೊನೆಗೊಳಿಸುವ ಕಾಯಿದೆಯನ್ನು ಅಂಗೀಕರಿಸಿತು.   ಭಾರತದಲ್ಲಿ ಬ್ರಿಟಿಷ್ ಸರ್ಕಾರದ ನಿಯಂತ್ರಣವನ್ನು ಬ್ರಿಟಿಷ್ ಕಿರೀಟಕ್ಕೆ ವರ್ಗಾಯಿಸಲಾಯಿತು.   ಈ ಸಮಯದಲ್ಲಿ , ವಿಕ್ಟೋರಿಯಾ ಬ್ರಿಟನ್ನಿನ ರಾಣಿಯಾಗಿದ್ದಳು.   ಬ್ರಿಟನ್‌ನಲ್ಲಿನ ಸರ್ವೋಚ್ಚ ಸಂಸ್ಥೆಯು ಬ್ರಿಟಿಷ್ ಸಂಸತ್ತಾಗಿತ್ತು , ಇದಕ್ಕೆ ಬ್ರಿಟಿಷ್ ಸರ್ಕಾರವು ಜವಾಬ್ದಾರನಾಗಿದ್ದನು.   ಆದಾಗ್ಯೂ , ಬ್ರಿಟಿಷ್ ಸರ್ಕಾರದ ಎಲ್ಲಾ ಚಟುವಟಿಕೆಗಳನ್ನು ರಾಜನ ಹೆಸರಿನಲ್ಲಿ ನಡೆಸಲಾಯಿತು.   ರಾಜ್ಯ ಕಾರ್ಯದರ್ಶಿ ಎಂದು ಕರೆಯಲ್ಪಡುವ ಬ್ರಿಟಿಷ್ ಸರ್ಕಾರದ ಮಂತ್ರಿಯನ್ನು ಭಾರತ ಸರ್ಕಾರದ ಜವಾಬ್ದಾರಿಯನ್ನು ವಹಿಸಲಾಯಿತು.   ಬ್ರಿಟಿಷ್ ಸರ್ಕಾರವು ಸಂಸತ್ತಿಗೆ ಜವಾಬ್ದಾರರಾಗಿದ್ದರಿಂದ , ಭಾರತದ ಸರ್ವೋಚ್ಚ ಸಂಸ್ಥೆಯು ಬ್ರಿಟಿಷ್ ಸಂಸತ್ತಾಗಿತ್ತು.   ಭಾರತದ ಬ್ರಿಟಿಷ್ ಗವರ್ನರ್-ಜನರಲ್‌ಗೆ ಈಗ ವೈಸರಾಯ್ ಎಂಬ ಬಿರುದನ್ನು ನೀಡಲಾಯಿತು , ಅಂದರೆ ರಾಜನ ಪ್ರತಿನಿಧಿ. ...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.