mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header
Showing posts with label study material. Show all posts
Showing posts with label study material. Show all posts

Sunday, 2 May 2021

Gk nots fundamental duties

 ಮೂಲಭೂತ ಕರ್ತವ್ಯ ಎಂದರೆ, ಪ್ರತಿಯೊಬ್ಬ ವ್ಯಕ್ತಿಯು ತನ್ನ ದೇಶಕ್ಕಾಗಿ ಮಾಡಬೇಕಾದ ಹೊಣೆ. ಮೂಲಭೂತ ಕರ್ತವ್ಯಗಳ ಪರಿಕಲ್ಪನೆಯನ್ನು ರಷ್ಯಾದಿಂದ ಎರವಲು ಪಡೆಯಲಾಗಿದೆ. 1976ರಲ್ಲಿ ಸಂವಿಧಾನದ 42ನೇ ತಿದ್ದುಪಡಿ ಮೂಲಕ 10 ಮೂಲಭೂತ ಕರ್ತವ್ಯಗಳನ್ನು ಸಂವಿಧಾನದ ಭಾಗ 4ಎ ನಲ್ಲಿ 51ಎ ವಿಧಿ ಅಡಿಯಲ್ಲಿ ಸೇರ್ಪಡೆ ಮಾಡಲಾಯಿತು. 2002ರ 86ನೇ ತಿದ್ದುಪಡಿ, ಅನ್ವಯ 11ನೇ ಕರ್ತವ್ಯವಾಗಿ ಶಿಕ್ಷಣದ ಕರ್ತವನ್ನು ಸೇರ್ಪಡೆ ಮಾಡಲಾಯಿತು. ಪ್ರಸ್ತುತ 11 ಮೂಲಭೂತ ಕರ್ತವ್ಯಗಳಿವೆ.


1) ಸಂವಿಧಾನ, ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು. 

2) ಸ್ವಾತಂತ್ರ್ಯ ಚಳವಳಿಯ ಉನ್ನತ ಆದರ್ಶಗಳನ್ನು ಪಾಲಿಸುವುದು.


3) ಭಾರತದ ಏಕತೆಯನ್ನು ರಕ್ಷಿಸುವುದು.


4) ಮಾತೃ ಭೂಮಿಯನ್ನು ರಕ್ಷಿಸುವುದು.


5) ಭಾರತೀಯರಾದ ನಾವೆಲ್ಲಾ ಒಂದು ಭಾವನೆಯನ್ನು ಬೆಳೆಸುವುದು. 

6) ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಹಾಗೂ ಐತಿಹಾಸಿಕ ಸ್ಮಾರಕಗಳನ್ನು ರಕ್ಷಿಸುವುದು. 

7) ಪ್ರಾಕೃತಿಕ ಪರಿಸರವನ್ನು ಸಂರಕ್ಷಿಸಿ, ಅಭಿವೃದ್ಧಿ ಪಡಿಸುವುದು.


8) ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆಯನ್ನು ಬೆಳೆಸುವುದು. 


9) ಸಾರ್ವಜನಿಕ ಆಸ್ತಿಯನ್ನು ರಕ್ಷಿಸುವುದು ಹಾಗೂ ಹಿಂಸೆಯನ್ನು ತ್ಯಜಿಸುವುದು.


10) ವೈಯಕ್ತಿಕ ಹಾಗೂ ಸಾಮೂಹಿಕ ಚಟುವಟಿಕೆಗಳಲ್ಲಿ ಪ್ರಾವೀಣ್ಯತೆ ಪಡೆದು ದೇಶದ ಪ್ರಗತಿಗೆ ಶ್ರಮಿಸುವುದು.


11) ಎಲ್ಲಾ ತಂದೆ ತಾಯಿಯಂದಿರು ಹಾಗೂ ಪೋಷಕರು 6 ರಿಂದ 14 ವಯಸ್ಸಿನ ಮಕ್ಕಳಿಗೆ ಶಿಕ್ಷಣ ಪಡೆಯುವ ಅವಕಾಶಗಳನ್ನು ಒದಗಿಸುವುದು.

Friday, 30 April 2021

Indian council act 1919


ಭಾರತ ಕೌನ್ಸಿಲ್ ಕಾಯ್ದೆ 1909

ಭಾರತ ಕೌನ್ಸಿಲ್ ಕಾಯ್ದೆ 1909 ಅನ್ನು ಮಾರ್ಲೆ ಮಿಂಟೋ ಸುಧಾರಣೆಗಳು ಎಂದು ಸಹ ಕರೆಯುತ್ತಾರೆ ಈ ಕಾಯ್ದೆ ಜಾರಿಗೆ ಬಂದ ಸಂದರ್ಭದಲ್ಲಿ ಲಾರ್ಡ್ ಮಾರ್ಲೆ ಕಾರ್ಯದರ್ಶಿಯಾಗಿದ್ದರು ಮತ್ತು ಲಾರ್ಡ್ ಮಿಂಟೋ ಭಾರತದ ವೈಸರಾಯ ರಾಗಿದ್ದರು.


 ಕಾಯ್ದೆಯ ಪ್ರಮುಖ ಲಕ್ಷಣಗಳು : 


1. ಈ ಕಾಯ್ದೆಯ ಮೂಲಕ ಕೇಂದ್ರ ಶಾಸನಸಭೆ ಹಾಗೂ ಪ್ರಾಂತೀಯ ಶಾಸನ ಸಭೆಗಳ ಸದಸ್ಯರ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲಾ ಇ ಯಿತು. ಕೇಂದ್ರ ಶಾಸನಸಭೆಯ ಸದಸ್ಯರ ಸಂಖ್ಯೆಯನ್ನು 16 ರಿಂದ 68ಕ್ಕೆ ಹೆಚ್ಚಿಸಲಾಯಿತು. ಅದರಲ್ಲಿ 36 ಮಂದಿ ಸರ್ಕಾರಿ (Official) ಸದಸ್ಯರಾಗಿದ್ದರು ಹಾಗೂ 32 ಮಂದಿ ಸರ್ಕಾರೇತರ (Non-official) ಸದಸ್ಯರಾಗಿದ್ದರು. 32 ಮಂದಿ ಸರ್ಕಾರೇತರ ಸದಸ್ಯರ ಪೈಕಿ 5 ಮಂದಿ ನಾಮಕರಣಗೊಂಡ ಸದಸ್ಯರಾಗಿದ್ದು, ಉಳಿದವರನ್ನು ಪರೋಕ್ಷವಾಗಿ ಚುನಾಯಿಸಲಾಗುತ್ತಿತ್ತು. ಪ್ರಾಂತೀಯ ಶಾಸನ ಸಭೆಗಳ ಸದಸ್ಯರ ಸಂಖ್ಯೆ ಏಕರೂಪವಾಗಿರದೆ ಪ್ರಾಂತ್ಯದಿಂದ ಪ್ರಾಂತ್ಯಕ್ಕೆ ಭಿನ್ನವಾಗಿತ್ತು. 


2. ಕೇಂದ್ರ ಶಾಸನ ಸಭೆಯಲ್ಲಿ ಸರ್ಕಾರಿ ಸದಸ್ಯರು ಬಹುಮತದಲ್ಲಿದ್ದರು. ಆದರೆ ಪ್ರಾಂತೀಯ ಶಾಸನ ಸಭೆಗಳಲ್ಲಿ ಖಾಸಗಿ ಸದಸ್ಯರ (ಸರ್ಕಾರ ತರ ಸದಸ್ಯರ) ಬಹುಮತಕ್ಕೆ ಅವಕಾಶ ನೀಡಲಾಯಿತು.


3. ಶಾಸನ ಸಭೆಗಳ ಅವಧಿಯನ್ನು 3 ವರ್ಷಗಳಿಗೆ ನಿಗದಿಪಡಿಸಲಾಯಿತು.


4. ಶಾಸನ ಸಭೆಗಳ ಅಧಿಕಾರವನ್ನು ಹೆಚ್ಚಿಸಲಾಯಿತು. ಕೇಂದ್ರ ಹಾಗೂ ಪ್ರಾಂತೀಯ ಶಾಸನ ಸಭೆಗಳ ಸದಸ್ಯರಿಗೆ ಪೂರಕ ಪ್ರಶ್ನೆಗಳನ್ನು ಕೇಳುವ, ನಿರ್ಣಯಗಳನ್ನು ಮಂಡಿಸುವ ಹಾಗೂ ಆಯವ್ಯಯ ಪಟ್ಟಿಯನ್ನು ಕುರಿತು ಚರ್ಚಿಸುವ ಅಧಿಕಾರ ನೀಡಲಾಯಿತು.


5. ವೈಸ್‌ರಾಯ್‌ರವರ ಕಾರ್ಯ ನಿರ್ವಾಹಕ ಸಮಿತಿಗೆ ಒಬ್ಬ ಭಾರತೀಯನನ್ನು ನಾಮಕರಣ ಮಾಡಲು ಪ್ರಥಮ ಬಾರಿಗೆ ಅವಕಾಶ ನೀಡಲಾಯಿತು. ಸತ್ಯೇಂದ್ರ ಪ್ರಸಾದ್‌ ಸಿನ್ಹಾರವರು ವೈಸ್‌ರಾಯ್‌ರವರ ಕಾರ್ಯ ನಿರ್ವಾಹಕ ಸಮಿತಿಗೆ ಸದಸ್ಯರಾಗಿ ನಾಮಕರಣಗೊಂಡ ಪ್ರಥಮ ಭಾರತೀಯರಾಗಿದ್ದಾರೆ. ಅವರನ್ನು ಕಾನೂನು ಸದಸ್ಯರಾಗಿ ನೇಮಿಸಲಾಯಿತು.


6. ಬಾಂಬೆ, ಮದ್ರಾಸ್ ಮತ್ತು ಬೆಂಗಾಳ ಪ್ರಾಂತ್ಯಗಳಲ್ಲಿ ಕಾರ್ಯ ನಿರ್ವಾಹಕ ಕೌನ್ಸಿಲರ್‌ಗಳ ಸಂಖ್ಯೆಯನ್ನು 4ಕ್ಕೆ ಏರಿಸಲಾಯಿತು. ಈ ನಾಲ್ವರ ಪೈಕಿ ಇಬ್ಬರು ಕನಿಷ್ಠ 12 ವರ್ಷಗಳ ಕಾಲ ಬ್ರಿಟಿಷ್ ಸರ್ಕಾರದಲ್ಲಿ ಸೇವೆ ಸಲ್ಲಿಸಿರಬೇಕಿತ್ತು.


7. ಪ್ರತ್ಯೇಕ ಮತದಾರ ವರ್ಗದ (Seperate electorate) ಪರಿಕಲ್ಪನೆಯನ್ನು ಒಪ್ಪಿಕೊಳ್ಳುವುದರ ಮೂಲಕ ಮುಸ್ಲಿಮರಿಗೆ ಕೋಮು ಪ್ರಾತಿನಿಧ್ಯ ಪದ್ಧತಿಯನ್ನು ಜಾರಿಗೆ ತರಲಾಯಿತು. ಈ ಪದ್ಧತಿಯ ಪ್ರಕಾರ ಮುಸ್ಲಿಂ ಪ್ರತಿನಿಧಿಗಳು ಮುಸ್ಲಿಂ ಮತದಾರರಿಂದಲೇ ಚುನಾಯಿಸಲ್ಪಡಬೇಕು. ಈ ಪದ್ಧತಿ ಕೋಮುವಾದವನ್ನು ಕಾನೂನುಬದ್ಧಗೊಳಿಸಿತು. ಆದ್ದರಿಂದ ಲಾರ್ಡ್ ಮಿಂಟೋರವರನ್ನು ಕೋಮು ಮತದಾರ ವರ್ಗ (Communal Electorate) ದ ಪಿತಾಮಹ ಎಂದು ಕರೆಯಲಾಗುತ್ತದೆ. ಇಬ


8. ಪ್ರೆಸಿಡೆನ್ಸಿ ಕಾರ್ಪೋರೇಷನ್‌ಗಳಿಗೆ, ವಾಣಿಜ್ಯೋದ್ಯಮಿಗಳಿಗೆ, ವಿಶ್ವವಿದ್ಯಾಲಯಗಳಿಗೆ ಹಾಗೂ ಜಮೀನ್ದಾರರಿಗೆ ಶಾಸನ ಸಭೆಯಲ್ಲಿ ಪ್ರತ್ಯೇಕ ಪ್ರಾತಿನಿಧ್ಯತೆ ನೀಡಲಾಯಿತು.

Tuesday, 27 April 2021

Firsts in the state of Karnataka

 




1) ಮೊದಲ ವಾರ್ತಾ ಪತ್ರಿಕೆ : ಮಂಗಳೂರು ಸಮಾಚಾರ್:-

ಮಂಗಳೂರಿನಿಂದ 1843 ರಲ್ಲಿ ಬಾಸೆಲ್ ಮಿಷನ್‌ನ ಮಿಷನರಿಯಾರ ಹರ್ಮನ್ ಮೊಗ್ಲಿಂಗ್‌ರವರು ಕನ್ನಡ ಮೊದಲ ವಾರ್ತಾ ಪತ್ರಿಕೆಯಾದ ಮಂಗಳೂರು ಸಮಾಚಾರ್ ಅನ್ನು ಪ್ರಕಟಿಸಿದರು.


2) ಕನ್ನಡದ ಮೊದಲ ಮಾಸಪತ್ರಿಕೆ : ಮೈಸೂರು ವೃತ್ತಾಂತ ಬೋಧಿನಿ (Mysore Vrittanta Bodhini) ಇದು ಮೈಸೂರಿನಲ್ಲಿ ಭಾಷ್ಯಂ ಭಾಷ್ಯಾಚಾರ್ಯ ಅವರಿಂದ ಆರಂಭವಾಗಿದೆ. 

3) ಮೊದಲ ದೂರದರ್ಶನ ಪ್ರಸಾರ : ಕಲಬುರಗಿ ,ಕರ್ನಾಟಕದಲ್ಲಿ ಮೊದಲ ಬಾರಿಗೆ 1977 ರಲ್ಲಿ ಕಲಬುರಗಿಯಲ್ಲಿ ದೂರದರ್ಶನ ಕೇಂದ್ರವು ಆರಂಭಗೊಂಡಿತು.


4) ಕರ್ನಾಟಕದ ಮೊದಲ ವಿಮಾನ ನಿಲ್ದಾಣ - ಬಳ್ಳಾರಿ ಕರ್ನಾಟಕದಲ್ಲಿ ಮೊದಲ ವಿಮಾನ ನಿಲ್ದಾಣವು ಬಳ್ಳಾರಿಯಲ್ಲಿ 1932 ರಲ್ಲಿ ಆರಂಭವಾಯಿತು. ಈ ವಿಮಾನ ನಿಲ್ದಾಣವು ಕರಾಚಿ-ಅಹಮದಾಬಾದ್ ಮುಂಬೈ-ಬಳ್ಳಾರಿ ಮತ್ತು ಮದ್ರಾಸ್ ವಿಮಾನ ಸೇವೆಗೆ ಸಂಪರ್ಕವಾಗಿತ್ತು.

 * ಸುಧಾಮ ಎಂಬುದು ಸಂಸ್ಕೃತ ಭಾಷೆಯಲ್ಲಿ ಮೈಸೂರಿನಿಂದ

ಪ್ರಕಟವಾಗುತ್ತಿರುವ ದೈನಂದಿನ ಏಕೈಕ ಪತ್ರಿಕೆಯಾಗಿದೆ.

Niti aayog in kannada gk

 



ವಿಸ್ತ್ರತ ರೂಪ: National Institution

for Transforming India (NITI)


* ಮೊದಲ ಹೆಸರು: ರಾಷ್ಟ್ರೀಯ ಯೋಜನಾ Goioen- (NPC-National Planning Comission) (1950 ಮಾರ್ಚ್ 15 ರಲ್ಲಿ ಸ್ಥಾಪನೆ-ಅಂದಿನ ಪ್ರಧಾನಿ ಜವಾಹರ್‌ಲಾಲ್ ನೆಹರು


* ಮರುನಾಮಕರಣ ವರ್ಷ: 2015ರ ಜನವರಿ 1


ಕೇಂದ್ರ ಕಚೇರಿ: ನವದೆಹಲಿ


Official website :-http://niti.gov.in/


 ವಿಶೇಷತೆ: ಸಂವಿಧಾನೇತರ ಸಂಸ್ಥೆ, ಥಿಂಕ್ ಟ್ಯಾಂಕ್ ಸಂಸ್ಥೆ, ನವ ಭಾರತ ನಿರ್ಮಾಣದ ಮುಂದಾಳು ಹಾಗೂ ಸುಸ್ಥಿರ ಅಭಿವೃದ್ಧಿ

ಗುರಿಗಳನ್ನು ಅನುಷ್ಠಾನಕ್ಕೆ ತರುತ್ತಿರುವ ನೋಡಲ್ ಘಟಕವಾಗಿದೆ. ಆಯೋಗದ ಪದನಿಮಿತ್ತ ಅಧ್ಯಕ್ಷರು: ಪ್ರಧಾನ ಮಂತ್ರಿ (ಪ್ರಸ್ತುತ ಹಾಗೂ


ಮೊದಲ ಅಧ್ಯಕ್ಷರು : ನರೇಂದ್ರ ಮೋದಿ ಉಪಾಧ್ಯಕ್ಷರು: ಡಾ|| ರಾಜೀವ್ ಕುಮಾರ್ (ಪ್ರಸ್ತುತ), (ಆಯೋಗದ


ಮೊದಲ ಉಪಾಧ್ಯಕ್ಷ - ಅರವಿಂದ್

ಪನಗರಿಯಾ)

Sunday, 25 April 2021

quad group countries

 



ಇದರ ಅರ್ಥ 'ಚತುರ್ಭುಜ ಭದ್ರತಾ ಸಂವಾದ'. ಇದು ಭಾರತ, ಯುಎಸ್, ಜಪಾನ್ ಮತ್ತು ಆಸ್ಟ್ರೇಲಿಯಾ ನಡುವಿನ ಬಹುಪಕ್ಷೀಯ ಒಪ್ಪಂದವಾಗಿದೆ. ಈ ಸಂಸ್ಥೆ ಮೂಲತಃ ಏಷ್ಯಾ-ಪೆಸಿಫಿಕ್ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಪ್ರದೇಶದಲ್ಲಿ ಶಾಂತಿಯನ್ನು ಪುನಃಸ್ಥಾಪಿಸುವುದು ಮತ್ತು ಸಮತೋಲನವನ್ನು ಕಾಯ್ದುಕೊಳ್ಳುವುದು ಇದರ ಉದ್ದೇಶ. 2007ರಲ್ಲಿ, ಅಂದಿನ ಜಪಾನ್‌ನ ಪ್ರಧಾನಿ ಶಿಂಜೊ ಅಬೆ QUAD ಅನ್ನು ಪ್ರಸ್ತಾಪಿಸಿದರು. ಈ ಪ್ರಸ್ತಾಪವನ್ನು ಭಾರತ, ಯುಎಸ್ ಮತ್ತು ಆಸ್ಟ್ರೇಲಿಯಾ ಬೆಂಬಲಿಸಿದವು. 2019ರಲ್ಲಿ ಭಾರತ, ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾದ ವಿದೇಶಾಂಗ ಸಚಿವರು ಭೇಟಿಯಾದರು. ಇದರ ನಂತರ, ನಾಲ್ಕು ದೇಶಗಳ ಉನ್ನತ ನಾಯಕರ ನಡುವೆ ಮೊದಲ ಶೃಂಗಸಭೆಯನ್ನು 2021ರ ಮಾರ್ಚ್ 12ರಂದು ಆನ್‌ಲೈನ್ ಆಗಿ ಆಯೋಜಿಸಲಾಯಿತು.


ಆಡು ಭಾಷೆಯಲ್ಲಿ ಈ ನಾಲ್ಕು ದೇಶಗಳ ಕೂಟವನ್ನು ಕ್ವಾಡ್ (ನಾಲ್ವರ ಕೂಟ) ಎಂದು ಕರೆಯಲಾಗುತ್ತದೆ. ಕ್ವಾಡ್ ಸದಸ್ಯರ ಪ್ರಕಾರ ಈ ಕೂಟವನ್ನು ಅಂತರರಾಷ್ಟ್ರೀಯ ಕಾನೂನುಗಳ ಬಗ್ಗೆ ಗೌರವ ಹಾಗೂ ನಿಯಮ ಬದ್ಧ ಆಳ್ವಿಕೆಯ ಆಧಾರದಲ್ಲಿ ಕಟ್ಟಿಕೊಳ್ಳಲಾಗಿದೆ.

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

ಕ್ರೇ-1 cray-1 super computer

ಕ್ರೇ-1 ಅನ್ನು 1976 ರಲ್ಲಿ ಸೆಮೌರ್ ಕ್ರೇ ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಿದ ಸೂಪರ್‌ಕಂಪ್ಯೂಟರ್. ಇದು ವೆಕ್ಟರ್ ಸಂಸ್ಕರಣೆಯನ್ನು ಬಳಸಿದ ಮೊದಲ ಸೂಪರ್‌ಕಂಪ್ಯೂಟರ್ ಆಗಿದ್ದು, ಇದು ಏಕಕಾಲದಲ್ಲಿ ದತ್ತಾಂಶದ ದೊಡ್ಡ ಶ್ರೇಣಿಗಳ ಮೇಲೆ ಲೆಕ್ಕಾಚಾರಗಳನ್ನು ಮಾಡಲು ಸಾಧ್ಯವಾಗಿಸಿತು. ಕ್ರೇ-1 ಲಿಕ್ವಿಡ್ ಕೂಲಿಂಗ್ ವ್ಯವಸ್ಥೆಯನ್ನು ಬಳಸಿದ ಮೊದಲ ಸೂಪರ್‌ಕಂಪ್ಯೂಟರ್ ಆಗಿದೆ, ಇದು ಅಧಿಕ ಬಿಸಿಯಾಗದೆ ಹೆಚ್ಚಿನ ವೇಗದಲ್ಲಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟಿತು. ಕ್ರೇ-1 ಅತ್ಯಂತ ದೊಡ್ಡ ಕಂಪ್ಯೂಟರ್ ಆಗಿತ್ತು, ಆರು ಅಡಿ ಎತ್ತರ ಮತ್ತು 5,000 ಪೌಂಡ್‌ಗಳಿಗಿಂತ ಹೆಚ್ಚು ತೂಕವಿತ್ತು. ಹೆಚ್ಚಿನ ವೇಗದ ಪ್ರೊಸೆಸರ್, ಹೆಚ್ಚಿನ ಪ್ರಮಾಣದ ಮೆಮೊರಿ ಮತ್ತು ವಿಶೇಷವಾದ ಇನ್‌ಪುಟ್/ಔಟ್‌ಪುಟ್ (I/O) ವ್ಯವಸ್ಥೆಗಳನ್ನು ಒಳಗೊಂಡಂತೆ ಕಸ್ಟಮ್-ವಿನ್ಯಾಸಗೊಳಿಸಿದ ಘಟಕಗಳೊಂದಿಗೆ ಇದನ್ನು ನಿರ್ಮಿಸಲಾಗಿದೆ. Cray-1 ಅನ್ನು ಸಂಕೀರ್ಣವಾದ ವೈಜ್ಞಾನಿಕ ಲೆಕ್ಕಾಚಾರಗಳನ್ನು ಮಾಡಲು ವಿನ್ಯಾಸಗೊಳಿಸಲಾಗಿದೆ ಮತ್ತು ಹವಾಮಾನ ಮುನ್ಸೂಚನೆ, ಪರಮಾಣು ಸಂಶೋಧನೆ ಮತ್ತು ದ್ರವ ಡೈನಾಮಿಕ್ಸ್ ಸಿಮ್ಯುಲೇಶನ್‌ಗಳು ಸೇರಿದಂತೆ ವ್ಯಾಪಕ ಶ್ರೇಣಿಯ ಅನ್ವಯಿಕೆಗಳಿಗೆ ಬಳಸಲಾಯಿತು. ಕ್ರೇ-1 ನ ಅತ್ಯಂತ ಗಮನಾರ್ಹ ವೈಶಿಷ್ಟ್ಯವೆಂದರೆ ಅದರ ವಿಶಿಷ್ಟ ವಿನ್ಯಾಸ. ಇದನ್ನು C ಆಕಾರದಲ್ಲಿ ನಿರ್ಮಿಸಲಾಗಿದೆ, ಪ್ರೊಸೆಸರ್ ಮತ್ತು ಮೆಮೊರಿಯು ಯಂತ್ರದ ಮಧ್ಯಭಾಗದಲ್ಲಿದೆ ಮತ್ತು I/O ಸಿಸ್ಟಮ್‌ಗಳನ್...

ಭಾರತದ ನೆರೆಯ ರಾಷ್ಟ್ರಗಳು, ಪಟ್ಟಿ, ನಕ್ಷೆ, ರಾಜಧಾನಿಗಳು, ಧ್ವಜಗಳು

ಭಾರತದ ನೆರೆಯ ರಾಷ್ಟ್ರಗಳು ಚೀನಾ, ನೇಪಾಳ, ಭೂತಾನ್, ಪಾಕಿಸ್ತಾನ, ಮ್ಯಾನ್ಮಾರ್, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ. UPSC ಗಾಗಿ ಭಾರತದ ನೆರೆಯ ರಾಷ್ಟ್ರಗಳು ಮತ್ತು ಅವುಗಳ ರಾಜಧಾನಿಗಳ ಸಂಪೂರ್ಣ ವಿವರಗಳನ್ನು ಪರಿಶೀಲಿಸಿ     ಪರಿವಿಡಿ ಭಾರತದ ನೆರೆಯ ರಾಷ್ಟ್ರಗಳು ವಿಶ್ವದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾದ ಭಾರತವು ಅರೇಬಿಯನ್ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಸಮೀಪದಲ್ಲಿದೆ. ಚೀನಾ, ನೇಪಾಳ, ಭೂತಾನ್, ಪಾಕಿಸ್ತಾನ, ಮ್ಯಾನ್ಮಾರ್, ಶ್ರೀಲಂಕಾ ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಭಾರತದ ಗಡಿಯಲ್ಲಿರುವ ದೇಶಗಳು. ಮ್ಯಾನ್ಮಾರ್ ಮತ್ತು ಶ್ರೀಲಂಕಾ ಭಾರತದೊಂದಿಗೆ ಕರಾವಳಿ ಗಡಿಯನ್ನು ಹಂಚಿಕೊಂಡಿವೆ. ಭಾರತದ ಭೂ ಗಡಿಯು 15,106.7 ಕಿಮೀ ಉದ್ದವಾಗಿದೆ ಮತ್ತು ಅದರ ಕರಾವಳಿ 7,516.6 ಕಿಮೀ ಉದ್ದವಾಗಿದೆ. ಏಕೈಕ ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ಚೀನಾ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದೊಂದಿಗೆ ಮೂರು ಅಂತಾರಾಷ್ಟ್ರೀಯ ಗಡಿಗಳನ್ನು ಹಂಚಿಕೊಂಡಿದೆ. ಈ ಲೇಖನದಲ್ಲಿ ನಾವು ಭಾರತದ ಗಡಿಯಲ್ಲಿರುವ ನೆರೆಯ ದೇಶಗಳ ಪಟ್ಟಿಯನ್ನು ಒದಗಿಸುತ್ತಿದ್ದೇವೆ. ಚೀನಾ ಮತ್ತು ರಷ್ಯಾ ನಂತರ, ಭಾರತವು ವಿಶ್ವದ ಮೂರನೇ ಅತಿದೊಡ್ಡ ಅಂತರರಾಷ್ಟ್ರೀಯ ಗಡಿಯನ್ನು ಹೊಂದಿದೆ. ಇದು ವಿಶ್ವದ ಅತ್ಯಂತ ದುರ್ಬಲ ಗಡಿಯಾಗಿದೆ, ತೀವ್ರ ಹವಾಮಾನ ಪರಿಸ್ಥಿತಿಗಳಿಂದ ಒಳನುಸುಳುವಿಕ...

ರಾಜ್ಯ ನೀತಿಯ ನಿರ್ದೇಶನ ತತ್ವಗಳು

  ಆರ್ಟಿಕಲ್ 36:  ವ್ಯಾಖ್ಯಾನ  - ಈ ಭಾಗದಲ್ಲಿ, ಸಂದರ್ಭಕ್ಕೆ ಅಗತ್ಯವಿಲ್ಲದಿದ್ದಲ್ಲಿ, "ರಾಜ್ಯ" ಭಾಗ III ರಲ್ಲಿ ಅದೇ ಅರ್ಥವನ್ನು ಹೊಂದಿದೆ. ಲೇಖನ 37:  ಈ ಭಾಗದಲ್ಲಿರುವ ತತ್ವಗಳ ಅನ್ವಯ  .  ಈ ಭಾಗದಲ್ಲಿ ಒಳಗೊಂಡಿರುವ ನಿಬಂಧನೆಗಳನ್ನು ಯಾವುದೇ ನ್ಯಾಯಾಲಯದಿಂದ ಜಾರಿಗೊಳಿಸಲಾಗುವುದಿಲ್ಲ, ಆದರೆ ಅದರಲ್ಲಿರುವ ತತ್ವಗಳು ದೇಶದ ಆಡಳಿತದಲ್ಲಿ ಮೂಲಭೂತವಾಗಿವೆ ಮತ್ತು ಕಾನೂನುಗಳನ್ನು ರಚಿಸುವಲ್ಲಿ ಈ ತತ್ವಗಳನ್ನು ಅನ್ವಯಿಸುವುದು ರಾಜ್ಯದ ಕರ್ತವ್ಯವಾಗಿರುತ್ತದೆ. ಅನುಚ್ಛೇದ 38:  ಜನರ ಕಲ್ಯಾಣದ ಪ್ರಚಾರಕ್ಕಾಗಿ ಸಾಮಾಜಿಕ ವ್ಯವಸ್ಥೆಯನ್ನು ಭದ್ರಪಡಿಸಲು ರಾಜ್ಯ. ನ್ಯಾಯ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ, ರಾಷ್ಟ್ರೀಯ ಜೀವನದ ಎಲ್ಲಾ ಸಂಸ್ಥೆಗಳಿಗೆ ತಿಳಿಸುವ ಸಾಮಾಜಿಕ ಕ್ರಮವನ್ನು ಪರಿಣಾಮಕಾರಿಯಾಗಿ ರಕ್ಷಿಸುವ ಮತ್ತು ರಕ್ಷಿಸುವ ಮೂಲಕ ಜನರ ಕಲ್ಯಾಣವನ್ನು ಉತ್ತೇಜಿಸಲು ರಾಜ್ಯವು ಶ್ರಮಿಸಬೇಕು. ರಾಜ್ಯವು ನಿರ್ದಿಷ್ಟವಾಗಿ, ಆದಾಯದಲ್ಲಿನ ಅಸಮಾನತೆಗಳನ್ನು ಕಡಿಮೆ ಮಾಡಲು ಶ್ರಮಿಸಬೇಕು ಮತ್ತು ವ್ಯಕ್ತಿಗಳ ನಡುವೆ ಮಾತ್ರವಲ್ಲದೆ ವಿವಿಧ ಪ್ರದೇಶಗಳಲ್ಲಿ ವಾಸಿಸುವ ಅಥವಾ ವಿವಿಧ ವೃತ್ತಿಗಳಲ್ಲಿ ತೊಡಗಿರುವ ಜನರ ಗುಂಪುಗಳ ನಡುವೆಯೂ ಸಹ ಸ್ಥಾನಮಾನ, ಸೌಲಭ್ಯಗಳು ಮತ್ತು ಅವಕಾಶಗಳಲ್ಲಿನ ಅಸಮಾನತೆಗಳನ್ನು ತೊಡೆದುಹಾಕಲು ಪ್ರಯತ್ನಿಸಬೇಕು. ವಿಧಿ 39:  ರಾಜ್ಯವು ಅನುಸರಿಸಬೇಕಾದ ನೀತಿಯ ಕೆಲವು ತತ್ವಗಳು....

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.